ಬೆಂಗಳೂರಿನಲ್ಲಿ 'ಅನಂತ್ ಕುಮಾರ್ ಗ್ರಂಥಾಲಯ' ಲೋಕಾರ್ಪಣೆ
ಬೆಂಗಳೂರು, ಜನವರಿ 2: ಹೊಸ ವರ್ಷದ ಆರಂಭದಲ್ಲಿರುವ ನಮಗೆ ಈ ವರ್ಷ ಪರಿಸರಸ್ನೇಹಿ ಪರ್ಯಾಯ ವಸ್ತುಗಳ ಬಳಕೆ'ಯ ಸಂಕಲ್ಪವಾಗಲಿ ಎಂದು ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಕರೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಾರದಾ ಸ್ತ್ರೀಸಮಾಜದಲ್ಲಿ ಗುರುವಾರ ಅನಂತ ಕುಮಾರ್ ಗ್ರಂಥಾಲಯ'ವನ್ನು ಉದ್ಘಾಟಿಸಿ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್ ಅವರು, 'ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ನಾವು ಪ್ಲಾಸ್ಟಿಕ್ ಬಳಕೆಯನ್ನು ಕೈಬಿಡಬೇಕಿದೆ. ಬಳಸಿದ ಪ್ಲಾಸ್ಟಿಕ್ ಅಥವಾ ಪ್ಲಾಸ್ಟಿಕ್ ಕವರಿನ ಒಂದು ಸಣ್ಣ ಚೂರು ಸಹ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತದೆ' ಎಂದರು.

ಪರ್ಯಾಯ ವಸ್ತುಗಳ ಬಳಕೆ
'ಈ ಸಣ್ಣ ಪ್ಲಾಸ್ಟಿಕ್ ಚೂರನ್ನು ದನಕರುಗಳು ತಿಂದು ಅನಾರೋಗ್ಯಕ್ಕೆ ತುತ್ತಾಗುತ್ತವೆ ಅಥವಾ ಪ್ರಾಣವನ್ನೂ ಕಳೆದುಕೊಳ್ಳುತ್ತವೆ. ಇದಲ್ಲದೇ ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದಿರುವುದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ಆದ್ದರಿಂದ ಪ್ಲಾಸ್ಟಿಕ್ ಅನ್ನು ಪುನರ್ ಬಳಕೆಗೆ ನೀಡಬೇಕು. ಅಲ್ಲದೇ, ಹೊಸ ವರ್ಷದ ಆರಂಭದಲ್ಲಿರುವ ನಾವೆಲ್ಲರೂ ಪ್ಲಾಸ್ಟಿಕ್ ಬದಲು ಪರಿಸರಸ್ನೇಹಿ ಪರ್ಯಾಯ ವಸ್ತುಗಳ ಬಳಕೆ ಮಾಡುವ ಸಂಕಲ್ಪವನ್ನು ಮಾಡಬೇಕೆಂದು' ಕರೆ ನೀಡಿದರು.

ಅನಂತಕುಮಾರ್ ಅವರು ರಾಜಕಾರಣಿಯಾಗದಿದ್ದಿದ್ದರೆ ಸಾಹಿತಿಯಾಗುತ್ತಿದ್ದರು
'ಅನಂತಕುಮಾರ್ ಅವರು ಎಲ್ಲಿಗೇ ಪ್ರಯಾಣ ಮಾಡಲಿ, ಎರಡೆರಡು ಪುಸ್ತಕಗಳನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಿದ್ದರು. ಹೋಗುವಾಗ ಒಂದು, ವಾಪಸ್ ಬರುವಾಗ ಮತ್ತೊಂದು ಪುಸ್ತಕವನ್ನು ಓದಿ ಮುಗಿಸುತ್ತಿದ್ದರು. ಈ ಮೂಲಕ ಅವರಲ್ಲಿ ಸಾಕಷ್ಟು ಸಾಹಿತ್ಯದ ಬಗ್ಗೆ ಒಲವಿತ್ತು ಎಂದು ಹೇಳಿದ ತೇಜಸ್ವಿನಿ ಅವರು, ಒಂದು ವೇಳೆ ಅನಂತಕುಮಾರ್ ಅವರು ರಾಜಕಾರಣಿಯಾಗದಿದ್ದಿದ್ದರೆ ಸಾಹಿತಿಯಾಗುತ್ತಿದ್ದರು' ಎಂದು ಹೇಳಿದರು.

ಶಾರದಾ ಸ್ತ್ರೀ ಸಮಾಜ
ಶಾರದಾ ಸ್ತ್ರೀ ಸಮಾಜ ಅನಂತಕುಮಾರ್ ಅವರ ಹೆಸರಿನಲ್ಲಿ ಗ್ರಂಥಾಲಯ ಆರಂಭಿಸಿರುವುದು ಸಂತಸ ತಂದಿದೆ. ಮಕ್ಕಳು ಈಗಿನಿಂದಲೇ ಪುಸ್ತಕಗಳನ್ನು ಓದುವ ಗೀಳನ್ನು ಬೆಳೆಸಿಕೊಳ್ಳಬೇಕು. ಮಕ್ಕಳು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಬೇಕು. ಇಲ್ಲವಾದರೆ, ಕೂಪಮಂಡೂಕಗಳಾಗಬೇಕಾಗುತ್ತದೆ. ಆದ್ದರಿಂದ ಹೊಸ ಹೊಸ ವಿಚಾರಧಾರೆಗಳ ಬಗ್ಗೆ ಚಿಂತನೆ ನಡೆಸಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಇದ್ದವರು
ಚಾಮರಾಜಪೇಟೆಯಲ್ಲಿ ಶಾರದಾ ಸ್ಟ್ರೀ ಸಮಾಜದಲ್ಲಿ ಈ ಗ್ರಂಥಾಲಯ ತಲೆ ಎತ್ತಿದೆ. ಕಾರ್ಯಕ್ರಮದಲ್ಲಿ ಶಾರದಾ ಸ್ತ್ರೀ ಸಮಾಜ ಟ್ರಸ್ಟ್ ನ ಅಧ್ಯಕ್ಷೆ ಶಾರದಾ ಉಮೇಶ್ ರುದ್ರ, ಶಾರದಾ ಸ್ತ್ರೀ ಸಮಾಜದ ಅಧ್ಯಕ್ಷೆ ಶಾಂತ ವಿ ಗೌಡ್, ಗೌರವ ಕಾರ್ಯದರ್ಶಿ ಮಂಜುಳಾ ಪ್ರಸಾದ್ ಮತ್ತು ಸಂಚಾಲಕರಾದ ಸಿ.ಯು.ಉಮಾದೇವಿ ಅವರು ಈ ಸಂದರ್ಭದಲ್ಲಿದ್ದರು.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications