10ಲೇನ್ ರಸ್ತೆ ನಿರ್ಮಾಣಕ್ಕೆ 29 ಆಸ್ತಿ ಭೂಸ್ವಾಧೀನ: ಬಿಡಿಎ ಅಧಿಸೂಚನೆ
ಬೆಂಗಳೂರು, ಡಿಸೆಂಬರ್ 05: ನಾಡಪ್ರಭು ಕೆಂಪೇಗೌಡ ಬಡಾವಣೆ ಮಾರ್ಗವಾಗಿ ಸಾಗುವ 10 ಲೇನ್ (ಆರ್ಟಿಯಲ್) ರಸ್ತೆ ನಿರ್ಮಾಣಕ್ಕಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಭೂಸ್ವಾಧೀನಕ್ಕೆ ಮುಂದಾಗಿದೆ. ಶನಿವಾರ 29ಆಸ್ತಿಗಳ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದೆ.
ಸುಮಾರು ಎರಡು ವರ್ಷ ರಸ್ತೆ ಅಭಿವೃದ್ಧಿ ಗೊಂದಲಕ್ಕೆ ಸದ್ಯ ತೆರೆ ಬಿದ್ದಿದೆ. ಒಟ್ಟು 10.77 ಕಿಮೀ ರಸ್ತೆ ಪೂರ್ಣಗೊಳಿಸಲು ಅಗತ್ಯವಿರುವ 321 ಎಕರೆಗಳಲ್ಲಿ 69 ಅನ್ನು ಭೂಸ್ವಾಧೀನ ಇಲಾಖೆ ಸ್ವಾಧೀನಪಡಿಸಿಕೊಳ್ಳುವಲ್ಲಿ ಯಾವುದೇ ಪ್ರಗತಿ ಸಾಧಿಸಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾಧಿಕಾರ ಎಂಜಿನಿಯರಿಂಗ್ ವಿಭಾಗವು 465 ಕೋಟಿ ರೂ.ಗಳ ಯೋಜನೆಯನ್ನು ಅರ್ಧಕ್ಕೆ ಬಿಟ್ಟಿತ್ತು.

ಈ ರಸ್ತೆ ಕಾರಿಡಾರ್ ಮೈಸೂರು ರಸ್ತೆ (ಆರ್ಆರ್ ವೈದ್ಯಕೀಯ ಕಾಲೇಜು) ಮತ್ತು ಮಾಗಡಿ ರಸ್ತೆ (ಕಡಬಗೆರೆ ವೃತ್ತ) ಸಂಪರ್ಕಿಸುತ್ತದೆ.
ಬೆಂಗಳೂರು ಅಭವಿದ್ಧ ಪ್ರಾಧಿಕಾರ (ಬಿಡಿಎ) ಭೂಸ್ವಾಧೀನಮಕ್ಕೆ ಮುಂದಾಗಿರುವ ಉದ್ದೇಶಿತ 29 ಆಸ್ತಿಗಳಲ್ಲಿ ವಿಐಪಿ ಟ್ರಸ್ಟ್ಗೆ ಸೇರಿದ ಸುಮಾರು ಎರಡು ಎಕರೆ ಜಮೀನು ಸಹ ಇದೆ. ಈ ಕಾರಣಕ್ಕೆ ರಸ್ತೆ ಕೆಲಸ ನಿಧಾನವಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಹಿಂದೆ ನಡೆದ ರಾಜಾಜಿನಗರ ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಇದೇ ವಿಚಾರವಾಗಿ ಚರ್ಚೆಯು ಆಗಿದೆ.
ಸದ್ಯಕ್ಕೆ ಕೆಂಗೇರಿ ಮತ್ತು ಯಶವಂತಪುರ ಹೋಬಳಿಗಳಲ್ಲಿ (ಕಂಬಿಪುರ, ಚಲ್ಲಘಟ್ಟ, ಕೆ ಕೃಷ್ಣ ಸಾಗರ, ಭೀಮನಕುಪ್ಪೆ, ಕೊಮ್ಮಘಟ್ಟ, ಸೂಳಿಕೆರೆ ಮತ್ತು ಕೆಂಚನಾಪುರ) 26 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರ ಕುಟುಂಬಕ್ಕೆ ಸೇರಿದ ಪದ್ಮಶ್ರೀ ಚಾರಿಟಬಲ್ ಟ್ರಸ್ಟ್ನ ಎರಡು ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ಒಳಗೊಂಡಿದೆ. ಆಸ್ತಿಗಳ ವಿನಿಮಯದಲ್ಲಿ ಬಿಡಿಎ ಅಭಿವೃದ್ಧಿಪಡಿಸಿದ ನಿವೇಶನಗಳನ್ನು ನೀಡುವುದಾಗಿ ಭರವಸೆ ನೀಡಿದೆ.

ಮೈಸೂರು ರಸ್ತೆಯಿಂದ ಸುಮಾರು 5 ಕಿಲೋ ಮೀಟರ್ ಕಾಮಗಾರಿ ಪೂರ್ಣಗೊಳಿಸಿರುವ ಬಿಡಿಎ ಮಾಗಡಿ ರಸ್ತೆಯತ್ತ ರಸ್ತೆ ಅಭಿವೃದ್ಧಿ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದಿನ 2023ರ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
2018ರಲ್ಲೇ ಆರಂಭಗೊಂಡಿದ್ದ ಯೋಜನೆ
ನಾಲ್ಕು ವರ್ಷಗಳ ಹಿಂದೆ ಅಂದರೆ 2018ರ ಮಾರ್ಚ್ನಲ್ಲಿ ಯೋಜನೆ ಆರಂಭಕ್ಕೆ ಆದೇಶ ಮಾಡಲಾಯಿತು. ಆಗಸ್ಟ್ 2019 ರೊಳಗೆ ಯೋಜನೆ ಪೂರ್ಣಗೊಳಿಸುವ ಗುಡುವು ವಿಧಿಸಲಾಗಿತ್ತು. ಗುತ್ತಿಗೆ ಪಡೆದಿದ್ದ ನಿರ್ಮಾಣ ಸಂಸ್ಥೆ ಸ್ಟಾರ್ ಬಿಲ್ಡರ್ಸ್, ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳುವಲ್ಲಿ ನಡೆದ ವಿಳಂಬ ಧೋರಣೆಯಿಂದ ಕಾಮಗಾರಿ ವೇಗ ಪಡೆಯಲಿಲ್ಲ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ಸಂಸ್ಥೆ ಆರೋಪಿಸಿದೆ.
ನಾಡಪ್ರಭು ಕೆಂಪೇಗೌಡ ಬಡಾವಣೆ ಸಮೀಪವೇ ಹಾದು ಹೋಗುವ ಈ ಉದ್ದೇಶಿತ 10ಲೇನ್ದ ರಸ್ತೆಯಲ್ಲಿ ಕಾವೇರಿ ನೀರು ಸರಬರಾಜು ಮಾರ್ಗವೂ ಹಾದು ಹೋಗಲಿದೆ. ಕಳೆದ 15 ದಿನಗಳಿಂದ ಬಡಾವಣೆಯ ವಿವಿಧ ಬಾಕಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸುತ್ತಿರುವ ಬಿಡಿಎ ಆಯುಕ್ತ ಜಿ.ಕುಮಾರ್ ನಾಯ್ಕ್ ಅವರ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
-
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ












Click it and Unblock the Notifications