Get Updates
Get notified of breaking news, exclusive insights, and must-see stories!

ಡಾ. ಶಿವರಾಮ ಕಾರಂತ ಬಡಾವಣೆ: ಸೈಟಿಗೆ ಅರ್ಜಿ ಹಾಕಲು ಸಿದ್ಧರಾಗಿ

ಬೆಂಗಳೂರು, ಮೇ 26: ಬೆಂಗಳೂರು ನಗರದ ಜನರಿಗೆ ಬಿಡಿಎ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲೇ ಡಾ. ಶಿವರಾಮ ಕಾರಂತ ಬಡಾವಣೆಯ ಸೈಟುಗಳನ್ನು ಆನ್‌ಲೈನ್ ಮೂಲಕ ಮಾರಾಟ ಮಾಡಲಾಗುತ್ತದೆ. ಆಸಕ್ತರು ಸೈಟು ಕೊಳ್ಳಲು ಸಿದ್ಧತೆಗಳನ್ನು ಮಾಡಿಕೊಳ್ಳಬಹುದು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮಹತ್ವದ ಯೋಜನೆ ಡಾ. ಶಿವರಾಮ ಕಾರಂತ ಬಡಾವಣೆ. ಸುಮಾರು 3,546 ಎಕರೆ ಮತ್ತು 12 ಗುಂಟೆ ಪ್ರದೇಶದಲ್ಲಿ 34 ಸಾವಿರ ನಿವೇಶನಗಳನ್ನು ನಿರ್ಮಿಸಲಾಗುತ್ತದೆ. ಇದರಲ್ಲಿ ಸುಮಾರು 10-12 ಸಾವಿರ ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುತ್ತದೆ.

BDA To Allot Dr Shivarama Karanth Layout Sites Online

ಕರ್ನಾಟಕ ಹೈಕೋರ್ಟ್‌ ಮೇ 30ರಂದು ನೀಡುವ ತೀರ್ಪಿನಲ್ಲಿ ಡಾ. ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಒಪ್ಪಿಗೆ ನೀಡುವ ನಿರೀಕ್ಷೆ ಇದೆ. ಉತ್ತರ ಬೆಂಗಳೂರು ಭಾಗದಲ್ಲಿ ಬಿಡಿಎ ನಿರ್ಮಾಣ ಮಾಡಿರುವ ಪ್ರತಿಷ್ಠಿತ ಬಡಾವಣೆ ಇದಾಗಿದೆ. ಅರ್ಜಿ ಕರೆಯುವುದು, ಸೈಟು ಹಂಚಿಕೆ ಎಲ್ಲವೂ ಆನ್‌ಲೈನ್‌ನಲ್ಲಿಯೇ ನಡೆಯಲಿದೆ.

10 ಸಾವಿರ ಸೈಟು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಡಾ. ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ರೈತರಿಗೆ 17 ಸಾವಿರ ಸೈಟುಗಳು ಸಿಗಲಿವೆ. ಉಳಿದ 10 ಸಾವಿರ ಸೈಟುಗಳನ್ನು ಸದ್ಯ ಜನರಿಗೆ ಹಂಚಿಕೆ ಮಾಡಲಾಗುತ್ತದೆ.

ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.

ಬಿಡಿಎ ಅಧಿಕಾರಿಗಳ ಪ್ರಕಾರ ಸೈಟಿಗೆ ಅರ್ಜಿ ಸಲ್ಲಿಕೆ ಮಾಡುವವರು ಶೇ 12.05ರಷ್ಟು ಹಣವನ್ನು ಯುಪಿಐ ಪಾವತಿ ಮೂಲಕ ಕಟ್ಟಬೇಕು. ಡಿಡಿ ಅಥವ ಚೆಕ್ ಮೂಲಕ ಪಾವತಿ ಮಾಡಲು ಅವಕಾಶವಿಲ್ಲ.

ಆನ್‌ಲೈನ್ ಮೂಲಕ ಬುಕ್ ಮಾಡಲು ತಿಳಿಯದವರು ಹತ್ತಿರದ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಬಹುದು. ಅಲ್ಲದೇ ಇದರ ಒಪ್ಪಂದಕ್ಕಾಗಿಯೇ ಕೆನರಾ, ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕರ್ನಾಟಕ ಸೇರಿದಂತೆ 9 ಬ್ಯಾಂಕ್‌ಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗುತ್ತದೆ.

ಬಿಡಿಎ ಡಾ. ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ಸುಮಾರು 5 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಈ ಬಡಾವಣೆ ನಿವೇಶನ ಹಂಚಿಕೆಯಿಂದ ಬಿಡಿಎ ಹೆಚ್ಚು ಆದಾಯವನ್ನು ನಿರೀಕ್ಷೆ ಮಾಡಿದೆ. ಸೈಟುಗಳ ಬೆಲೆಗಳು ಎಷ್ಟಾಗಲಿವೆ? ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ.

ಈ ವರ್ಷದ ಜನವರಿಯಲ್ಲಿ ಕರ್ನಾಟಕ ಹೈಕೋರ್ಟ್‌ ಡಾ. ಶಿವರಾಮ ಕಾರಂತ ಬಡಾವಣೆಯ ಸಮಗ್ರ ವಿವರ ನೀಡಿ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿತ್ತು. ಬಡಾವಣೆ ನಿರ್ಮಾಣ ಮಾಡುವಾಗ ಭೂ ಸ್ವಾಧೀನ ಸೇರಿದಂತೆ ಹಲವು ಸಮಸ್ಯೆ ಎದುರಾಗಿತ್ತು. ಈ ಕುರಿತು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗಳಲ್ಲಿ ಕಾನೂನು ಹೋರಾಟ ನಡೆದು ಎಲ್ಲ ಹಂತದಲ್ಲಿನ ನ್ಯಾಯಾಲಯಗಳು ಸರ್ಕಾರದ ಭೂ ಸ್ವಾಧೀನ ಪ್ರಕ್ರಿಯೆ ಕ್ರಮವನ್ನು ಎತ್ತಿ ಹಿಡಿದಿವೆ.

ಸುಪ್ರೀಂಕೋರ್ಟ್‌ 2020 ಡಿಸೆಂಬರ್ 3ರಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎ. ವಿ. ಚಂದ್ರಶೇಖರ್ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ನ್ಯಾಯಾಲಯದ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಸೂಚಿಸಿ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಸಿತ್ತು. ಈಗ ಎಲ್ಲಾ ಅಡೆತಡೆ ನಿವಾರಣೆಯಾಗಿ ಸೈಟು ಹಂಚಿಕೆ ಆರಂಭವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+