ಸೆ.25ರಂದು ಬಿಡಿಎಯ 5 ಸಾವಿರ ನಿವೇಶನ ಹಂಚಿಕೆ
ಬೆಂಗಳೂರು, ಸೆಪ್ಟೆಂಬರ್ 23 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೆ.25ರಂದು 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಿದೆ. ಲಾಟರಿ ಮೂಲಕ ಫಲಾನುಭವಿಗಳನ್ನು ಹಂಚಿಕೆ ಮಾಡಲಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆ.25ರಂದು ಬೆಳಗ್ಗೆ 11.30ಕ್ಕೆ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆಗೆ ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿರುವ 5 ಸಾವಿರ ನಿವೇಶನ ಹಂಚಿಕೆ ಮಾಡಲಾಗುತ್ತದೆ.
ತಾತ್ಕಾಲಿಕ ಪಟ್ಟಿಯಲ್ಲಿರುವ 600 ಚದರ ಅಡಿ ಹಾಗೂ 1200 ಚದರ ಅಡಿ ವಿಸ್ತೀರ್ಣದ ನಿವೇಶಗಳ ಹಂಚಿಕೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಉಳಿದಂತೆ ಬಹತೇಕರಿಗೆ ನಿವೇಶ ಸಿಗಲಿದೆ.

ನಿವೇಶನಗಳು ಹಂಚಿಕೆಯಾದ 60 ದಿನದವೊಳಗೆ ಫಲಾನುಭವಿಗಳು ಪೂರ್ಣಮೊತ್ತವನ್ನು ಬಿಡಿಗೆ ಪಾವತಿ ಮಾಡಬೇಕು. ಅಷ್ಟರೊಳಗೆ ಹಣ ಕಟ್ಟಲು ಸಾಧ್ಯವಾಗದಿದ್ದರೆ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗುತ್ತದೆ. ಈ ಅವಧಿಯಲ್ಲಿ ಶೇ 18ರಷ್ಟು ಬಡ್ಡಿಮೊತ್ತವನ್ನು ಪಾವತಿಸಬೇಕು.
ಈ ಎರಡೂ ಅವಧಿಯಲ್ಲಿ ಫಲಾನುಭವಿಗಳು ಹಣ ಪಾವತಿ ಮಾಡಲು ವಿಫಲವಾದರೆ 90 ದಿನಗಳಲ್ಲಿ ಶೇ 21ರಷ್ಟು ಬಡ್ಡಿಯೊಂದಿಗೆ ಹಣ ಪಾವತಿ ಮಾಡಬೇಕು. ಇಲ್ಲವಾದಲ್ಲಿ ನಿವೇಶನ ಹಂಚಿಕೆ ರದ್ದುಪಡಿಸಲು ಬಿಡಿಎಗೆ ಅಧಿಕಾರವಿದೆ.
ಈ ಹಂಚಿಕೆ ಕಾರ್ಯ ಪೂರ್ಣಗೊಂಡ ಬಳಿಕ ನಿವೇಶನ ನಿಗದ ಜನರ ಖಾತೆಗೆ ಆರಂಭಿಕ ಠೇವಣಿ ಮೊತ್ತವನ್ನು ಬಿಡಿಎ ಜಮಾ ಮಾಡಲಿದೆ. ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 25 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ನಿರ್ಧರಿಸಿದೆ.
ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನು ಬಿಡಿಎ ನಿರ್ಮಿಸಿದ್ದು, ಸುಮಾರು 25 ಸಾವಿರ ನಿವೇಶಗಳನ್ನು ಬಡಾವಣೆಯಲ್ಲಿ ನಿರ್ಮಿಸುವ ಗುರಿ ಇದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ












Click it and Unblock the Notifications