Property: ಬೆಂಗಳೂರಿನ ಈ ಆಸ್ತಿಗಳಿಗೆ ಫೈನಲ್ ನೋಟಿಸ್ ಕೊಡಲಿದೆ ಬಿಬಿಎಂಪಿ!
Property: ಬೆಂಗಳೂರಿನಲ್ಲಿ ಈ ಬಾರಿಯೂ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರಿನ ಹಲವು ಕಡೆಗಳಲ್ಲಿ ನೀರಿನ ಸಮಸ್ಯೆಯನ್ನು ಪರಿಹರಿಸುವುದಕ್ಕೆ ಜಲಮಂಡಳಿ ಮುಂದಾಗಿದೆ. ಇದೀಗ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಕಡಿವಾಣ ಹಾಕುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹ ಕೈಜೋಡಿಸಿದೆ. ಇದರೊಂದಿಗೆ ನಿಯಮ ಉಲ್ಲಂಘನೆ ಮಾಡಿರುವ ಆಸ್ತಿಗಳಿಗೆ ಫೈನಲ್ ನೋಟಿಸ್ ಕೊಡುವುದಕ್ಕೂ ನಿರ್ಧರಿಸಲಾಗಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ಬೆಂಗಳೂರಿನಲ್ಲಿ ಕಳೆದ ಬಾರಿ ಭಾರೀ ಬಿಸಿಲಿನಿಂದಾಗಿ ನೀರಿನ ಸಮಸ್ಯೆ ತೀವ್ರವಾಗಿತ್ತು. ಈ ಬಾರಿಯೂ ರಾಜ್ಯದಲ್ಲಿ ಬಿರುಬಿಸಿಲು ಜೋರಾಗಿದ್ದು. ನೀರಿನ ಸಮಸ್ಯೆ ಎದುರಾಗುವ ಆತಂಕ ಇದೆ. ಇದೀಗ ಈ ಸಮಸ್ಯೆಯನ್ನು ಮೂಲ ಹಂತದಲ್ಲೇ ಪರಿಹರಿಸುವುದಕ್ಕೆ ಬಿಬಿಎಂಪಿ ನಿರ್ಧರಿಸಿದ್ದು. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯ ವ್ಯಾಪ್ತಿಯಲ್ಲಿ ಬರುವ ಕೆರೆಗಳ ಒತ್ತುವರಿ ತೆರವುಗೊಳಿಸಲು ಸೂಕ್ತ ಕ್ರಮಗಳಲು ಮುಂದಾಗಿರುವುದಾಗಿ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಹೈಕೋರ್ಟ್ನ ರಿಟ್ ಅರ್ಜಿ ಸಂಖ್ಯೆ:38401/2014 ರ ದೈನಂದಿನ ನಿರ್ದೇಶನದಂತೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವಂತಹ ಕೆರೆಗಳ ಒತ್ತುವರಿಯನ್ನು ತೆರವುಗೊಳಿಸುವ ಕುರಿತು ಪಾಲಿಕೆ ಕೇಂದ್ರ ಕಚೇರಿಯ ನೌಕರರ ಭವನದ ಸಂಭಾಗಣದಲ್ಲಿ ಸಭೆಯನ್ನು ನಡೆಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 183 ಕೆರಗಳು ಬರಲಿವೆ. ಈ ಪೈಕಿ ಕಂದಾಯ ಇಲಾಖೆಯ ಭೂಮಾಪಕರು 168 ಕೆರೆಗಳಲ್ಲಿ ಸಮೀಕ್ಷೆ ಮಾಡಿದ್ದಾರೆ. ಈ ಪೈಕಿ 28 ಕೆರೆಗಳಲ್ಲಿ ಯಾವುದೇ ಒತ್ತುವರಿಯಾಗಿರುವುದಿಲ್ಲ ಎಂದು ವರದಿ ನೀಡಿದೆ. 26 ಕೆರೆಗಳಲ್ಲಿ ಸರ್ಕಾರಿ ಒತ್ತುವರಿಗಳಾಗಿರುವ ಕುರಿತು ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಉಳಿದ 114 ಕೆರೆಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯ ಕಾರ್ಯಪಾಲಕ ಎಂಜಿನಿಯರ್ಗಳಿಗೆ ಜವಾಬ್ದಾರಿ ನೀಡಲಾಗಿದೆ. 114 ಕೆರೆಗಳ ಪೈಕಿ ವಲಯಗಳ ಕಾರ್ಯಪಾಲಕ ಅಧಿಕಾರಿಗಳಿಗೆ ಆಯಾ ವಲಯವಾರು ಕೆರೆಗಳ ನಕ್ಷೆ ನೀಡಲಾಗಿದೆ. ಅದರಂತೆ ಕೆರೆಗಳನ್ನು ಒತ್ತುವರಿ ಮಾಡಿರುವವರಿಗೆ ನೋಟಿಸ್ ಜಾರಿ ಮಾಡಿ, ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಫೈನಲ್ ನೋಟಿಸ್ ಜಾರಿ: ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಹಾಗೂ ಕೆರೆಗಳನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿರುವ ಆಸ್ತಿಗಳ ಆಸ್ತಿದಾರರಿಗೆ ಫೈನಲ್ ನೋಟಿಸ್ ಕೊಡುವುದಕ್ಕೆ ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಎಲ್ಲಾ ವಲಯದ ಅಧಿಕಾರಿಗಳು ಸಹ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿಬಿಎಂಪಿಯ ಅಧಿಕಾರಿಗಳಿಗೆ ಖಡಕ್ ನಿರ್ದೇಶನ ನೀಡಿದ್ದಾರೆ.
ಈ ವೇಳೆ ಅರಣ್ಯ, ಪರಿಸರ ಹಾಗೂ ಹವಾಮಾನ ವೈಪರೀತ್ಯ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ದಿಗ್ವಿಜಯ್ ಬೋಡ್ಕೆ, ಕೆರೆಗಳ ವಿಭಾಗದ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಕಾರ್ಯಪಾಲಕ ಎಂಜಿನಿಯರ್, ಕಂದಾಯ ವಿಭಾಗದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ












Click it and Unblock the Notifications