ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ
ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು.
ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ ರೆಡ್ಡಿ ನೇರ ಪಾತ್ರವಿರುವುದು ಬಯಲಾಗಿದೆ. ಈ ಬಗ್ಗೆ ಸಂಸದರು ಜನತೆಗೆ ಏನೆಂದು ಉತ್ತರ ಹೇಳುತ್ತಾರೆ ? ಶಾಸಕ ಸತೀಶ್ ರೆಡ್ಡಿ ಹಾಗೂ ಇನ್ನಿತರ ಕೊಲೆ ಪಾತಕಿಗಳನ್ನು ಪೊಲೀಸ್ ಇಲಾಖೆ ಈ ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಗರ ಉಪಾಧ್ಯಕ್ಷ ಬಿ. ಟಿ. ನಾಗಣ್ಣ ಇಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು .
ಬೆಂಗಳೂರಿನ ಎಲ್ಲಾ ವಲಯಗಳ ಸಹಾಯವಾಣಿ ಕೇಂದ್ರಗಳಲ್ಲಿ ಬಿಜೆಪಿಯ ಪ್ರಮುಖ ಮಂತ್ರಿಗಳು ಹಾಗೂ ಶಾಸಕರುಗಳ ನೇರ ಕೈವಾಡವಿದ್ದು ಎಲ್ಲರೂ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡು ಇದುವರೆವಿಗೂ ಬೆಡ್ ಸಿಗದೆ ಆಗಿರುವ ಸಾವಿರಾರು ಅಮಾಯಕ ರೋಗಿಗಳ ಸಾವಿಗೆ ನೇರ ಹೊಣೆಗಾರರಾಗಿದ್ದಾರೆಂದು ನಾಗಣ್ಣ ಆರೋಪಿಸಿದರು.

ಇಂತಹ ದೊಡ್ಡ ದುಷ್ಕೃತ್ಯಗಳಲ್ಲಿ ಪ್ರಭಾವಿಗಳ ಪಾತ್ರ ಇದ್ದೇ ಇರುತ್ತದೆ ಎಂಬುದು ಮೊದಲಿನಿಂದಲೂ ಆಮ್ ಆದ್ಮಿ ಪಕ್ಷದ ಸ್ಪಷ್ಟ ಅಭಿಪ್ರಾಯವಾಗಿತ್ತು . ಪ್ರಭಾವಿಗಳನ್ನು ರಕ್ಷಿಸಲು ಹೋಗಿ ಸಂಸದರು ಸಣ್ಣ ಸಣ್ಣ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ನೌಕರರನ್ನು ಬಂಧಿಸಿ ಪ್ರಕರಣವನ್ನು ದಿಕ್ಕು ತಪ್ಪಿಸುವ ಹುನ್ನಾರ ಕೈಗೊಂಡಿದ್ದರು. ಆದರೆ ಈಗ ಪ್ರಭಾವಿಗಳ ಬಣ್ಣ ಬಟಾಬಯಲಾಗಿದೆ.
ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ವಿರುದ್ಧ ಈಗಾಗಲೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ದೂರನ್ನು ಸಹ ಸಲ್ಲಿಸಲಾಗಿದೆ. ಕೂಡಲೇ ಸರ್ಕಾರವು ಪ್ರಕರಣದ ತನಿಖೆಯ ಹಾದಿಯನ್ನು ತಪ್ಪಿಸದೆ ತನ್ನದೇ ಪಕ್ಷದ ಪ್ರಭಾವಿಗಳು ಶಾಸಕರುಗಳು ಹಾಗೂ ಮಂತ್ರಿಗಳ ವಿರುದ್ಧ ತನಿಖೆ ಕೈಗೊಳ್ಳಲು ಹಾಲಿ ಉಚ್ಚನ್ಯಾಯಾಲಯದ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ನಾಗಣ್ಣ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ಮುಖಂಡರಾದ ಉಷಾ ಮೋಹನ್ ರವರು ಭಾಗವಹಿಸಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications