ಬೀಚಿಯವರ 'ನನ್ನ ಭಯಾಗ್ರಫಿ' ಆಧಾರಿತ ನಾಟಕ 'ಮಾನಸಪುತ್ರ'
ಕನ್ನಡ ಸಾಹಿತ್ಯಲೋಕ ಕಂಡ ವಿಶಿಷ್ಟ ಹಾಸ್ಯ ಬರಹಗಾರ, ಚಿಂತಕ ಬೀಚಿ (ರಾಯಸಂ ಭೀಮಸೇನ ರಾವ್) ಅವರ ಜೀವನಾಧಾರಿತ ಕನ್ನಡ ನಾಟಕ 'ಮಾನಸಪುತ್ರ' ಏಪ್ರಿಲ್ 13ರಂದು ಬೆಂಗಳೂರಿನಲ್ಲಿ ಪ್ರದರ್ಶನ ಕಾಣುತ್ತಿದೆ. 'ಕಲಾವಿಲಾಸಿ' ತಂಡ ಈ ನಾಟಕವನ್ನು ಪ್ರಸ್ತುತಪಡಿಸುತ್ತಿದೆ.
ನಾಟಕದ ಹೆಸರು : ಮಾನಸಪುತ್ರ
ಆಧಾರ : ಬೀಚಿಯವರ 'ನನ್ನ ಭಯಾಗ್ರಫಿ' ಮತ್ತು ಇತರೆ ಅನುಭವಗಳು
ರಚನೆ - ನಿರ್ದೇಶನ : ಬಸವರಾಜ ಎಮ್ಮಿಯವರ
ಅಭಿನಯಿಸುವ ತಂಡ : ಕಲಾವಿಲಾಸಿ
ದಿನಾಂಕ ಮತ್ತು ಸಮಯ : 13 ಏಪ್ರಿಲ್ 2019, ಶನಿವಾರ. ಸಂಜೆ 7.00 ಕ್ಕೆ
ಸ್ಥಳ : ಸೇವಾಸದನ. 14ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು
ನಾಟಕದ ಅವಧಿ : 80 ನಿಮಿಷಗಳು.
ಪ್ರವೇಶ ದರ : 100 ರು.

ನಾಟಕದ ಕುರಿತು:
"ಮಾನಸ ಪುತ್ರ" ನಾಟಕವು ಹಾಸ್ಯ ಬರಹಗಾರ ಚಿಂತಕ ಬೀಚಿಯವರ ಜೀವನಾಧಾರಿತ ನಾಟಕವಾಗಿರುತ್ತದೆ. ಪ್ರಮುಖವಾಗಿ ಬೀಚಿಯವರ ಆತ್ಮಚರಿತ್ರೆ ಹಾಗೂ ಅವರ ಇತರೆ ಸಾಹಿತ್ಯವನ್ನು ಆಧರಿಸಿ ಈ ನಾಟಕವನ್ನು ರಚಿಸಲಾಗಿದ್ದು, ಇಡಿಯಾಗಿ ಹಲವು ಭಾವಗಳುಳ್ಳ ನಾಟಕವು ಸಾಹಿತಿಯ ಬದುಕಿನ ಒಳ ನೋಟವನ್ನು ಪ್ರೇಕ್ಷಕರಿಗೆ ಕೊಡುತ್ತದೆ.
ನಾಟಕದ ಪ್ರಮುಖ ಆಕರ ಗ್ರಂಥವಾಗಿರುವ "ನನ್ನ ಭಯಾಗ್ರಫಿ" ಕೃತಿಯು ಸಾಮಾನ್ಯವಾಗಿ ನಮಗೆ ಕಾಣ ಸಿಗುವ ಒಂದು ಕ್ರಮಬದ್ದ ಜೀವನ ಚರಿತ್ರೆಯಂತೆ ಕಂಡು ಬರುವುದಿಲ್ಲ. ಬದಲಿಗೆ ತಮ್ಮ ಅಸಂಖ್ಯ ಅನುಭವಗಳ ಪ್ರಾಮಾಣಿಕ ಸಂಗ್ರಹದಂತೆ ಲೇಖಕರು ಆತ್ಮಚರಿತ್ರೆಯನ್ನು ಓದುಗರ ಮುಂದೆ ಇಡುತ್ತಾರೆ. ನಾಟಕವನ್ನೂ ಅದೇ ಆಶಯದಲ್ಲಿ ಕಟ್ಟಿ ಸಾಹಿತಿಯ ಗತ ಜೀವನವನ್ನು ರಂಗದ ಮೇಲಿನ ಬೆಳಕು ಭಾವಗಳ ಮೂಲಕ ಒರೆಹಚ್ಚಿ ನೋಡುಗರಿಗೆ ಪುನರ್ ಪರಿಚಯಿಸಲು ಪ್ರಯತ್ನಿಸಲಾಗಿದೆ.

ತಂಡದ ಕುರಿತು:
"ಕಲಾವಿಲಾಸಿ" - ಕಲೆಯಲ್ಲಿ ಸುಖವನ್ನು ಕಾಣುವ ಬಯಕೆಯಲ್ಲಿ ಕಟ್ಟಿರುವ ಕಲಾ ತಂಡ. ವಿವಿಧ ಕ್ಷೇತ್ರಗಳಲ್ಲಿ ವೃತ್ತಿಪರರಾಗಿದ್ದುಕೊಂಡು ಕಲೆಯ ಕಡೆಗೆ ಅಪಾರ ಒಲವುಳ್ಳ, ರಂಗಭೂಮಿ ಮತ್ತು ದೃಶ್ಯ ಮಾಧ್ಯಮದಲ್ಲಿ ಸುಮಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿರುವ ನಾಡಿನ ವಿವಿಧ ಭಾಗದ ಯುವಕರು ಸೇರಿ ಕಟ್ಟಿರುವ ಕಲಾತಂಡ ಇದಾಗಿರುತ್ತದೆ. ಪಿ. ಲಂಕೇಶರ ಸ್ಟೆಲ್ಲಾ ಎಂಬ ಹುಡುಗಿ ನಾಟಕ, ಪಥಿಕ, ಮಂಥನ ಎನ್ನುವ ಕಿರು ಚಿತ್ರಗಳು, ಪಸರಿಸಲಿ ಕನ್ನಡ ಎನ್ನುವ ಹಾಡಿನ ನಿರ್ದೇಶನ ಹಾಗೂ ಕನ್ನಡ ರಂಗಭೂಮಿಯ ಕೆಲವು ಪ್ರಮುಖ ನಾಟಕಗಳಲ್ಲಿ ಕೆಲಸ ಮಾಡಿರುವ ಸಣ್ಣ ಅನುಭವ ತಂಡದ ಸದಸ್ಯರಿಗೆ ಇರುತ್ತದೆ.

ಕನ್ನಡ ಕಲಾ ರಂಗದ ಶ್ರೀಮಂತಿಕೆಗೆ ಪೂರಕವಾಗುವಂತೆ ಕನ್ನಡತನವನ್ನು ಬಿಂಬಿಸುವ ಕೆಲಸವನ್ನು ಮಾಡುವ ಗುರಿಯನ್ನು ಕಲಾವಿಲಾಸಿ ಹೊಂದಿರುತ್ತದೆ.
-
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ











Click it and Unblock the Notifications