ಬೀಚಿಯವರ 'ನನ್ನ ಭಯಾಗ್ರಫಿ' ಆಧಾರಿತ ನಾಟಕ 'ಮಾನಸಪುತ್ರ'
ಕನ್ನಡ ಸಾಹಿತ್ಯಲೋಕ ಕಂಡ ವಿಶಿಷ್ಟ ಹಾಸ್ಯ ಬರಹಗಾರ, ಚಿಂತಕ ಬೀಚಿ (ರಾಯಸಂ ಭೀಮಸೇನ ರಾವ್) ಅವರ ಜೀವನಾಧಾರಿತ ಕನ್ನಡ ನಾಟಕ 'ಮಾನಸಪುತ್ರ' ಏಪ್ರಿಲ್ 13ರಂದು ಬೆಂಗಳೂರಿನಲ್ಲಿ ಪ್ರದರ್ಶನ ಕಾಣುತ್ತಿದೆ. 'ಕಲಾವಿಲಾಸಿ' ತಂಡ ಈ ನಾಟಕವನ್ನು ಪ್ರಸ್ತುತಪಡಿಸುತ್ತಿದೆ.
ನಾಟಕದ ಹೆಸರು : ಮಾನಸಪುತ್ರ
ಆಧಾರ : ಬೀಚಿಯವರ 'ನನ್ನ ಭಯಾಗ್ರಫಿ' ಮತ್ತು ಇತರೆ ಅನುಭವಗಳು
ರಚನೆ - ನಿರ್ದೇಶನ : ಬಸವರಾಜ ಎಮ್ಮಿಯವರ
ಅಭಿನಯಿಸುವ ತಂಡ : ಕಲಾವಿಲಾಸಿ
ದಿನಾಂಕ ಮತ್ತು ಸಮಯ : 13 ಏಪ್ರಿಲ್ 2019, ಶನಿವಾರ. ಸಂಜೆ 7.00 ಕ್ಕೆ
ಸ್ಥಳ : ಸೇವಾಸದನ. 14ನೇ ಅಡ್ಡರಸ್ತೆ, ಮಲ್ಲೇಶ್ವರ, ಬೆಂಗಳೂರು
ನಾಟಕದ ಅವಧಿ : 80 ನಿಮಿಷಗಳು.
ಪ್ರವೇಶ ದರ : 100 ರು.

ನಾಟಕದ ಕುರಿತು:
"ಮಾನಸ ಪುತ್ರ" ನಾಟಕವು ಹಾಸ್ಯ ಬರಹಗಾರ ಚಿಂತಕ ಬೀಚಿಯವರ ಜೀವನಾಧಾರಿತ ನಾಟಕವಾಗಿರುತ್ತದೆ. ಪ್ರಮುಖವಾಗಿ ಬೀಚಿಯವರ ಆತ್ಮಚರಿತ್ರೆ ಹಾಗೂ ಅವರ ಇತರೆ ಸಾಹಿತ್ಯವನ್ನು ಆಧರಿಸಿ ಈ ನಾಟಕವನ್ನು ರಚಿಸಲಾಗಿದ್ದು, ಇಡಿಯಾಗಿ ಹಲವು ಭಾವಗಳುಳ್ಳ ನಾಟಕವು ಸಾಹಿತಿಯ ಬದುಕಿನ ಒಳ ನೋಟವನ್ನು ಪ್ರೇಕ್ಷಕರಿಗೆ ಕೊಡುತ್ತದೆ.
ನಾಟಕದ ಪ್ರಮುಖ ಆಕರ ಗ್ರಂಥವಾಗಿರುವ "ನನ್ನ ಭಯಾಗ್ರಫಿ" ಕೃತಿಯು ಸಾಮಾನ್ಯವಾಗಿ ನಮಗೆ ಕಾಣ ಸಿಗುವ ಒಂದು ಕ್ರಮಬದ್ದ ಜೀವನ ಚರಿತ್ರೆಯಂತೆ ಕಂಡು ಬರುವುದಿಲ್ಲ. ಬದಲಿಗೆ ತಮ್ಮ ಅಸಂಖ್ಯ ಅನುಭವಗಳ ಪ್ರಾಮಾಣಿಕ ಸಂಗ್ರಹದಂತೆ ಲೇಖಕರು ಆತ್ಮಚರಿತ್ರೆಯನ್ನು ಓದುಗರ ಮುಂದೆ ಇಡುತ್ತಾರೆ. ನಾಟಕವನ್ನೂ ಅದೇ ಆಶಯದಲ್ಲಿ ಕಟ್ಟಿ ಸಾಹಿತಿಯ ಗತ ಜೀವನವನ್ನು ರಂಗದ ಮೇಲಿನ ಬೆಳಕು ಭಾವಗಳ ಮೂಲಕ ಒರೆಹಚ್ಚಿ ನೋಡುಗರಿಗೆ ಪುನರ್ ಪರಿಚಯಿಸಲು ಪ್ರಯತ್ನಿಸಲಾಗಿದೆ.

ತಂಡದ ಕುರಿತು:
"ಕಲಾವಿಲಾಸಿ" - ಕಲೆಯಲ್ಲಿ ಸುಖವನ್ನು ಕಾಣುವ ಬಯಕೆಯಲ್ಲಿ ಕಟ್ಟಿರುವ ಕಲಾ ತಂಡ. ವಿವಿಧ ಕ್ಷೇತ್ರಗಳಲ್ಲಿ ವೃತ್ತಿಪರರಾಗಿದ್ದುಕೊಂಡು ಕಲೆಯ ಕಡೆಗೆ ಅಪಾರ ಒಲವುಳ್ಳ, ರಂಗಭೂಮಿ ಮತ್ತು ದೃಶ್ಯ ಮಾಧ್ಯಮದಲ್ಲಿ ಸುಮಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿರುವ ನಾಡಿನ ವಿವಿಧ ಭಾಗದ ಯುವಕರು ಸೇರಿ ಕಟ್ಟಿರುವ ಕಲಾತಂಡ ಇದಾಗಿರುತ್ತದೆ. ಪಿ. ಲಂಕೇಶರ ಸ್ಟೆಲ್ಲಾ ಎಂಬ ಹುಡುಗಿ ನಾಟಕ, ಪಥಿಕ, ಮಂಥನ ಎನ್ನುವ ಕಿರು ಚಿತ್ರಗಳು, ಪಸರಿಸಲಿ ಕನ್ನಡ ಎನ್ನುವ ಹಾಡಿನ ನಿರ್ದೇಶನ ಹಾಗೂ ಕನ್ನಡ ರಂಗಭೂಮಿಯ ಕೆಲವು ಪ್ರಮುಖ ನಾಟಕಗಳಲ್ಲಿ ಕೆಲಸ ಮಾಡಿರುವ ಸಣ್ಣ ಅನುಭವ ತಂಡದ ಸದಸ್ಯರಿಗೆ ಇರುತ್ತದೆ.

ಕನ್ನಡ ಕಲಾ ರಂಗದ ಶ್ರೀಮಂತಿಕೆಗೆ ಪೂರಕವಾಗುವಂತೆ ಕನ್ನಡತನವನ್ನು ಬಿಂಬಿಸುವ ಕೆಲಸವನ್ನು ಮಾಡುವ ಗುರಿಯನ್ನು ಕಲಾವಿಲಾಸಿ ಹೊಂದಿರುತ್ತದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications