ಬಿಇಎಲ್ ನಿವೃತ್ತ ನೌಕರ ರಾಜಾರಾಮ್ ಕೊಲೆ ಮಾಡಿಸಿದ್ದು ಮಗಳು
ಬೆಂಗಳೂರು, ಡಿಸೆಂಬರ್ 11 : ಬಿಇಎಲ್ ನಿವೃತ್ತ ನೌಕರ ರಾಜಾರಾಮ್ ಕೊಲೆ ಪ್ರಕರಣಕ್ಕೆ ಸಂಬಂಧಿದಂತೆ ರಾಜಾರಾಮ್ ಪುತ್ರಿ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರಿಯೇ ಸ್ನೇಹಿತರ ಜೊತೆ ಸೇರಿ ತಂದೆಯನ್ನು ಕೊಲೆ ಮಾಡಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ.
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನಿವೃತ್ತ ನೌಕರ ರಾಜಾರಾಮ್ (73) ನಾಪತ್ತೆಯಾಗಿದ್ದಾರೆ ಎಂದು ಅವರ ಪುತ್ರಿ ಮಧುಮತಿ ವಿದ್ಯಾರಣ್ಯಪುರ ಪೊಲೀಸರಿಗೆ ನವೆಂಬರ್ 11ರಂದು ದೂರು ನೀಡಿದ್ದರು. ನವೆಂಬರ್ 18ರಂದು ರಾಜಾರಾಮ್ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮಧುಮತಿ ಮತ್ತು ಆಕೆಯ ಸ್ನೇಹಿತರನ್ನು ಬಂಧಿಸಿದ್ದಾರೆ. [ಮಗುವಿಗೆ... ಅಪ್ಪನ ಪ್ರೀತಿಗಿಂತ, ಮಿಗಿಲಾದ ಗಿಫ್ಟ್ ಎಲ್ಲಿದೆ?]

ಘಟನೆಯ ವಿವರ : ರಾಜಾರಾಮ್ ಅವರು ಪುತ್ರಿ ಮಧುಮತಿಗೆ ಬಿಳೇಕಹಳ್ಳಿಯಲ್ಲಿ ಫ್ಲ್ಯಾಟ್ಕೊಡಿಸಿ, ವಿದ್ಯಾರಣ್ಯಪುರದಲ್ಲಿ ಪತ್ಯೇಕವಾಗಿ ವಾಸವಾಗಿದ್ದರು. ವಿದ್ಯಾರಣ್ಯಪುರದಲ್ಲಿರುವ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಮಧುಮತಿ ತಂದೆಯನ್ನು ಒತ್ತಾಯಿಸುತ್ತಿದ್ದಳು. [ಮಗಳನ್ನು ಕೊಲ್ಲುವಾಗ ತಾಯಿ ಪ್ರೀತಿ ಎಲ್ಲಿ ಹೋಗಿತ್ತು?]
ಆಸ್ತಿಯನ್ನು ಮಧುಮತಿಗೆ ನೀಡಲು ರಾಜಾರಾಮ್ ಒಪ್ಪಿರಲಿಲ್ಲ. ಇದರಿಂದ ಅಸಮಧಾನಗೊಂಡ ಮಧುಮತಿ ಸ್ನೇಹಿತರ ಜೊತೆ ಸೇರಿ ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಳು. ಅದರಂತೆ ನವೆಂಬರ್ 11ರಂದು ಬೆಳಗ್ಗೆ ವಾಯುವಿಹಾರಕ್ಕೆ ಹೋಗಿದ್ದ ರಾಜಾರಾಮ್ ಅವರನ್ನು ಅಪಹರಣ ಮಾಡಲಾಗಿತ್ತು. [ಮಗಳಿಗೆ ಕಿಡ್ನಿ ಕೊಟ್ಟು, ಮರುಜೀವ ನೀಡಿದ ತಂದೆ]
ಅವರನ್ನು ಕೊಲೆ ಮಾಡಿ, ಕಾರಿನಲ್ಲಿ ಶವವನ್ನು ಆಂಧ್ರಪ್ರದೇಶದ ಹಿಂದೂಪುರಕ್ಕೆ ಸಾಗಿಸಿ ಅಲ್ಲಿ ಸುಡಲು ಪ್ರಯತ್ನ ನಡೆಸಲಾಗಿತ್ತು. ನವೆಂಬರ್ 18ರಂದು ಹಿಂದೂಪುರದಲ್ಲಿ ರಾಜಾರಾಮ್ ಶವ ಪತ್ತೆಯಾಗಿತ್ತು. ಅಂದಿನಿಂದಲೂ ಮಧುಮತಿ ತಲೆಮರೆಸಿಕೊಂಡಿದ್ದಳು.
ನಾಪತ್ತೆ ದೂರು ನೀಡಿದ್ದಳು : ಸ್ನೇಹಿತರ ಸಹಾಯದಿಂದ ತಂದೆಯನ್ನು ಅಪಹರಣ ಮಾಡಿಸಿ, ಕೊಲೆ ಮಾಡಿದ ಬಳಿಕ ಬೆಂಗಳೂರಿಗೆ ಬಂದಿದ್ದ ಮಧುಮತಿ, ವಾಯುವಿಹಾರಕ್ಕೆ ಹೋದ ತಂದೆ ನಾಪತ್ತೆಯಾಗಿದ್ದಾರೆ ಎಂದು ವಿದ್ಯಾರಣ್ಯಪುರ ಪೊಲೀಸರಿಗೆ ದೂರು ನೀಡಿದ್ದಳು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications