ಕೆಂಪೇಗೌಡ ಬಡಾವಣೆ ತ್ವರಿವತವಾಗಿ ಮೂಲ ಸೌಕರ್ಯ: ಎಸ್.ಆರ್.ವಿಶ್ವನಾಥ್
ಬೆಂಗಳೂರು, ಜೂ. 02: ಕೆಂಪೇಗೌಡ ಬಡಾವಣೆ ನಿವೇಶನ ಖರೀದಿದಾರರಿಗೆ ಬಿಡಿಎ ಸಂತಸದ ಸುದ್ದಿ ನೀಡಿದೆ. ಕೆಂಪೇಗೌಡ ಬಡಾವಣೆಯಲ್ಲಿ ತ್ವರಿತವಾಗಿ ಮನೆ ಕಟ್ಟಲು ಅಗತ್ಯ ಇರುವ ಮೂಲ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಭರವಸೆ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಒದಗಿಸಲಾದ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಕರ್ನಾಟಕ ವಿಧಾನಸಭೆಯ ಅರ್ಜಿಗಳ ಸಮಿತಿ ಪರಿವೀಕ್ಷಣೆ ನಡೆಸಿತು. ಪರೀವಿಕ್ಷಣೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಎಸ್. ಆರ್. ವಿಶ್ವನಾಥ್, ಕೋವಿಡ್-19 ಸಾಂಕ್ರಾಮಿಕ ಮತ್ತು ಇನ್ನಿತರೆ ತಾಂತ್ರಿಕ ಕಾರಣಗಳಿಂದಾಗಿ ಬಡಾವಣೆಯ ಕಾಮಗಾರಿಗಳು ಕಳೆದ ಮೂರು ವರ್ಷಗಳಿಂದ ಕುಂಠಿತಗೊಂಡಿದ್ದವು. ಆದರೆ, ಈಗ ಪರಿಸ್ಥಿತಿ ಸುಧಾರಿಸಿದ್ದು, ಕಾಮಗಾರಿಗಳಿಗೆ ವೇಗ ನೀಡಲಾಗಿದೆ ಎಂದರು.
ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನದಾರರು ಮನೆ ಕಟ್ಟಲು ಮುಂದೆ ಬಂದರೆ, ತಕ್ಷಣವೇ ಅದಕ್ಕೆ ಅಗತ್ಯವಿರುವ ನೀರು, ವಿದ್ಯುತ್ ಮತ್ತು ಕಚ್ಚಾರಸ್ತೆಯ ವ್ಯವಸ್ಥೆಯನ್ನು ಕಲ್ಪಿಸಲು ಬಿಡಿಎ ಬದ್ಧವಾಗಿದೆ. ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಸಲುವಾಗಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಸುಮಾರು 59 ಕೋಟಿ ರೂಪಾಯಿಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಮನೆ ನಿರ್ಮಾಣಕ್ಕೆ ಮುಂದಾಗುವ ನಿವೇಶನದಾರರಿಗೆ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ ಎಂದು ತಿಳಿಸಿದರು.

ಅತ್ಯಾಧುನಿಕವಾದ ತಡಗೋಡೆ ನಿರ್ಮಾಣ
ಬಿಡಿಎ ಆಯುಕ್ತ ರಾಜೇಶ್ ಗೌಡ ಮಾತನಾಡಿ, ಕನ್ನಳ್ಳಿ ಕೆರೆಯ ಸನಿಹದಲ್ಲಿರುವ ನಿವೇಶನಗಳಲ್ಲಿ ತಲೆದೋರಿರುವ ತೇವಾಂಶ ಸಮಸ್ಯೆಯನ್ನು ಬಾಂಬೆ ಐಐಟಿ ತಜ್ಞರು ಪರಿಹರಿಸಲಿದ್ದಾರೆ. ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ಸುಮಾರು 12 ಮೀಟರ್ ಗೂ ಹೆಚ್ಚು ಆಳದಿಂದ ಅತ್ಯಾಧುನಿಕವಾದ ತಡಗೋಡೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಪಕ್ಕದ ನಿವೇಶನಗಳಿಗೆ ತೇವಾಂಶ ಬರುವುದು ತಡೆಯುತ್ತದೆ ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಸಮಿತಿ ಅಧ್ಯಕ್ಷ ಚಂದ್ರಶೇಖರ ಮಾಮನಿ ಅವರು, "ನಿವೇಶನದಾರರಿಗೆ ತ್ವರಿತವಾಗಿ ಮನೆ ನಿರ್ಮಾಣ ಮಾಡಲು ಅನುಕೂಲವಾಗುವಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು," ಎಂದು ಬಿಡಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ವಿಧಾನಸೌಧದಲ್ಲಿ ಸಭೆ ನಡೆಸಿ ಪರಿವೀಕ್ಷಣೆಗೆ ತೆರಳಿದರು.

ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ಚಂದ್ರಶೇಖರ ಮಾಮನಿ ನೇತೃತ್ವದಲ್ಲಿ ಸದಸ್ಯರಾದ ಎಸ್.ಸುರೇಶ್ ಕುಮಾರ್, ಎಂ.ಪಿ. ಅಪ್ಪಚ್ಚುರಂಜನ್, ರಮೇಶ್ ಭೂಸನೂರು, ಅಮೃತ ಅಯ್ಯಪ್ಪ ದೇಸಾಯಿ, ಉಮಾನಾಥ್ ಕೋಟ್ಯಾನ್ ಹಾಗೂ ವೀರಭದ್ರಯ್ಯ ಸೇರಿದಂತೆ ಸಮಿತಿಯ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಆರ್.ವಿಶ್ವನಾಥ್, ಆಯುಕ್ತರಾದ ಎಂ.ಬಿ.ರಾಜೇಶ್ ಗೌಡ ಮತ್ತು ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡವು ಕೆಂಪೇಗೌಡ ಬಡಾವಣೆಯ ಕೊಡಿಗೇಹಳ್ಳಿ, ಕನ್ನಳ್ಳಿ, ಅರ್ಚಕರ ಬಡಾವಣೆ, ಕಡಬಗೆರೆ ಸೇರಿದಂತೆ ಮೊದಲಾದ ಬ್ಲಾಕ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿವೇಶನದಾರರಿಂದ ಅಹವಾಲು ಸ್ವೀಕರಿಸಿತು.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications