ಡಾ. ಶಿವರಾಮ ಕಾರಂತ ಬಡಾವಣೆ: ಸೈಟಿಗೆ ಅರ್ಜಿ ಹಾಕಲು ಸಿದ್ಧರಾಗಿ
ಬೆಂಗಳೂರು, ಮೇ 26: ಬೆಂಗಳೂರು ನಗರದ ಜನರಿಗೆ ಬಿಡಿಎ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲೇ ಡಾ. ಶಿವರಾಮ ಕಾರಂತ ಬಡಾವಣೆಯ ಸೈಟುಗಳನ್ನು ಆನ್ಲೈನ್ ಮೂಲಕ ಮಾರಾಟ ಮಾಡಲಾಗುತ್ತದೆ. ಆಸಕ್ತರು ಸೈಟು ಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಬಹುದು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಹತ್ವದ ಯೋಜನೆ ಡಾ. ಶಿವರಾಮ ಕಾರಂತ ಬಡಾವಣೆ. ಸುಮಾರು 3,546 ಎಕರೆ ಮತ್ತು 12 ಗುಂಟೆ ಪ್ರದೇಶದಲ್ಲಿ 34 ಸಾವಿರ ನಿವೇಶನಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಸುಮಾರು 10-12 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುತ್ತದೆ.

ಕರ್ನಾಟಕ ಹೈಕೋರ್ಟ್ ಮೇ 30ರಂದು ನೀಡುವ ತೀರ್ಪಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದೆ. ಉತ್ತರ ಬೆಂಗಳೂರು ಭಾಗದಲ್ಲಿ ಬಿಡಿಎ ನಿರ್ಮಾಣ ಮಾಡಿರುವ ಪ್ರತಿಷ್ಠಿತ ಬಡಾವಣೆ ಇದಾಗಿದೆ. ಅರ್ಜಿ ಕರೆಯುವುದು, ಸೈಟು ಹಂಚಿಕೆ ಎಲ್ಲವೂ ಆನ್ಲೈನ್ನಲ್ಲಿಯೇ ನಡೆಯಲಿದೆ.
10 ಸಾವಿರ ಸೈಟು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಡಾ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ರೈತರಿಗೆ 17 ಸಾವಿರ ಸೈಟುಗಳು ಸಿಗಲಿವೆ. ಉಳಿದ 10 ಸಾವಿರ ಸೈಟುಗಳನ್ನು ಸದ್ಯ ಜನರಿಗೆ ಹಂಚಿಕೆ ಮಾಡಲಾಗುತ್ತದೆ.
ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.
ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.
ಆನ್ಲೈನ್ ಮೂಲಕ ಬುಕ್ ಮಾಡಲು ತಿಳಿಯದವರು ಹತ್ತಿರದ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲದೇ ಇದರ ಒಪ್ಪಂದಕ್ಕಾಗಿಯೇ ಕೆನರಾ, ಎಸ್ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕರ್ನಾಟಕ ಸೇರಿದಂತೆ 9 ಬ್ಯಾಂಕ್ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತದೆ.
ಬಿಡಿಎ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸುಮಾರು 5 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಈ ಬಡಾವಣೆ ನಿವೇಶನ ಹಂಚಿಕೆಯಿಂದ ಬಿಡಿಎ ಹೆಚ್ಚು ಆದಾಯವನ್ನು ನಿರೀಕ್ಷೆ ಮಾಡಿದೆ. ಸೈಟುಗಳ ಬೆಲೆಗಳು ಎಷ್ಟಾಗಲಿವೆ? ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.
ಈ ವರ್ಷದ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್ ಡಾ. ಶಿವರಾಮ ಕಾರಂತ ಬಡಾವಣೆಯ ಸಮಗ್ರ ವಿವರ ನೀಡಿ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿತ್ತು. ಬಡಾವಣೆ ನಿರ್ಮಾಣ ಮಾಡುವಾಗ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆ ಎದುರಾಗಿತ್ತು. ಈ ಕುರಿತು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ಗಳಲ್ಲಿ ಕಾನೂನು ಹೋರಾಟ ನಡೆದು ಎಲ್ಲ ಹಂತದಲ್ಲಿನ ನ್ಯಾಯಾಲಯಗಳು ಸರ್ಕಾರದ ಭೂ ಸ್ವಾಧೀನ ಪ್ರಕ್ರಿಯೆ ಕ್ರಮವನ್ನು ಎತ್ತಿ ಹಿಡಿದಿವೆ.
ಸುಪ್ರೀಂಕೋರ್ಟ್ 2020 ಡಿಸೆಂಬರ್ 3ರಂದು ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ. ವಿ. ಚಂದ್ರಶೇಖರ್ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ನ್ಯಾಯಾಲಯದ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಸೂಚಿಸಿ ಸುಪ್ರೀಂಕೋರ್ಟ್ಗೆ ವರದಿ ಸಲ್ಲಿಸಿತ್ತು. ಈಗ ಎಲ್ಲಾ ಅಡೆತಡೆ ನಿವಾರಣೆಯಾಗಿ ಸೈಟು ಹಂಚಿಕೆ ಆರಂಭವಾಗಲಿದೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications