ಬೆಡ್ ಬ್ಲಾಕಿಂಗ್ ದಂಧೆ: ಶಾಸಕ ಸತೀಶ್ ರೆಡ್ಡಿ ಬಂಧಿಸಿ ವಿಚಾರಣೆ ನಡೆಸಿ
ಬೆಂಗಳೂರು, ಮೇ 6: ಎರಡು ದಿವಸಗಳ ಹಿಂದೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನಗರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕೊರೋನಾ ರೋಗಿಗಳ ಬೆಡ್ ಬ್ಲಾಕಿಂಗ್ ಅಕ್ರಮ ದಂಧೆಯನ್ನು ಬಯಲಿಗೆಳೆದಿದ್ದೇನೆಂದು ಪರಾಕ್ರಮ ಮೆರೆದಿದ್ದರು. ಆದರೆ ಈ ಅಕ್ರಮ ದಂಧೆಯಲ್ಲಿ ನೇರವಾಗಿ ಪಾಲ್ಗೊಂಡಿದ್ದ ಬೊಮ್ಮನಹಳ್ಳಿ ಬಿ ಜೆ ಪಿ ಶಾಸಕ ಸತೀಶ್ ರೆಡ್ಡಿರನ್ನೇ ಜತೆಯಲ್ಲಿಟ್ಟುಕೊಂಡು ಇಂಥ ಈ ದಂಧೆಯಲ್ಲಿ ಪಾಲ್ಗೊಂಡಿರುವ ಕೊಲೆಪಾತಕರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು.
ಆದರೆ ಇಂದು ಮಾಧ್ಯಮಗಳಲ್ಲಿ ಶಾಸಕ ಸತೀಶ್ ರೆಡ್ಡಿ ನೇರ ಪಾತ್ರವಿರುವುದು ಬಯಲಾಗಿದೆ. ಈ ಬಗ್ಗೆ ಸಂಸದರು ಜನತೆಗೆ ಏನೆಂದು ಉತ್ತರ ಹೇಳುತ್ತಾರೆ ? ಶಾಸಕ ಸತೀಶ್ ರೆಡ್ಡಿ ಹಾಗೂ ಇನ್ನಿತರ ಕೊಲೆ ಪಾತಕಿಗಳನ್ನು ಪೊಲೀಸ್ ಇಲಾಖೆ ಈ ಕೂಡಲೇ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಬೇಕು ಎಂದು ಆಮ್ ಆದ್ಮಿ ಪಕ್ಷದ ನಗರ ಉಪಾಧ್ಯಕ್ಷ ಬಿ. ಟಿ. ನಾಗಣ್ಣ ಇಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು .
ಬೆಂಗಳೂರಿನ ಎಲ್ಲಾ ವಲಯಗಳ ಸಹಾಯವಾಣಿ ಕೇಂದ್ರಗಳಲ್ಲಿ ಬಿಜೆಪಿಯ ಪ್ರಮುಖ ಮಂತ್ರಿಗಳು ಹಾಗೂ ಶಾಸಕರುಗಳ ನೇರ ಕೈವಾಡವಿದ್ದು ಎಲ್ಲರೂ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡು ಇದುವರೆವಿಗೂ ಬೆಡ್ ಸಿಗದೆ ಆಗಿರುವ ಸಾವಿರಾರು ಅಮಾಯಕ ರೋಗಿಗಳ ಸಾವಿಗೆ ನೇರ ಹೊಣೆಗಾರರಾಗಿದ್ದಾರೆಂದು ನಾಗಣ್ಣ ಆರೋಪಿಸಿದರು.

ಇಂತಹ ದೊಡ್ಡ ದುಷ್ಕೃತ್ಯಗಳಲ್ಲಿ ಪ್ರಭಾವಿಗಳ ಪಾತ್ರ ಇದ್ದೇ ಇರುತ್ತದೆ ಎಂಬುದು ಮೊದಲಿನಿಂದಲೂ ಆಮ್ ಆದ್ಮಿ ಪಕ್ಷದ ಸ್ಪಷ್ಟ ಅಭಿಪ್ರಾಯವಾಗಿತ್ತು . ಪ್ರಭಾವಿಗಳನ್ನು ರಕ್ಷಿಸಲು ಹೋಗಿ ಸಂಸದರು ಸಣ್ಣ ಸಣ್ಣ ಅಧಿಕಾರಿಗಳನ್ನು ಹಾಗೂ ಗುತ್ತಿಗೆ ನೌಕರರನ್ನು ಬಂಧಿಸಿ ಪ್ರಕರಣವನ್ನು ದಿಕ್ಕು ತಪ್ಪಿಸುವ ಹುನ್ನಾರ ಕೈಗೊಂಡಿದ್ದರು. ಆದರೆ ಈಗ ಪ್ರಭಾವಿಗಳ ಬಣ್ಣ ಬಟಾಬಯಲಾಗಿದೆ.
ಈ ಸಂಬಂಧ ಶಾಸಕ ಸತೀಶ್ ರೆಡ್ಡಿ ವಿರುದ್ಧ ಈಗಾಗಲೇ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ದೂರನ್ನು ಸಹ ಸಲ್ಲಿಸಲಾಗಿದೆ. ಕೂಡಲೇ ಸರ್ಕಾರವು ಪ್ರಕರಣದ ತನಿಖೆಯ ಹಾದಿಯನ್ನು ತಪ್ಪಿಸದೆ ತನ್ನದೇ ಪಕ್ಷದ ಪ್ರಭಾವಿಗಳು ಶಾಸಕರುಗಳು ಹಾಗೂ ಮಂತ್ರಿಗಳ ವಿರುದ್ಧ ತನಿಖೆ ಕೈಗೊಳ್ಳಲು ಹಾಲಿ ಉಚ್ಚನ್ಯಾಯಾಲಯದ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ನಾಗಣ್ಣ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮಹಿಳಾ ಮುಖಂಡರಾದ ಉಷಾ ಮೋಹನ್ ರವರು ಭಾಗವಹಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications