ಬೇಲೇಕೇರಿ ಪ್ರಕರಣ : ಜನಾರ್ದನ ರೆಡ್ಡಿ ಆರೋಪಿ ನಂ.1
ಬೆಂಗಳೂರು, ಡಿ. 18: ಮಾಜಿ ಸಚಿವ ಜನಾರ್ದನ ರೆಡ್ಡಿ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಪ್ರಥಮ ಆರೋಪಿ ಎಂದು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ಮಂಗಳವಾರ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜನಾರ್ದನ ರೆಡ್ಡಿ, ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ಹಾಗೂ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ.
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು. ಇದೀಗ ಮೂರನೇ ಬಾರಿ ಸಲ್ಲಿಸಲಾಗಿದ್ದು, ಜನಾರ್ದನ ರೆಡ್ಡಿ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ದನರೆಡ್ಡಿ, ಕಂಪ್ಲಿ ಶಾಸಕ ಸುರೇಶ್ಬಾಬು, ಕೂಡ್ಲಿಗಿ ಶಾಸಕ ನಾಗೇಂದ್ರ, ವಿಜಯನಗರ ಶಾಸಕ ಆನಂದ್ಸಿಂಗ್, ಕಾರವಾರ ಶಾಸಕ ಸತೀಶ್ ಸೈಲ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. [ಬೇಲೇಕೇರಿ : ಸ್ವಸ್ತಿಕ್, ಕಾರದಪುಡಿ ಮೇಲೆ ಚಾರ್ಜ್ ಶೀಟ್]

ಯಾರ ವಿರುದ್ಧ ಚಾರ್ಜ್ಶೀಟ್?
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಥಮ ಆರೋಪಿ ಎಂದು ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್ಬಾಬು, ಆನಂದ್ಸಿಂಗ್ ವಿರುದ್ಧವೂ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೇರಿದಂತೆ 18 ಮಂದಿಯನ್ನು ಇದರಲ್ಲಿ ಉಲ್ಲೇಖಿಸಲಾಗಿದೆ.

ಅಧಿಕಾರಿಗಳ ವಿರುದ್ಧವೂ ಚಾರ್ಜ್ಶೀಟ್
ಮಂಗಳವಾರ ಸಲ್ಲಿಸಿರುವ ಚಾರ್ಜ್ಶೀಟ್ ನಲ್ಲಿ ಅರಣ್ಯಾಧಿಕಾರಿಗಳಾದ ಮುತ್ತಯ್ಯ, ಶುಕ್ಲಾ, ಹಿತ್ತಲಮಕ್ಕಿ, ಚಂದ್ರಕಾಂತ್, ಪೊಲೀಸ್ ಅಧಿಕಾರಿ ರಮಾಕಾಂತ್, ಬಂದರು ಅಧಿಕಾರಿ ಕ್ಯಾಪ್ಟನ್ ಸ್ವಾಮಿ, ಮಹೇಶ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೇರಿದಂತೆ 18 ಆರೋಪಿಗಳ ಹೆಸರು ಸೇರಿಸಲಾಗಿದೆ.

ಯಾವ ಕಂಪನಿಗಳು ಸೇರಿವೆ
ಮಲ್ಲಿಕಾರ್ಜುನ ಶಿಪ್ಪಿಂಗ್, ಸಾಲ್ಗಾಂವ್ಕರ್ ಶಿಪ್ಪಿಂಗ್ ಕಂಪನಿಗಳ ಮೂಲಕ 6.5 ಲಕ್ಷ ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಿಸಿರುವ ಬಗ್ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 800 ಪುಟಗಳ ಚಾರ್ಜ್ಶೀಟ್ 4500 ದಾಖಲಾತಿಗಳನ್ನು ಹೊಂದಿದೆ.

ಸತೀಶ್ ಸೈಲ್ ವಿರುದ್ಧ ಆರೋಪವೇನು?
ಕಾರವಾರದ ಶಾಸಕ ಸತೀಶ್ ಸೈಲ್ ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ(SMSC Pvt Ltd)ಯ ಮಾಲೀಕರು. 2009-10ರ ಅವಧಿಯಲ್ಲಿ ನಡೆದಿದೆ ಎನ್ನಲಾದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೆ.20ರಂದು ಬಂಧಿಸಲಾಗಿತ್ತು. ಜನವರಿ 2009 ರಿಂದ ಮೇ 2010ರ ಅವಧಿಯಲ್ಲಿ ಸುಮಾರು 7.23 ಲಕ್ಷ ಮೆಟ್ರಿಕ್ ಟನ್ ಕಬ್ಬಿಣ ಅದಿರನ್ನು ತಮ್ಮ ಕಂಪನಿ ಮೂಲಕ ಅಕ್ರಮವಾಗಿ ಸಾಗಿಸದ ಆರೋಪ ಅವರ ಮೇಲಿದೆ.

ಆನಂದ್ ಸಿಂಗ್ ವಿರುದ್ಧ ಆರೋಪವೇನು?
ವಿಜಯನಗರ ಶಾಸಕ ಆನಂದ್ಸಿಂಗ್ ಒಡೆತನದ ವೈಷ್ಣವಿ ಮಿನರಲ್ಸ್ ಅಕ್ರಮವಾಗಿ ಬೇಲೇಕೇರಿ ಬಂದರಿನಿಂದ ಅದಿರು ಸಾಗಣೆ ಮಾಡಿದ ಆರೋಪವಿದೆ. ಜನವರಿ 2009 ರಿಂದ ಮೇ 2010ರ ಅವಧಿಯಲ್ಲಿ ಬೆಲೇಕೇರಿ ಬಂದರಿನಿಂದ ಮುಖ್ಯವಾಗಿ ಚೀನಾ, ಸಿಂಗಪುರ ಸೇರಿದಂತೆ ವಿದೇಶಕ್ಕೆ ಕಬ್ಬಿಣದ ಅದಿರನ್ನು ಸಾಗಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications