BDA: ಜನರ ಸಮಸ್ಯೆ ನಿವಾರಣೆಗೆ ಹೊಸ ಆನ್ಲೈನ್ ವ್ಯವಸ್ಥೆ,ನಾಗರಿಕರು ಗಮನಿಸಿ
ಬೆಂಗಳೂರು, ಮಾರ್ಚ್ 09: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ನಾಗರಿಕರಿಗೆ ಆನ್ಲೈನ್ ಮೂಲಕ ಕುಂದು ಕೊರತೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಇದರಿಂದಾಗಿ ಸಾರ್ವಜನಿಕರು ಆನ್ಲೈನ್ ಮೂಲಕವೇ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ.
ಬೆಂಗಳೂರು ನಾಗರಿಕರ ಕುಂದು ಕೊರತೆಗಳನ್ನು ಆನ್ಲೈನ್ ಮೂಲಕವೇ ಪರಿಹರಿಸಿಕೊಳ್ಳಲು ಅನುಕೂಲವಾಗುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ನೂತನ 'ತಂತ್ರಾಂಶ' (Website) ಅಭಿವೃದ್ಧಿಪಡಿಸಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರಿಸ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನೂತನ www.bda.karnataka.gov.in ತಂತ್ರಾಂಶ ಬಿಡುಗಡೆ ಮಾಡಿ ಅವರು ಮಾತನಾಡಿದರು.
ವಿಭಾಗವಾರು ಅಧಿಕಾರಿಗಳು ಲಭ್ಯ
ಈ ನೂತನ ವೆಬ್ಸೈಟ್ಗೆ ನಿವೇಶನ, ಜಾಗ ಇನ್ನಿತರ ಸಮಸ್ಯೆಗಳು ಹೊಂದಿರುವ ಸಾರ್ವಜನಿಕರು ನೀವು ಯಾವ ವಿಭಾಗದ ಅಧಿಕಾರಿ ಭೇಟಿ ಮಾಡಬೇಕು ಎಂದುಕೊಂಡವರಿಗೆ ಆಯಾ ವಿಭಾಗ ಅಧಿಕಾರಿ ಭೇಟಿ ಮಾಡಲು ಇದರಲ್ಲಿ ಅವಕಾಶ ನೀಡಲಾಗಿದೆ.
ಕಚೇರಿ ಬಂದಾಗ ಕೆಲವೊಮ್ಮೆ ಸಾರ್ವಜನಿಕರ ಸಮಸ್ಯೆ ಆಗುತ್ತಿದೆ. ಅಲ್ಲದೇ ಹೆಚ್ಚು ಸಮಯ ಬೇಕಾಗುತ್ತದೆ. ಆದ್ದರಿಂದ ನಾಗರಿಕರ ಸಮಯವನ್ನು ವ್ಯರ್ಥ ಮಾಡದೇ ಸಮಸ್ಯೆಗಳನ್ನು ಬಗೆಹರಿಸಲು ಈ ತಂತ್ರಾಂಶವು ಲೋಕಾರ್ಪಣೆ ಮಾಡಲಾಗಿದೆ. ಇದರ ಬಳಕೆ ಹೆಚ್ಚಾಗಬೇಕು ಎಂದರು.

ಮಧ್ಯವರ್ತಿಗಳ ಹಾವಳಿ ತಪ್ಪಲಿದೆ
ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಆಯುಕ್ತ ಎನ್.ಜಯರಾಮ್ ಅವರು ಮಾತನಾಡಿ, ಜನರ ಕುಂದು ಕೊರತೆ ನಿವಾರಿಸುವ ಜೊತೆಗೆ ಪ್ರಾಧಿಕಾರದಲ್ಲಿ ಮಧ್ಯವರ್ತಿಗಳ ಹಾವಳಿ ನಿಯಂತ್ರಿಸಲು, ಉತ್ತಮ ಸೇವೆ ದೊರೆಯುವಂತೆ ಮಾಡುವ ಉದ್ದೇಶದಿಂದ ಈ ತಂತ್ರಾಂಶ ಸಿದ್ಧಪಡಿಸಲಾಗಿದೆ.
ಈ ತಂತ್ರಾಂಶದ ಮೂಲಕ ಸಾರ್ವಜನಿಕರು ಪ್ರಾಧಿಕಾರದ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡಿ ಅಲ್ಲಿ ತಮ್ಮ ಸಮಸ್ಯೆಗಳನ್ನು ನಮೂದಿಸಬೇಕು. ಸಂಬಂಧಪಟ್ಟ ಅಧಿಕಾರಿಯನ್ನು ಭೇಟಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಡೆಯಲು ಸಹಕಾರಿ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಸರ್ಕಾರ ಕಾರ್ಯದರ್ಶಿ (ಇ- ಆಡಳಿತ) ಉಜ್ವಲ್ ಕುಮಾರ್ ಘೋಷ್, ಕಾರ್ಯನಿ ರ್ವಾಹಕ ನಿರ್ದೇಶಕ ಯಶವಂತ್ ವಿ.ಗುರುಕರ್, ಕಾರ್ಯದರ್ಶಿ ವೈ.ಬಿ.ಶಾಂತರಾಜು, ನಗರ ಯೋಜನಾ - ಸದಸ್ಯ ಶಶಿಕುಮಾರ್, ಉಪ ಆಯುಕ್ತ ಡಾ.ಸೌಜನ್ಯ ಹಾಗೂ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications