ಬೆಂಗಳೂರು ಬೆಳ್ಳಂದೂರು ಕೆರೆ ಬಿಳಿನೊರೆಯ ರಹಸ್ಯ ಲೀಕ್
ಬೆಂಗಳೂರು, ಜನವರಿ 01 : ಬೆಳ್ಳಂದೂರು ಕೆರೆಯಲ್ಲಿ ನೊರೆ ಹಾಗೂ ದುರ್ನಾತ ಹೊರಹೊಮ್ಮಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಡಿಟರ್ಜೆಂಟ್ ಯುಕ್ತ ನೀರು ಕೆರೆಗೆ ಸೇರುತ್ತಿರುವುದು ನೊರೆಗೆ ಕಾರಣ ಎಂಬ ವರದಿ ಕೇಂದ್ರ ಸರ್ಕಾರದ ಕೈ ಸೇರಿದೆ.
ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನ ಸಂಶೋಧಕರು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಈ ವರದಿಯನ್ನು ನೀಡಿದ್ದಾರೆ. ವರದಿ ಓದಿದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವರು ಭರವಸೆ ನೀಡಿದ್ದಾರೆ. [ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಗೆ ಪರಿಹಾರ?]

ಡಿಟರ್ಜೆಂಟ್ ಯುಕ್ತ ನೀರು ಕೆರೆಗೆ ಹರಿದುಬರುತ್ತಿರುವುದರಿಂದ ನೊರೆಯ ಸಮಸ್ಯೆ ಉಂಟಾಗುತ್ತಿದೆ. ನೀರನ್ನು ಶುದ್ಧೀಕರಿಸದೆ ಕೆರೆಗೆ ಬಿಡುವುದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ವರದಿಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ ಬಳಿಕ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. [ಬೆಳ್ಳಂದೂರು ಕೆರೆ ಸ್ವಚ್ಛ ಮಾಡಲು ಎಷ್ಟು ವರ್ಷ ಬೇಕು?]
'ಕೊಳಚೆ ನೀರು ತಡೆಗೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಫೆಬ್ರವರಿ ತಿಂಗಳಿನಲ್ಲಿ ಬೆಂಗಳೂರಿಗೆ ಪುನಃ ಭೇಟಿ ನೀಡಲಿದ್ದು, ಆಗ ಕೆರೆ ಪರಿಸರದಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆಯನ್ನು ಆಲಿಸುವುದಾಗಿ' ಪ್ರಕಾಶ್ ಜಾವಡೇಕರ್ ಹೇಳಿದರು.
'ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಯನ್ನು ಹಂತ-ಹಂತವಾಗಿ ಪರಿಹರಿಸಲಾಗುವುದು. ಕೊಳಚೆ ನೀರು ಕೆರೆಗೆ ಹರಿದುಬರದಂತೆ ತಡೆಗಟ್ಟಲಾಗುವುದು' ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಕಳೆದ ವಾರ ಭರವಸೆ ನೀಡಿದ್ದರು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications