ಕೆಂಪೇಗೌಡ ಬಡಾವಣೆ: ವಿವಿಧ ಸೌಲಭ್ಯ ಕಾಮಗಾರಿಗೆ ಚಾಲನೆ
ಬೆಂಗಳೂರು, ಫೆಬ್ರವರಿ 27 : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ವಿವಿಧ ಸೌಲಭ್ಯ ಕಲ್ಪಿಸಲು ಬಿಡಿಎ ಮುಂದಾಗಿದೆ. ಒಳಚರಂಡಿ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಒದಗಿಸುವ ಕಾಮಗಾರಿಗೆ ಚಾಲನೆ ದೊರೆಯಲಿದೆ.
ಪ್ರಾಧಿಕಾರ 1,619 ಕೋಟಿ ರೂ ವೆಚ್ಚದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 4 ರಂದು ಚಾಲನೆ ನೀಡಲಿದ್ದಾರೆ. ಕೆಂಪೇಗೌಡ ಬಡಾವಣೆ 4043 ಎಕರೆ ವಿಸ್ತೀರ್ಣ ಹೊಂದಿದೆ. ಈಗಾಗಲೇ ಸ್ವಾಧೀನಗೊಂಡಿರುವ ಜಮೀನಿನಲ್ಲಿ ಶೇ.60 ರಷ್ಟು ಭಾಗ ಎಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರಗೊಂಡಿದೆ.
ಪ್ರಾಥಮಿಕ ಸಿವಿಲ್ ಕೆಲಸ ಅರ್ಧದಷ್ಟು ಪೂರ್ಣಗೊಂಡಿದ್ದು, ಪಿಆರ್ ಆರ್ ನ ಭಾಗವಾಗಿ ಬಡಾವಣೆಯಲ್ಲಿ ಹಾದು ಹೋಗುವ 10.7 ಕಿ.ಮೀ ಉದ್ದ ಮುಖ್ಯ ಆರ್ಟೀರಿಯಲ್ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದು ಬಡಾವಣೆಗೆ ನಾನಾ ದಿಕ್ಕಿನಿಂದ ನೇರ ಸಂಪರ್ಕ ನೀಡಲಿದ್ದು, 2017-18 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಯೋಜನೆ ಪ್ರಕಟಿಸಿದೆ.

ರಸ್ತೆ ನಿರ್ಮಾಣ ಹೊಣೆಯನ್ನು ಸರ್ಕಾರ ಬಿಡಿಎಗೆ ನೀಡಿದ್ದು, ಇತ್ತೀಚೆಗೆ ಟೆಂಡರ್ 465.79 ಕೋಟಿ ರೂಗೆ ಅಂತಿಮಗೊಳಿಸಲಾಗಿದೆ. 100 ಮೀ. ಅಗಲದ ಮುಖ್ಯ ಕ್ಯಾರೇಜ್ ಭಾಗ ಆರು ಪಥ ಇರಲಿದೆ. ತಲಾ ಎರಡು ಪಥಗಳ ಸರ್ವೀಸ್ ರಸ್ತೆ ಹಾಗೂ ಸೈಕಲ್ ಪಥಕ್ಕೂ ಅವಕಾಶ ಕಲ್ಪಿಸಲಾಗಿದೆ.
ಏನೇನು ಸೌಲಭ್ಯ ಮತ್ತು ಅಗತ್ಯಗಳು: ಇಡೀ ಬಡಾವಣೆ ವ್ಯಾಪ್ತಿಗೆ ದ್ವಿ ಕೊಳವೆ ಅಳವಡಿಕೆ, ನೀರು-ಒಳಚರಂಡಿ, ವಿದ್ಯುತ್ ಕಾಮಗಾರಿಗೆ 2 ವರ್ಷ ಗಡುವು, ಸೌಲಭ್ಯ ನಿರ್ವಹಣೆ 10 ವರ್ಷದ ವರೆಗೆ ಗುತ್ತಿಗೆ ನೀಡಲಾಗುತ್ತಿದೆ. ಬಡಾವಣೆಯಲ್ಲಿ 40 ಸಾವಿರ ನಿವೇಶನ ರಚಿಸಲಾಗುತ್ತಿದೆ. ಜತೆಗೆ ಹತ್ತು ಕಡೆ ಒಟ್ಟು 450 ಎಕರೆ ಪ್ರದೇಶದಲ್ಲಿ ಫ್ಲಾಟ್ಸ್ ನಿರ್ಮಾಣಕ್ಕೆ ಜಾಗ ಮೀಸಲಿಡಲಾಗಿದೆ.
ವಿದ್ಯುತ್ ಸೌಲಭ್ಯ ಕಾಮಗಾರಿಯಡಿ ಬೀದಿ ದೀಪ, ಪರಿವರ್ತಕಗಳ ಸ್ಥಾಪನೆ ಕಾರ್ಯವೂ ಸೇರಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications