ಬೆಂಗಳೂರಿನ ಈ ಆಸ್ತಿದಾರರಿಗೆ ಬಿಬಿಎಂಪಿ ಬಿಗ್ ಶಾಕ್! ನೆಲಮಾಳಿಗೆಯಲ್ಲಿ ಈ ವಿಚಾರಕ್ಕೆ ಬ್ರೇಕ್..

Illegal Basement Shops: ಬೆಂಗಳೂರಿನ ಕೆಲವು ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅನಧಿಕೃತ ಆಸ್ತಿಗಳು ಹಾಗೂ ಕಟ್ಟಡ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಾಣ ಮಾಡಿರುವ ಕಟ್ಟಡಗಳ ಮೇಲೆ ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಆಸ್ತಿಗಳ ನೆಲ ಮಾಳಿಗೆಯಲ್ಲಿ ಕೆಲವೊಂದು ವಿಚಾರಗಳಿಗೆ ಬ್ರೇಕ್ ಹಾಕಲಾಗಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರಿನ ನಿರ್ದಿಷ್ಟ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಮಹದೇವಪುರ ವಲಯ ವ್ಯಾಪ್ತಿಯಲ್ಲಿ ತಳಮಹಡಿ (ಬೆಸ್ಮೆಂಟ್)ಗಳಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮಳಿಗೆಗಳಿಗೆ ನೋಟೀಸ್ ನೀಡಿ ಕಾನೂನು ಕ್ರಮ ಕೈಗೊಳ್ಳಲು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದೇ ಮಾದರಿಯನ್ನು ಬೆಂಗಳೂರಿನ ಇನ್ನುಳಿದ ವಲಯಗಳಿಗೂ ವಿಸ್ತರಿಸುವ ಸಾಧ್ಯತೆ ಇದೆ.

BBMPs big shock to these property owners in Bengalur Break in this basement Property

ಮಹದೇವಪುರ ವಲಯ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು, ಪಾರ್ಕಿಂಗ್‌ಗಾಗಿಯೇ ಸೀಮಿತಿರುವಂತಹ ತಳಮಹಡಿಗಳಲ್ಲಿ ಯಾರೂ ಮಳಿಗೆಗಳನ್ನು ನಿರ್ಮಿಸುವಂತಿಲ್ಲ. ಒಂದೊಮ್ಮೆ ನಿರ್ಮಿಸಿದ್ದಲ್ಲಿ ಅಂತಹವರಿಗೆ ನೋಟಿಸ್ ನೀಡಿ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರತಿ ಕೆರೆಗೆ ಸಮಗ್ರ ಯೋಜನೆ ರೂಪಿಸಿ: ಮಹದೇವಪುರ ವಲಯದಲ್ಲಿ 52 ಕೆರೆಗಳು ಬರಲಿವೆ. ಕೆರೆಯಲ್ಲಿ ಯಾವೆಲ್ಲಾ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು. ಒತ್ತುವರಿಗಳನ್ನು ಗುರುತಿಸುವುದು, ನೀರುಗಾಲುವೆಗಳು ಹಾಗೂ ಜೌಗು ಪ್ರದೇಶಗಳ ಅಭಿವೃದ್ಧಿ ಸೇರಿದಂತೆ ಪ್ರತಿ ಕೆರೆಗೂ ಪ್ರತ್ಯೇಕವಾಗಿ ಸಮಗ್ರ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕಾಮಗಾರಿಗಳ ನಿರ್ವಹಣೆಗೆ ಸಮಿತಿ ರಚಿಸಿ: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಕಾಮಗಾರಿಗಳ ನಿರ್ವಹಣೆಗಾಗಿ ಜಂಟಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆ ಮಾಡಬೇಕು. ಆ ಸಮಿತಿಯ ಮೂಲಕ ಕಾಮಗಾರಿಗಳ ಮಾಹಿತಿಗಾಗಿ ಒಬ್ಬ ಅಧಿಕಾರಿಯನ್ನು ಸಂಪರ್ಕಿಸಿದರೆ ಕೂಡಲೇ ಆ ಮಾಹಿತಿ ಸಿಗುವ ವ್ಯವಸ್ಥೆ ಕಲ್ಪಿಸಲು ವಲಯ ಆಯುಕ್ತರಿಗೆ ಸೂಚಿಸಿದ್ದಾರೆ.

ಟಿ.ಡಿ.ಆರ್ ವಿಚಾರ ಇತ್ಯರ್ಥಪಡಿಸಿ: ಇನ್ನು ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಹೂಡಿ ಜಂಕ್ಷನ್ ನಲ್ಲಿ ಕೆಳಸೇತುವೆ ಕಾಮಗಾರಿ, ಪಣತ್ತೂರು ಎಸ್-ಕ್ರಾಸ್ ಬಳಿ ರಸ್ತೆ ಅಗಲೀಕರಣ ಕಾಮಗಾರಿ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿರುವ ಕಡೆ, ಆಸ್ತಿ ಮಾಲಿಕರ ಜೊತೆ ಮಾತನಾಡಿ ಟಿ.ಡಿ.ಆರ್ ವಿಚಾರ ಇತ್ಯರ್ಥಪಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಹೂಳೆತ್ತಿ ಸ್ವಚ್ಛವಾಗಿರಿಸಿ: ಮಳೆಗಾಲ ಪ್ರಾರಂಭವಾಗುತ್ತಿದೆ. ಬೃಹತ್ ನೀರು ಗಾಲುವೆ ಹಾಗೂ ಸೈಡ್‌ಗಳಲ್ಲಿ ಹೂಳೆತ್ತಿ ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ರಸ್ತೆ ಮೇಲೆ ಬೀಳುವ ಮಳೆ ನೀರು ಸರಾಗವಾಗಿ ಕಾಲುವೆಗಳಿಗೆ ಹರಿದು ಹೂಗುವಂತೆ ಮಾಡಬೇಕು. ಶಿಲ್ಟ್ ಅಂಡ್ ಟ್ರ್ಯಾಕ್ಟರ್ ಗಳನ್ನು ಬಳಸಿಕೊಂಡು ರಸ್ತೆ ಬದಿ, ಗ್ರೇಟಿಂಗ್ ಬಳಿ ಬಿದ್ದಿರುವ ತ್ಯಾಜ್ಯ ಅಥವಾ ಮಣ್ಣು ಸ್ವಚ್ಛವಾಗಿಡಲು ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಹವಾಗದಂತೆ ಕ್ರಮವಹಿಸಿ: ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಸಾಯಿ ಲೇಔಟ್ ನಲ್ಲಿ ಮಳೆಗಾಲದಲ್ಲಿ ಪ್ರವಾಹವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇನ್ನು ಸರ್ಜಾಪುರ ಮುಖ್ಯ ರಸ್ತೆ ಕೊಲಂಬಿಯಾ ಏಷ್ಯಾ ಬಳಿ ರಾಜಕಾಲುವೆ ಕೆಲಸ ಪ್ರಗತಿಯಲ್ಲಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದಿದ್ದಾರೆ.

ಇ-ಖಾತಾ ಮೇಳ ಆಯೋಜಿಸಿ: ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬೃಹತ್ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಈ ಸಂಬಂಧ ಮಹದೇವಪುರ ವಲಯ ವ್ಯಾಪ್ತಿಯಲ್ಲಿಯ ಎರಡೂ ವಿಧಾನ ಸಭಾ ಕ್ಷೇತ್ರಗಳಲ್ಲಿ 'ಬೃಹತ್ ಇ-ಖಾತಾ ಮೇಳ' ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಮಹದೇವಪುರ ವಲಯ ಆಯುಕ್ತರಾದ ರಮೇಶ್ ರವರು ಮಾತನಾಡಿ, ಮಹದೇವಪುರ ವಲಯದಲ್ಲಿ 85 ಸಾವಿರ ವಿದ್ಯುತ್ ಬೀದಿ ದೀಪಗಳು ಬರಲಿದ್ದು, ಹೆಚ್ಚುವರಿಯಾಗಿ 10 ಸಾವಿರ ವಿದ್ಯುತ್ ಕಂಬಗಳನ್ನು ಗುರುತಿಸಲಾಗಿದೆ. ಈ ಪೈಕಿ ಹೊಸದಾಗಿ ವಿದ್ಯುತ್ ದೀಪಗಳು ಅಳವಡಿಸಬೇಕಿದ್ದು, ಅದಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗುವುದು. ಜೊತೆಗೆ ಎಲ್ಲಾ ವಿದ್ಯುತ್ ದೀಪಗಳನ್ನು ಸಮೀಕ್ಷೆ ನಡೆಸಿ ದುರಸ್ತಿಯಿರುವ ವಿದ್ಯುತ್ ದೀಪಗಳನ್ನು ಸರಿಪಡಿಸಲಾಗುವುದೆಂದು ಮಾಹಿತಿ ನೀಡಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಉಪ ಆಯುಕ್ತರಾದ ಗಾಯತ್ರಿ ನಾಯಕ್ ಹಾಗೂ ಮುಖ್ಯ ಎಂಜಿನಿಯರ್ ರಂಗನಾಥ್ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+