ಬೆಡ್ ಬ್ಲಾಕಿಂಗ್ ದಂಧೆ: ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಬಂಧಿಸುವಂತೆ ದೂರು
ಬೆಂಗಳೂರು, ಮೇ 26: ಸಿಲಿಕಾನ್ ಸಿಟಿಯ ದಕ್ಷಿಣ ವಲಯದಲ್ಲಿ ನಡೆದಿರುವ ಕೊವಿಡ್-19 ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಬಂಧಿಸುವಂತೆ ಆಗ್ರಹಿಸಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ರಿಗೆ ದೂರು ನೀಡಲಾಗಿದೆ.
ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆಪ್ತನ ಬಂಧನದ ಬೆನ್ನಲ್ಲೇ ಶಾಸಕ ಸತೀಶ್ ರೆಡ್ಡಿ ಮತ್ತು ಸಂಸದ ತೇಜಸ್ವಿ ಸೂರ್ಯ ಬಂಧನಕ್ಕೆ ಆಗ್ರಹಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿಯು ಪೊಲೀಸರಿಗೆ ದೂರು ಸಲ್ಲಿಸಿದೆ.
ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಶಾಸಕರು ತಮಗೆ ಬೇಕಾದವರಿಗೆ ಬೆಡ್ ವ್ಯವಸ್ಥೆ ಮಾಡಿಸಿಕೊಂಡಿರುವುದು ಅದಕ್ಕಾಗಿ ತಮ್ಮನ್ನು ಬಳಸಿಕೊಂಡಿರುವ ಬಗ್ಗೆ ಆರೋಪಿ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಬಾಬು ನೀಡಿರುವ ಹೇಳಿಕೆ ಮತ್ತು ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಆಧಾರದ ಮೇಲೆ ಸಿಸಿಬಿ ಪೊಲೀಸರು ಶಾಸಕ ಸತೀಶ್ ರೆಡ್ಡಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ.

ಏನಿದು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ವಾರ್ ರೂಂನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು. ಅದೇ ಪ್ರಕರಣ ಸಂಬಂಧ ಕೆ ಎಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಮುಖ ಆರೋಪಿ ಮಂಜುನಾಥ್ ಎಂಬಾತನನ್ನು ಬಂಧಿಸಲಾಗಿತ್ತು. ಕಳೆದ ಮೇ 12ರಂದು ಇಸ್ರೋ ಲೇಔಟ್ ನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ನಡೆಸಿ ಹಣ ಪಡೆಯಲು ಆರೋಪಿ ಸಂಚು ರೂಪಿಸಿದ್ದನು ಎಂದು ತಿಳಿದು ಬಂದಿದೆ. ಬೆಡ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಳ್ಳಲು ಮನೆಗೆ ತೆರಳಿದ್ದ ಮತ್ತೊಬ್ಬ ಆರೋಪಿ ನವೀನ್ ಅನ್ನು ಪೊಲೀಸರು ಮೊದಲು ಬಂಧಿಸಿದ್ದರು. ಈ ನವೀನ್ ನೀಡಿರುವ ಹೇಳಿಕೆ ಆಧಾರದ ಮೇಲೆ ಪ್ರಕರಣದ ಪ್ರಮುಖ ಆರೋಪಿ ಮಂಜುನಾಥ್ ಅನ್ನು ಅರೆಸ್ಟ್ ಮಾಡಲಾಗಿತ್ತು.
Recommended Video
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications