ಬೆಡ್ ಬ್ಲಾಕಿಂಗ್ ಪ್ರಕರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
ಬೆಂಗಳೂರು, ಮೇ 06: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ.
ಸಂಸದರು ಸುಳ್ಳು ಹೇಳಿ ತಪ್ಪು ಮಾಹಿತಿ ರವಾನಿಸಿದ್ದಾರೆ ಎಂದು ಬೆಂಗಳೂರು ಕಾಂಗ್ರೆಸ್ ನಗರದ ಘಟಕವು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ದೂರು ಸಲ್ಲಿಸಿದೆ. ಸಂಸದರು ಸುಳ್ಳು ಹೇಳುತ್ತಿದ್ದಾರೆ, ಜನರಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ, ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಕ್ರಮವಾಗಿ ಬೆಡ್ ಬುಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ. ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಕಳೆದ 1 ತಿಂಗಳ ಅವಧಿಯಲ್ಲಿನ 10 ಸಾವಿರಕ್ಕೂ ಅಧಿಕ ರೋಗಿಗಳಿಗೆ ಬೆಡ್ ಹಂಚಿಕೆ, ವಿಧಾನ, ಸಮಯವನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಬೆಂಗಳೂರು ದಕ್ಷಿಣ ಸಂಸದರ ಕಚೇರಿ ಬಿಬಿಎಂಪಿ ಅಧಿಕಾರಿಗಳು, ಆಸ್ಪತ್ರೆಗಳ ಹಾಗೂ ವಲಯವಾರು ಸಹಾಯವಾಣಿ ಸಿಬ್ಬಂದಿಗಳ ಅವ್ಯವಹಾರವನ್ನು ಬಯಲಿಗೆಳೆದಿದೆ.
ತನಿಖೆ ನಡೆಸಿದಾಗ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಕೆಲವು ಖಾಸಗಿ ಆಸ್ಪತ್ರೆಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಸಾರ್ವಜನಿಕರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂಡಿದೆ.












Click it and Unblock the Notifications