ದೇವ್ರಾಣೆಗೂ ಉದ್ಧಾರವಾಗೋಲ್ಲ: ಕೃಷ್ಣ ಬೈರೇಗೌಡ ವ್ಯಥೆ

ಸ್ವಕ್ಷೇತ್ರವಾದ ಬ್ಯಾಟರಾಯನಪುರದಲ್ಲಿ ಬೇಗೂರು ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಯುವ ಶಾಸಕ ಕೃಷ್ಣ ಬೈರೇಗೌಡ ಅವರು ಸ್ಥಳೀಯ ಶಾಸಕ ಮತ್ತು ಸಂಸದರ ನಿಧಿಯಿಂದ ನೀಡುವ ಸವಲತ್ತುಗಳನ್ನು ಜನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಹಲವು ಭಾಗಗಳಲ್ಲಿ ಸ್ಥಳೀಯ ಸಂಸದರ ನಿಧಿಯಿಂದ ಸೌರ ದೀಪ ಅಳವಡಿಸಲಾಗಿತ್ತು. ಆದರೆ ಈಗ ಅಲ್ಲಿ ದೀಪಗಳೇ ಇಲ್ಲ. ಬ್ಯಾಟರಿ, ಕಂಬ, ಲೈಟು ಬಲ್ಬುಗಳನ್ನು ಕದ್ದೊಯ್ದಿದ್ದಾರೆ. ಹೀಗಾದರೆ ನಿಮ್ಮನ್ನು ಸರಕಾರ ಹಾಗಿರಲಿ, ಆ ಭಗವಂತನೂ ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಅವರು ಖೇದ ವ್ಯಕ್ತಪಡಿಸಿದರು.
ಇಷ್ಟೇ ಅಲ್ಲ ರಾಜ್ಯದ ವಿವಿಧ ಭಾಗಗಳಲ್ಲಿಯೂ ಇಂತಹುದೇ ಕಂಡುಬರುತ್ತದೆ. ಸರ್ತೆ, ಚರಂಡಿಗೆ ಹಾಕಿರುವ ಕಲ್ಲು, ಚಪ್ಪಡಿಗಳನ್ನೂ ಎತ್ತಿಕೊಂಡು ಹೋಗಿ ತಮ್ಮ ಮನೆಗಳಿಗೆ ಹಾಕಿಕೊಳ್ಳುತ್ತಾರೆ. ಇಷ್ಟೊಂದು ದುರಾಸೆ ಮನುಷ್ಯನಿಗೆ ಬರಬಾರದು ಎಂದು ಸಚಿವ ಕೃಷ್ಣ ಬೈರೇಗೌಡ ಮಾರ್ಮಿಕವಾಗಿ ಹೇಳಿದರು.
ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿಎನ್ ಲಕ್ಷ್ಮಯ್ಯ, ಬೆಂಗಳೂರು ಉತ್ತರ ತಾಲೂಕು ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ದಿಬ್ಬೂರು ಜಯಣ್ಣ, ದೊಡ್ಡಜಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ ಶ್ರೀನಿವಾಸಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ ಅಶೋಕನ್, ದಾನೇಗೌಡ, ಶುಭ ನರಸಿಂಹ ಮೂರ್ತಿ ಬೆಂಗಳೂರು ನಗರ ಕೃಷಿಕ್ ಸಮಾಜದ ಅಧ್ಯಕ್ದಷ ಮಂಜುನಾಥ್ ಗೌಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications