ಬೆಳ್ಳಂದೂರು ಕೆರೆಗೆ "ಕಾಂಗ್ರೆಸ್ ಕೆರೆ" ಎಂದು ಮರು ನಾಮಕರಣ
Recommended Video

ಬೆಂಗಳೂರು, ಆಗಸ್ಟ್ 22: ಮಿತಿಮೀರಿದ ಮಾಲಿನತೆಯಿಂದಾಗಿ ಇಡೀ ರಾಷ್ಟ್ರದ ಗಮನ ಸೆಳೆದಿರುವ ಬೆಳ್ಳಂದೂರು ಕೆರೆಗೆ ಕಾಂಗ್ರೆಸ್ ಕೆರೆ ಎಂದು ಮರು ನಾಮಕರಣ ಮಾಡಿರುವ ನವ ಭಾರತ ಪ್ರಜಾಸತ್ತಾತ್ಮಕ ಪಕ್ಷದ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಕಾರ್ಯಕರ್ತರು, ಪ್ರಪಂಚದ ಎಂಟನೇ ಅದ್ಭುತವನ್ನು ಸೃಷ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಇದು ಸಲ್ಲಿಸಲೇ ಬೇಕಾದ ಗೌರವ ಎಂದು ನವ ಭಾರತ ಕಾರ್ಯಕರ್ತರು ಟೀಕಿಸಿದರು.

"ಕಾಂಗ್ರೆಸ್ ಕೆರೆ" ಎನ್ನುವ ಬ್ಯಾನರ್ ಗಳನ್ನು ಬೆಳ್ಳಂದೂರು ಕೆರೆಯ ಸುತ್ತಲೂ ಅಳವಡಿಸುವ ಮೂಲಕ ಹಾಗು ಸಿ.ಎಂ ಸಿದ್ದರಾಮಯ್ಯ ಮತ್ತು ಕೆ. ಜೆ.ಜಾರ್ಜ್ ರವರ ಮುಖವಾಡ ಧರಿಸಿ ಮರುನಾಮಕರಣದ ಉದ್ಘಾಟನೆ ಮಾಡುವ ಮೂಲಕ ಅಣುಕು ಪ್ರದರ್ಶನ ಮಾಡಲಾಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ಪಕ್ಷದ ಅಧ್ಯಕ್ಷ ಅನಿಲ್ ಶೆಟ್ಟಿ "ಇತ್ತೀಚೆಗೆ ನಾವು ನೋಡಿದ ಹಾಗೆ ಸಿದ್ದರಾಮಯ್ಯ ಸರ್ಕಾರವು ಜಾರಿಮಾಡುತ್ತಿರುವ ಯೋಜನೆಗಳಿಗೆ ನೆಹರು ಹಾಗು ಗಾಂಧಿ ವಂಶಸ್ಥರ ಹೆಸರಿಡಲು ತುಂಬಾ ಉತ್ಸಾಹ ತೋರಿಸುತ್ತಿದೆ. ಉದಾಹರಣೆ ಇಂದಿರಾ ಕ್ಯಾಂಟೀನ್. ಆದುದರಿಂದ ನಾವ್ಯಾಕೆ ಬೆಳ್ಳಂದೂರು ಕೆರೆಗೆ ಸರ್ಕಾರದ ಹೆಸರಿಟ್ಟು ಗೌರವಿಸಬಾರದು ಎಂಬ ಆಲೋಚನೆಮಾಡಿ ಮರುನಾಮಕರಣ ಮಾಡಿದ್ದೇವೆ. ಈ ಮೂಲಕ ಸರ್ಕಾರವು ಕೊಲ್ಲುತ್ತಿರುವ ಬೆಳ್ಳಂದೂರು ಕೆರೆಯನ್ನು ಉಳಿಸುವಂತೆ ಆಗ್ರಹಿಸುತ್ತಿದ್ದೇವೆ ಹಾಗು ಸರ್ಕಾರವು ಬರಿ ಸುಳ್ಳುಹೇಳುವುದನ್ನು ಬಿಟ್ಟು ಕೆರಗಳನ್ನು ಉಳಿಸುವ ಕೆಲಸ ಮಾಡಬೇಕು" ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಜನಜಾಗೃತಿ ಹಾಡುಗಳನ್ನು ಹಾಡಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications