ರಂಗಶಂಕರದಲ್ಲಿ ಮತ್ತೊಮ್ಮೆ ಬೀದಿಯೊಳಗೊಂದು ಮನೆಯ ಮಾಡಿ
ಬೆಂಗಳೂರು, ಮೇ 16: ಮರಾಠಿ ನಾಟಕ "ಉಣೇ ಪುರೇ ಶಹರ್ ಏಕ್ " ನಾಟಕ ಖ್ಯಾತಿಯ ಮೋಹಿತ್ ಟಾಕಲ್ಕರ್ ನಿರ್ದೇಶನದ ಕನ್ನಡ ನಾಟಕ ಬೀದಿಯೊಳಗೊಂದು ಮನೆಯ ಮಾಡಿ ರಂಗಶಂಕರದಲ್ಲಿ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.
ವಿಕೃತಗೊಳ್ಳುತ್ತಿರುವ, ಭಕ್ತಿಯನ್ನು ಕಳಚಿ ಢಾಂಬಿಕತೆಯ ಮೆರುಗು ಪಡೆಯುತ್ತಿರುವ ಧಾರ್ಮಿಕ ಉತ್ಸವಗಳನ್ನು ವ್ಯಂಗ್ಯ ಮತ್ತು ತಮಾಷೆಯಿಂದ ನೋಡುತ್ತಾ, ಜೊತೆಯಲ್ಲೇ ಸಾಂಪ್ರಾದಾಯಿಕ ಆಚರಣೆಗಳನ್ನು ವಿಡಂಬಿಸುವ ನಾಟಕ 'ಬೀದಿಯೊಳಗೊಂದು ಮನೆಯ ಮಾಡಿ...'
ಗಣೇಶ ವಿಸರ್ಜನೆಯ ದಿನ ಪುಣೆಯ ನಟ್ಟನಡುವಿನ ಬೀದಿಯೊಂದರಲ್ಲಿ ಮಧ್ಯಮವರ್ಗದ ಮಹಾರಾಷ್ಟ್ರದ ಬ್ರಾಹ್ಮಣ ಸಂಸಾರಗಳ ನಡುವೆ ಮನೆ ಮಾಡಿರುವ ಒಂದು ಪುಟ್ಟ ಸಂಸಾರದ ಕತೆಯಿದು.

ಮನೆಯೊಡೆಯ ಶ್ರೀಪಾದ ಮತ್ತು ಅವನ ಹೆಂಡತಿ ಸುಕನ್ಯ ಒಂದು ಒಪ್ಪಂದಕ್ಕೆ ಬಂದಿದ್ದಾರೆ - ಎರಡು ವರ್ಷಕ್ಕೊಂದು ಸಲವಾದರೂ ತಮ್ಮ ಮನೆಯ ಸ್ವಾಸ್ಥ್ಯ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು, ಕೆಳಗಿನ ಬೀದಿಯ ಮೆರವಣಿಗೆಯ ಬೆಳಕಿರಲಿ, ಒಂದಿನಿತು ಸದ್ದೂ ಮನೆ ಹೊಕ್ಕದಂತೆ ಕಿಟಿಕಿ-ಬಾಗಿಲು ಹಾಕಿ ರಾತ್ರಿಯನ್ನು ಕಳೆಯಲು, ಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದಾರೆ.
ದಾವಣಗೆರೆಯಿಂದ ಶ್ರೀಪಾದನ ದೊಡ್ಡಮ್ಮ ಬರುವವರೆಗೂ, ಸುಕನ್ಯಳ ಸಣ್ಣಪುಟ್ಟ ತಗಾದೆಗಳ ನಡುವೆಯೂ ಒಂದಷ್ಟು ಹೊತ್ತು ಎಲಾ ಅಂದುಕೊಂಡಂತೇ ನಡೆಯುತ್ತದೆ. ಇದ್ದಕ್ಕಿದ್ದಂತೇ ಬಂದಿಳಿಯುವ ದೊಡ್ಡಮ್ಮನ ಒಂದೇ ಆಸೆ, ಈ ಮನೆಯ ಬಾಲ್ಕನಿಯಿಂದ ಗಣಪತಿ ವಿಸರ್ಜನೆಯ ಮೆರವಣಿಗೆಯನ್ನು ನೋಡುವುದು.
ದೊಡ್ಡಮ್ಮನ ಆಸೆ ಮತ್ತು ಶ್ರೀಪಾದನ ಹಟ ನಾಟಕದ ಅನೇಕ ಹಾಸ್ಯ ಘಟನೆಗಳಿಗೆ, ಗಂಭೀರ ಚರ್ಚೆಗಳಿಗೆ ಕಾರಣವಾಗುತ್ತದೆ. ದೊಡ್ಡಮ್ಮನ ಎಲ್ಲಾ ಸಂಚುಗಳು ವಿಫಲವಾಗುತ್ತಾ ಹೋದಂತೆ ನಾಟಕ ಗಾಢವಾಗುತ್ತಾ ಹೋಗುತ್ತದೆ. ಧರ್ಮ, ವಿಚಾರಗಳ ಸಂಘರ್ಷ ಹೆಚ್ಚುತ್ತಾ ಹೋದಂತೆ, ಮಧ್ಯಮವರ್ಗದ ಸಾಂಸಾರಿಕ
ರಾಜಕೀಯವನ್ನೂ ನಾಟಕ ಬಿಡಿಸುತ್ತಾ ಹೋಗುತ್ತದೆ.
ಮರಾಠಿ ಮೂಲ ಢೋಲ್ ತಾಷೆ : ರಚನೆ : ಚಂ ಪ್ರ ದೇಶಪಾಂಡೆ
ಕನ್ನಡಕ್ಕೆ : ಶ್ರೀಪತಿ ಮಂಜನಬೈಲ್, ಸುರೇಂದ್ರನಾಥ್
ನಿರ್ದೇಶನ : ಮೋಹಿತ್ ಟಾಕಲ್ಕರ್
ಕನ್ನಡ | 90 ನಿಮಿಷ,
ದಿನಾಂಕ, ಸಮಯ: ಮೇ 19, ಮಧ್ಯಾಹ್ನ 3:30 ಮತ್ತು ಸಂಜೆ 7:30
ರಂಗ ಶಂಕರ, ಜೆಪಿ ನಗರ, ಬೆಂಗಳೂರು | ಟಿಕೆಟ್ ದರ 150/- ,
ಟಿಕೆಟ್ಗಳು ರಂಗ ಶಂಕರದಲ್ಲಿ ದೊರೆಯುತ್ತವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications