ಬೆಂಗಳೂರಿನಲ್ಲಿ 'ಅನಂತ್ ಕುಮಾರ್ ಗ್ರಂಥಾಲಯ' ಲೋಕಾರ್ಪಣೆ
ಬೆಂಗಳೂರು, ಜನವರಿ 2: ಹೊಸ ವರ್ಷದ ಆರಂಭದಲ್ಲಿರುವ ನಮಗೆ ಈ ವರ್ಷ ಪರಿಸರಸ್ನೇಹಿ ಪರ್ಯಾಯ ವಸ್ತುಗಳ ಬಳಕೆ'ಯ ಸಂಕಲ್ಪವಾಗಲಿ ಎಂದು ಅದಮ್ಯ ಚೇತನದ ಅಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಕರೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಾರದಾ ಸ್ತ್ರೀಸಮಾಜದಲ್ಲಿ ಗುರುವಾರ ಅನಂತ ಕುಮಾರ್ ಗ್ರಂಥಾಲಯ'ವನ್ನು ಉದ್ಘಾಟಿಸಿ ಮಾತನಾಡಿದ ತೇಜಸ್ವಿನಿ ಅನಂತ್ ಕುಮಾರ್ ಅವರು, 'ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ನಾವು ಪ್ಲಾಸ್ಟಿಕ್ ಬಳಕೆಯನ್ನು ಕೈಬಿಡಬೇಕಿದೆ. ಬಳಸಿದ ಪ್ಲಾಸ್ಟಿಕ್ ಅಥವಾ ಪ್ಲಾಸ್ಟಿಕ್ ಕವರಿನ ಒಂದು ಸಣ್ಣ ಚೂರು ಸಹ ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತದೆ' ಎಂದರು.

ಪರ್ಯಾಯ ವಸ್ತುಗಳ ಬಳಕೆ
'ಈ ಸಣ್ಣ ಪ್ಲಾಸ್ಟಿಕ್ ಚೂರನ್ನು ದನಕರುಗಳು ತಿಂದು ಅನಾರೋಗ್ಯಕ್ಕೆ ತುತ್ತಾಗುತ್ತವೆ ಅಥವಾ ಪ್ರಾಣವನ್ನೂ ಕಳೆದುಕೊಳ್ಳುತ್ತವೆ. ಇದಲ್ಲದೇ ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗದಿರುವುದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಉಂಟು ಮಾಡುತ್ತದೆ. ಆದ್ದರಿಂದ ಪ್ಲಾಸ್ಟಿಕ್ ಅನ್ನು ಪುನರ್ ಬಳಕೆಗೆ ನೀಡಬೇಕು. ಅಲ್ಲದೇ, ಹೊಸ ವರ್ಷದ ಆರಂಭದಲ್ಲಿರುವ ನಾವೆಲ್ಲರೂ ಪ್ಲಾಸ್ಟಿಕ್ ಬದಲು ಪರಿಸರಸ್ನೇಹಿ ಪರ್ಯಾಯ ವಸ್ತುಗಳ ಬಳಕೆ ಮಾಡುವ ಸಂಕಲ್ಪವನ್ನು ಮಾಡಬೇಕೆಂದು' ಕರೆ ನೀಡಿದರು.

ಅನಂತಕುಮಾರ್ ಅವರು ರಾಜಕಾರಣಿಯಾಗದಿದ್ದಿದ್ದರೆ ಸಾಹಿತಿಯಾಗುತ್ತಿದ್ದರು
'ಅನಂತಕುಮಾರ್ ಅವರು ಎಲ್ಲಿಗೇ ಪ್ರಯಾಣ ಮಾಡಲಿ, ಎರಡೆರಡು ಪುಸ್ತಕಗಳನ್ನು ತಮ್ಮೊಂದಿಗೆ ಕೊಂಡೊಯ್ಯುತ್ತಿದ್ದರು. ಹೋಗುವಾಗ ಒಂದು, ವಾಪಸ್ ಬರುವಾಗ ಮತ್ತೊಂದು ಪುಸ್ತಕವನ್ನು ಓದಿ ಮುಗಿಸುತ್ತಿದ್ದರು. ಈ ಮೂಲಕ ಅವರಲ್ಲಿ ಸಾಕಷ್ಟು ಸಾಹಿತ್ಯದ ಬಗ್ಗೆ ಒಲವಿತ್ತು ಎಂದು ಹೇಳಿದ ತೇಜಸ್ವಿನಿ ಅವರು, ಒಂದು ವೇಳೆ ಅನಂತಕುಮಾರ್ ಅವರು ರಾಜಕಾರಣಿಯಾಗದಿದ್ದಿದ್ದರೆ ಸಾಹಿತಿಯಾಗುತ್ತಿದ್ದರು' ಎಂದು ಹೇಳಿದರು.

ಶಾರದಾ ಸ್ತ್ರೀ ಸಮಾಜ
ಶಾರದಾ ಸ್ತ್ರೀ ಸಮಾಜ ಅನಂತಕುಮಾರ್ ಅವರ ಹೆಸರಿನಲ್ಲಿ ಗ್ರಂಥಾಲಯ ಆರಂಭಿಸಿರುವುದು ಸಂತಸ ತಂದಿದೆ. ಮಕ್ಕಳು ಈಗಿನಿಂದಲೇ ಪುಸ್ತಕಗಳನ್ನು ಓದುವ ಗೀಳನ್ನು ಬೆಳೆಸಿಕೊಳ್ಳಬೇಕು. ಮಕ್ಕಳು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಬೇಕು. ಇಲ್ಲವಾದರೆ, ಕೂಪಮಂಡೂಕಗಳಾಗಬೇಕಾಗುತ್ತದೆ. ಆದ್ದರಿಂದ ಹೊಸ ಹೊಸ ವಿಚಾರಧಾರೆಗಳ ಬಗ್ಗೆ ಚಿಂತನೆ ನಡೆಸಬೇಕು ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಇದ್ದವರು
ಚಾಮರಾಜಪೇಟೆಯಲ್ಲಿ ಶಾರದಾ ಸ್ಟ್ರೀ ಸಮಾಜದಲ್ಲಿ ಈ ಗ್ರಂಥಾಲಯ ತಲೆ ಎತ್ತಿದೆ. ಕಾರ್ಯಕ್ರಮದಲ್ಲಿ ಶಾರದಾ ಸ್ತ್ರೀ ಸಮಾಜ ಟ್ರಸ್ಟ್ ನ ಅಧ್ಯಕ್ಷೆ ಶಾರದಾ ಉಮೇಶ್ ರುದ್ರ, ಶಾರದಾ ಸ್ತ್ರೀ ಸಮಾಜದ ಅಧ್ಯಕ್ಷೆ ಶಾಂತ ವಿ ಗೌಡ್, ಗೌರವ ಕಾರ್ಯದರ್ಶಿ ಮಂಜುಳಾ ಪ್ರಸಾದ್ ಮತ್ತು ಸಂಚಾಲಕರಾದ ಸಿ.ಯು.ಉಮಾದೇವಿ ಅವರು ಈ ಸಂದರ್ಭದಲ್ಲಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications