ಸೆ.25ರಂದು ಬಿಡಿಎಯ 5 ಸಾವಿರ ನಿವೇಶನ ಹಂಚಿಕೆ
ಬೆಂಗಳೂರು, ಸೆಪ್ಟೆಂಬರ್ 23 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೆ.25ರಂದು 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಿದೆ. ಲಾಟರಿ ಮೂಲಕ ಫಲಾನುಭವಿಗಳನ್ನು ಹಂಚಿಕೆ ಮಾಡಲಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೆ.25ರಂದು ಬೆಳಗ್ಗೆ 11.30ಕ್ಕೆ ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆಗೆ ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿರುವ 5 ಸಾವಿರ ನಿವೇಶನ ಹಂಚಿಕೆ ಮಾಡಲಾಗುತ್ತದೆ.
ತಾತ್ಕಾಲಿಕ ಪಟ್ಟಿಯಲ್ಲಿರುವ 600 ಚದರ ಅಡಿ ಹಾಗೂ 1200 ಚದರ ಅಡಿ ವಿಸ್ತೀರ್ಣದ ನಿವೇಶಗಳ ಹಂಚಿಕೆಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದೆ. ಉಳಿದಂತೆ ಬಹತೇಕರಿಗೆ ನಿವೇಶ ಸಿಗಲಿದೆ.

ನಿವೇಶನಗಳು ಹಂಚಿಕೆಯಾದ 60 ದಿನದವೊಳಗೆ ಫಲಾನುಭವಿಗಳು ಪೂರ್ಣಮೊತ್ತವನ್ನು ಬಿಡಿಗೆ ಪಾವತಿ ಮಾಡಬೇಕು. ಅಷ್ಟರೊಳಗೆ ಹಣ ಕಟ್ಟಲು ಸಾಧ್ಯವಾಗದಿದ್ದರೆ ಒಂದು ತಿಂಗಳ ಕಾಲಾವಕಾಶವನ್ನು ನೀಡಲಾಗುತ್ತದೆ. ಈ ಅವಧಿಯಲ್ಲಿ ಶೇ 18ರಷ್ಟು ಬಡ್ಡಿಮೊತ್ತವನ್ನು ಪಾವತಿಸಬೇಕು.
ಈ ಎರಡೂ ಅವಧಿಯಲ್ಲಿ ಫಲಾನುಭವಿಗಳು ಹಣ ಪಾವತಿ ಮಾಡಲು ವಿಫಲವಾದರೆ 90 ದಿನಗಳಲ್ಲಿ ಶೇ 21ರಷ್ಟು ಬಡ್ಡಿಯೊಂದಿಗೆ ಹಣ ಪಾವತಿ ಮಾಡಬೇಕು. ಇಲ್ಲವಾದಲ್ಲಿ ನಿವೇಶನ ಹಂಚಿಕೆ ರದ್ದುಪಡಿಸಲು ಬಿಡಿಎಗೆ ಅಧಿಕಾರವಿದೆ.
ಈ ಹಂಚಿಕೆ ಕಾರ್ಯ ಪೂರ್ಣಗೊಂಡ ಬಳಿಕ ನಿವೇಶನ ನಿಗದ ಜನರ ಖಾತೆಗೆ ಆರಂಭಿಕ ಠೇವಣಿ ಮೊತ್ತವನ್ನು ಬಿಡಿಎ ಜಮಾ ಮಾಡಲಿದೆ. ಕೆಂಪೇಗೌಡ ಬಡಾವಣೆಯಲ್ಲಿ ಸುಮಾರು 25 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ನಿರ್ಧರಿಸಿದೆ.
ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ನಾಡಪ್ರಭು ಕೆಂಪೇಗೌಡ ಬಡಾವಣೆಯನ್ನು ಬಿಡಿಎ ನಿರ್ಮಿಸಿದ್ದು, ಸುಮಾರು 25 ಸಾವಿರ ನಿವೇಶಗಳನ್ನು ಬಡಾವಣೆಯಲ್ಲಿ ನಿರ್ಮಿಸುವ ಗುರಿ ಇದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ












Click it and Unblock the Notifications