ಕೆಂಪೇಗೌಡ ಬಡಾವಣೆ: ಸೈಟ್ ಹಂಚಿಕೆದಾರರ ತಾತ್ಕಾಲಿಕ ಪಟ್ಟಿ ಪ್ರಕಟ
ಬೆಂಗಳೂರು, ಜೂನ್ 30: ನಾಡಪ್ರಭು ಕೆಂಪೇಗೌಡ ಬಡಾವಣೆ ಎರಡನೇ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಬಜೆಟ್ ಮುಗಿದ ಮೇಲೆ ಆರಂಭಗೊಳ್ಳಲಿದ್ದರೂ ಹಂಚಿಕೆದಾರರದ ತಾತ್ಕಾಲಿಕ ಪಟ್ಟಿಯನ್ನು ಬಿಡಿಎ ಬಿಡುಗಡೆ ಮಾಡಿದೆ.
5 ಸಾವಿರ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಪಟ್ಟಿ ಪ್ರಕಟಿಸಲಾಗಿದೆ. ಹಿರಿತನದಲ್ಲಿ ಅರ್ಜಿದಾರರ ವಯಸ್ಸು, ಸೈಟ್ ಪಡೆಯಲು ಪ್ರಯತ್ನ, ಮೀಸಲು ನಿಯಮಾವಳಿಯನ್ನು ಪರಿಗಣಿಸಲಾಗಿದೆ. ವಿವರಗಳನ್ನು ಬಿಡಿಎ ವೆಬ್ಸೈಟ್ನಿಂದ ಪಡೆಯಬಹುದಾಗಿದೆ.
ಎರಡನೇ ಹಂತದಲ್ಲಿ 20/30 ಅಡಿ ವಿಸ್ತೀರ್ಣದ ಸೈಟ್ ವರ್ಗದಲ್ಲಿ ಎಡಬ್ಲ್ಯೂಎಸ್ಗೆ 1 ಸಾವಿರ ಮಂದಿಗೆ ಹಾಗೂ ಸಾಮಾನ್ಯ ಬರ್ಗಕ್ಕೆ 500 ಸೈಟ್ ಮೀಸಲಿಡಲಾಗಿದೆ. 30/40 ಅಡಿ ಸೈಟ್ 2500 ಮಂದಿಗೆ, 40/60 ಅಡಿ ಸೈಟ್ 700 ಮಂದಿಗೆ ಹಾಗೂ 50/80 ಅಡಿ ವಿಸ್ತೀರ್ಣದ ಸೈಟ್ 700 ಮಂದಿಗೆ ಹಂಚಿಕೆ ಮಾಡಲಾಗುತ್ತದೆ.
ಒಂದು ವರ್ಷದಿಂದ ಅರ್ಜಿಗಳ ಪರಿಶೀಲನೆಗೆ ದೀರ್ಘ ಸಮಯ ಹಿಡಿದಿದೆ. ಅರ್ಜಿದಾರರು ಠೇವಣಿ ಹಣ ಪಾವತಿಸಿದ್ದರೂ, ಕಾಲಮಿತಿಯಲ್ಲಿ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಪ್ರಾಧಿಕಾರಕ್ಕೆ ಸಾಧ್ಯವಾಗಿರಲಿಲ್ಲ, ಮೊದಲ ಹಂತದಲ್ಲಿ ಐದು ಸಾವಿರ ನಿವೇಶನ ಹಂಚಿಕೆಗೆ ಎರಡು ವರ್ಷ ಹಿಡಿದಿತ್ತು.
ಎರಡನೇ ಹಂತದಲ್ಲೂ ಅಷ್ಟೇ ಸಂಖ್ಯೆಯ ಸೈಟ್ ಹಂಚಿಕೆ ವೇಳೆ ವಿಳಂಬ ಮಾಡುವುದಿಲ್ಲ ಎಂಬ ವಾಗ್ದಾನ ಹುಸಿಯಾಗಿದೆ. ವಿಳಂಬಕ್ಕಾಗಿ ಸಾರ್ವಜನಿಕರು ಕಚೇರಿಗೆ ಕರೆ ಮಾಡಿದರೂ ಸರಿಯಾದ ಉತ್ತರ ಸಿಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಂಪೇಗೌಡ ಬಡಾವಣೆ: ಆಕ್ಷೇಪಣೆಗೆ 10 ದಿನ ನಿಗದಿ
ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ತಪ್ಪುಗಳಿದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಜು.10ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಗಳನ್ನು ಲಿಖಿತ ರೂಪದಲ್ಲಿ ಪ್ರಾಧಿಕಾರದ ಕಾರ್ಯದರ್ಶಿಗೆ ತಲುಪಿಸಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಡುವು ಮುಗಿದ ಬೆನ್ನಲ್ಲೇ ಅಂತಿಮ ಪಟ್ಟಿ ಬಿಡುಗಡೆ ಭರವಸೆ
ಮೊದಲ ಹಂತದ ಹಂಚಿಕೆ ಸಂದರ್ಭ ಆಕ್ಷೇಪಣೆಗೆ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಪ್ರಸ್ತುತ ಪಟ್ಟಿ ಬಿಡುಗಡೆ ವಿಳಂಬವಾದ ಕಾರಣ ಕಾಲಾವಕಾಶವನ್ನು ಕಡಿಮೆಗೊಳಿಸಲಾಗಿದೆ. ಗಡುವುದು ಮುಗಿದ ಬೆನ್ನಲ್ಲೇ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ವಾಗ್ದಾನವನ್ನು ಬಿಡಿಎ ನೀಡಿದೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆಯಿಂದ ಸೀಟು ಹಂಚಿಕೆ ವಿಳಂಬ
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12ರಂದು ನಡೆದಿದೆ, ಇದರ ನೀತಿ ಸಂಹಿತೆಯಿಂದಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆ ಎರಡನೇ ಹಂತದ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿತ್ತು. ನಂತರ ಜಯನಗರ, ರಾಜರಾಜೇಶ್ವರಿ ನಗರ ಚುನಾವಣೆ ವಿಳಣಬವಾದ ಕಾರಣ ಇದರ ಮೇಲೆ ಪರಿಣಾಮ ಬೀರಿತ್ತು.

ಎಷ್ಟು ಮಂದಿಗೆ ಎಷ್ಟು ಚದರಡಿ ಸೈಟ್
1 ಸಾವಿರ ಮಂದಿಗೆ 20/30 ಅಡಿ ವಿಸ್ತೀರ್ಣದ ಸೈಟ್, 2500 ಮಂದಿಗೆ 30/40 ಚದರಡಿ, 700 ಮಂದಿಗೆ 40/60 ಚದರಡಿ, 700 ಮಂದಿಗೆ 50/80 ಚದರಡಿ ಸೈಟ್ ನೀಡಲಾಗುತ್ತಿದೆ, ಬಜೆಟ್ ನಂತರ ಪ್ರಕ್ರಿಯೆಗೆ ಚಾಲನೆ ದೊರೆಯಲಿದೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ











Click it and Unblock the Notifications