ರಂಗಶಂಕರದಲ್ಲಿ ಬೆಳವಾಡಿ ನಿರ್ದೇಶನದ 'ಬೆಕೆಟ್' ನೋಡಿ
ಬೆಂಗಳೂರು ಥಿಯೇಟರ್ ಕಂಪನಿ ತನ್ನ ಎರಡನೇ ಪ್ರಯೋಗವಾದ 'ಬೆಕೆಟ್' ನಾಟಕ ಪ್ರದರ್ಶನಕ್ಕೆ ಸಜ್ಜಾಗಿದೆ. ಪ್ರಕಾಶ್ ಬೆಳವಾಡಿ ನಿರ್ದೇಶನದ ಬೆಕೆಟ್ ನಾಟಕದ 12 ನೇ ಪ್ರದರ್ಶನ ಇದಾಗಿದ್ದು, ಜನವರಿ 4 ರಂದು ರಂಗ ಶಂಕರದಲ್ಲಿ ನಡೆಯಲಿದೆ.
ಬೆಂಗಳೂರು, ಜನವರಿ 01: ಬೆಂಗಳೂರು ಥಿಯೇಟರ್ ಕಂಪನಿ ತನ್ನ ಎರಡನೇ ಪ್ರಯೋಗವಾದ 'ಬೆಕೆಟ್' ನಾಟಕ ಪ್ರದರ್ಶನಕ್ಕೆ ಸಜ್ಜಾಗಿದೆ. ಪ್ರಕಾಶ್ ಬೆಳವಾಡಿ ನಿರ್ದೇಶನದ ಬೆಕೆಟ್ ನಾಟಕದ 12 ನೇ ಪ್ರದರ್ಶನ ಇದಾಗಿದ್ದು, ಜನವರಿ 4 ರಂದು ರಂಗ ಶಂಕರದಲ್ಲಿ ನಡೆಯಲಿದೆ.
ಜಾನ್ ಆನ್ವಿ ರಚಿಸಿದ ಬೆಕೆಟ್ (ಮೂಲ ಫ್ರೆಂಚ್ ನಾಟಕ)ನಾಟಕದ ಐತಿಹಾಸಿಕ ನೆಲೆ 12 ನೇ ಶತಮಾನದ ಇಂಗ್ಲೆಂಡಿನ ನಾರ್ಮನ ಜನಾಂಗದ ದೊರೆ ಎರಡನೆ ಹೆನ್ರಿ ಮತ್ತು ಕ್ಯಾಥೋಲಿಕ್ ಚರ್ಚಿನ ಥಾಮಸ್ ಬೆಕೆಟ್ ನಡುವೆ ಆದ ಸಮರ. (ಆನ್ವಿಯವರು ನಾಟಕ ಬರೆಯುವಾಗ ಮುಂದೆ ಸಂತರೆಂದು ಘೋಷಿತರಾದ ಬೆಕೆಟ್ ಅವರನ್ನು ಸಾಕ್ಸನ್ ಜನಾಂಗದವರೆಂದು ತಪ್ಪಾಗಿ ಗ್ರಹಿಸಿದ್ದರು).
ರಾಜನಾದ ಎರಡನೇ ಹೆನ್ರಿ, ಬೆಕೆಟ್ನನ್ನು ಧರ್ಮಾಧಿಕಾರಿಯಾಗಿ ನೇಮಿಸಿದಾಗ, ಬೆಕೆಟ್ ಪರಿಹರಿಸಬೇಕಾದ ಸಮಸ್ಯೆ ನಿಷ್ಠೆಯದು ಅದನ್ನು ತಾನು ರಾಜನಿಂದ ದೇವರಿಗೆ ವರ್ಗಾಯಿಸಬೇಕು. ಬಗೆಹರಿಸಲಾಗದ ಬಿಕ್ಕಟ್ಟು ಏನಂದರೆ ರಾಜನ ಸೇವೆ, ದೇವರ ಸೇವೆ ಎರಡೂ ಏಕಕಾಲಕ್ಕೆ ತನಗೆ, ರಾಜನ ಸ್ನೇಹಿತ ಮತ್ತು ಪ್ರೀತಿಪಾತ್ರನಾಗಿಯೂ, ಮಾಡಲು ಸಾಧ್ಯವಿಲ್ಲ ಅನ್ನಿಸುವುದು.ಧರ್ಮದ ಮೂಲಕ ತನ್ನ ಆಡಳಿತದ ಹಿಡಿತ ಸಾಧಿಸಲು ಹುನ್ನಾರ ನಡೆಸುವ ಧರ್ಮಾಧಿಕಾರಿ.
ಆಡಳಿತದ ಮೇಲೆ ಹಿಡಿತ ಸಾಧಿಸಲು ತನ್ನ ಜೀವದ ಗೆಳೆಯ ಬೆಕೆಟ್ ನನ್ನು ಧರ್ಮಾಧಿಕಾರಿಯನ್ನಾಗಿಸುವ ಇಮ್ಮಡಿ ಹೆನ್ರಿಯ ರಾಜ ಕಾರಣ ಮತ್ತು ಧರ್ಮಾಧಿಕಾರಿಯಾದ ಮೇಲೆ, ರಾಷ್ಟ್ರದ ಆಡಳಿತ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸಲು ಹೊರಟ ಬೆಕೆಟ್ನ ಧರ್ಮಾಂಧತೆ, ಧರ್ಮ ಮತ್ತು ರಾಜಕಾರಣದ ನಡುವಣ ಸಂಬಂಧ ಮತ್ತು ಒಂದರ ಒಳಗೊಂದು ಹಾಸು ಹೊಕ್ಕಾಗಿರುವ ಪರಿಯನ್ನು ಬಿಂಬಿಸುತ್ತದೆ.

ಇದಲ್ಲದೆ ವಸಾಹತುಷಾಹಿ ಪ್ರತಿಮೆಗಳು, ಜಾತಿ ಪ್ರಜ್ಞೆ, ರಾಷ್ಟ್ರ ಮತ್ತು ಅಸ್ಮಿತೆಯ ಸಂಕಟಗಳು ಮತ್ತು ಹೆಣ್ಣಿನ ಬಗ್ಗೆ ಇರುವ ಧೋರಣೆ ಕುರಿತಂತೆ ಆನ್ವಿಯ ವ್ಯಂಗ್ಯ ನಾಟಕದಲ್ಲಿದೆ. ಎಲ್ಲಕ್ಕೂಮೀರಿ ಈ ನಾಟಕ ರಾಜಕೀಯವಾಗಿ ತುರ್ತಾಗಿ ಸಮಕಾಲೀನ ಅನ್ನಿಸುವುದು ಆಶ್ಚರ್ಯ ಮೂಡಿಸುತ್ತದೆ.
2015 ರಲ್ಲಿ ರಂಗ ಶಂಕರ ಕನ್ನಡ ನಾಟಕೋತ್ಸವದಲ್ಲಿ ವಂಕಟೇಶ್ ಪ್ರಸಾದ್ ರವರ ನಿರ್ದೇಶನದ ನಾಟಕ ಚೆರ್ರಿ ಆರ್ಚರ್ಡ್ನ ಪ್ರದರ್ಶನದ ಮೂಲಕ ತನ್ನ ಹುಟ್ಟು ಪಡೆದ ಬೆಂಗಳೂರು ಥಿಯೇಟರ್ ಕಂಪನಿ 'ಚೆರ್ರಿ ತೋಟ' ನಾಟಕದ ಯಶಸ್ವಿ 15 ಪ್ರದರ್ಶನ ನೀಡಿ ಈಗ ಪ್ರಕಾಶ್ ಬೆಳವಾಡಿ ನಿರ್ದೇಶನದ ಪ್ರೆಂಚ್ ಮೂಲದ ಜಾನ್ ಆನ್ವಿಯವರ 'ಬೆಕೆಟ್' ನಾಟಕವನ್ನು ಪ್ರಸ್ತುತ ಪಡಿಸುತ್ತಿದೆ.
ನಾಟಕ : ಬೆಕೆಟ್
ಪ್ರಸ್ತುತಿ: ಬೆಂಗಳೂರು ಥಿಯೇಟರ್ ಕಂಪನಿ
ಫ್ರೆಂಚ್ ಮೂಲ : ಜಾನ್ ಆನ್ವಿ
ನಿರ್ದೇಶನ : ಪ್ರಕಾಶ್ ಬೆಳವಾಡಿ
ಸ್ಥಳ :ರಂಗ ಶಂಕರ
ದಿನಾಂಕ : ಜನವರಿ 4
ಟಿಕೆಟ್ ದರ: 100 ರು/
ಸಂಪರ್ಕಿಸಿ : 99001 82400
ಟಿಕೆಟ್ ಬುಕ್ ಮಾಡಲು : www.bookmyshow.com
(ಒನ್ಇಂಡಿಯಾ ಸುದ್ದಿ)
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications