ಬೆಡ್ ಬ್ಲಾಕಿಂಗ್; ತೇಜಸ್ವಿಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆಗಳು!
ಬೆಂಗಳೂರು, ಮೇ 05; "ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ಧಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
Recommended Video
ಬೆಂಗಳೂರು ನಗರದಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಬಹಿರಂಗಪಡಿಸಿದ್ದರು. ಹೋಂ ಐಸೋಲೇಷನ್ನಲ್ಲಿರುವ ವ್ಯಕ್ತಿಗಳ ಹೆಸರಿನಲ್ಲಿ ಹೇಗೆ ಬೆಡ್ ಬುಕ್ ಆಗುತ್ತದೆ ಎಂಬ ಸತ್ಯ ತೆರೆದಿಟ್ಟಿದ್ದರು.
ಕರ್ನಾಟಕ ಸರ್ಕಾರ ಬೆಡ್ ಬ್ಲಾಕಿಂಗ್ ಆರೋಪವನ್ನು ಗಂಭೀರವಾಗಿ ಪರಿಗಣಿಸಿತ್ತು. ಈ ಕುರಿತು ಸಿಸಿಬಿ ತನಿಖೆಗೆ ಆದೇಶವನ್ನು ನೀಡಲಾಗಿದೆ. ಈಗಾಗಲೇ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತೇಜಸ್ವಿ ಸೂರ್ಯ ಕಾರ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ. ಹಲವಾರು ಜನರು ಸಂಸದರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಕುರಿತು ಬುಧವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಅದನ್ನೂ ಓದಿ ಹೇಳಿಬಿಡಿ
ಸಿದ್ದರಾಮಯ್ಯ ಅವರು "ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ" ಎಂದು ಟ್ವೀಟ್ ಮಾಡಿದ್ದಾರೆ.

ಜನರಿಗೆ ತಿಳಿಸಿ
"ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ ಅದನ್ನೂ ರಾಜ್ಯದ ಜನತೆಗೆ ತಿಳಿಸಿ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
10 ದಿನಗಳು ಆಯಿತು ಎನ್ನುತ್ತೀರಿ
"ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ?"ಎಂದು ಸಿದ್ದರಾಮಯ್ಯ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.
|
ಕೊರೊನಾ ಯಾಕೆ ಬಳಸುತ್ತೀರಿ?
"ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
|
ಯಾವ ವಿರುದ್ಧ ಕಾರ್ಯಾಚರಣೆ
"ತೇಜಸ್ವಿಸೂರ್ಯ,ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರೇ,
ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
GST: ಕಾಂಗ್ರೆಸ್ ಜನರ ಪರವೋ ಅಥವಾ ಹೆಚ್ಚಿನ ತೆರಿಗೆ ದರದ ಪರವೋ? ಮಾಜಿ ಸಿಎಂ ನೇರ ಪ್ರಶ್ನೆ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು











Click it and Unblock the Notifications