ನ.26ರಂದು ಬಿಇಎಲ್, ಬಿಇಎಂಎಲ್, ಎಚ್ಎಎಲ್ ಮುಷ್ಕರ
ಬೆಂಗಳೂರು, ನ. 25: ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಗೊಳಿಸುವುದರ ವಿರುದ್ದ, ನವಂಬರ್ 26 ನೇ ಗುರುವಾರದಂದು ಬೆಂಗಳೂರಿನಲ್ಲಿರುವ ಕೇಂದ್ರ ಉದ್ದಿಮೆಗಳ ಜಂಟಿ ಕ್ರಿಯಾ ಸಮಿತಿಯು ಒಂದು ದಿನದ ಅಖಿಲ ಭಾರತ ಮಟ್ಟದ ಮುಷ್ಕರವನ್ನು ನಡೆಸಲು ತೀರ್ಮಾನಿಸಿದೆ.
ಎಚ್.ಎ.ಎಲ್. ಕಾರ್ಮಿಕ ಸಂಘ, ಬಿ.ಇ.ಎಲ್ ವರ್ಕರ್ ಫೋರಂ, ಬಿ.ಇ.ಎಲ್ ವರ್ಕರ್ಸ್ ಯೂನಿಯನ್, ಬಿ.ಇ.ಎಮ್.ಎಲ್ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯು ದೇಶಾದ್ಯಂತ ಎಲ್ಲಾ ಕಾರ್ಮಿಕ ಸಂಘಟನೆಗಳ ಜೊತೆಗೂಡಿ ನ.26ರಂದು ಅಖಿಲ ಭಾರತ ಮಟ್ಟದ ಮುಷ್ಕರವನ್ನು ನಡೆಸಲಿವೆ ಎಂದು ಜಂಟಿ ಕ್ರಿಯಾ ಸಮಿತಿಯ ಸಂಚಾಲಯ ಹಾಗೂ ಬಿ.ಇ.ಎಂ.ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ಬಿಇಎಂಎಲ್ ಕರ್ನಾಟಕದಲ್ಲಿರುವ ಕೇಂದ್ರೋದ್ಯಮವಾಗಿದ್ದು, ಇಂದು ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿದೆ. ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡ್ ನಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿದೆ. ಏಷ್ಯಾದಲ್ಲಿಯೇ ಅತೀ ದೊಡ್ಡದಾದ ಸಂಶೋಧನೆ ಹಾಗೂ ಅಭಿವೃದ್ದಿ ಕೇಂದ್ರವನ್ನು ಹೊಂದಿರುವ ಬಿಇಎಂಎಲ್ ಸಂಸ್ಥೆಯ 2019-20 ರ ವಾರ್ಷಿಕ ವಹಿವಾಟು ರೂ 3028 ಕೋಟಿ ಯಾಗಿದ್ದು ರೂ 63.38 ಕೋಟಿಗಳಷ್ಟು ನಿವ್ವಳ ಲಾಭ ಹೊಂದಿರುವ ಸಂಸ್ಥೆಯಾಗಿದೆ. ಸತತ 5 ವರ್ಷಗಳಿಂದ ಲಾಭವನ್ನು ಗಳಿಸುತ್ತಿರುವ ಸಂಸ್ಥೆಯನ್ನು ಖಾಸಗೀಕರಣಗೊಳಿಸಲು ಹೊರಟಿದೆ.

ದೇಶದ ಸಂಪತ್ತನ್ನು ಬಹಳ ಕಡಿಮೆ ಮೊತ್ತಕ್ಕೆ ಖಾಸಗಿಯವರ ಪಾಲಾಗುವುದನ್ನು ಸಂಸ್ಥೆಯ ಉದ್ಯೋಗಿಗಳು ಮತ್ತು ಕಾರ್ಮಿಕ ಸಂಘಟನೆಗಳು ವಿರೋಧಿಸಿ ಹಲವಾರು ಹೋರಾಟದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತದೆ. ಈ ಎಲ್ಲಾ ಹೋರಾಟಗಳು ಫಲಕಾರಿಯಾಗದೇ ಇರುವ ಹಿನ್ನಲೆಯಲ್ಲಿ ಎಲ್ಲಾ ಕೇಂದ್ರ ಸ್ವಾಮ್ಯದ ಉದ್ದಿಮೆಗಳ ಸಂಘಟನೆಗಳು ಜಂಟಿಯಾಗಿ ದೇಶಾದ್ಯಂತ ನವಂಬರ್ 26 ರಂದು ಪ್ರತಿಭಟನೆಯನ್ನು ನಡೆಸಲು ತೀರ್ಮಾನಕ್ಕೆ ಬಂದಿವೆ ಎಂದು ದೊಮ್ಮಲೂರು ಶ್ರೀನಿವಾಸ ರೆಡ್ಡಿ ತಿಳಿಸಿದರು.
Recommended Video
ಪ್ರಧಾನ ಕಾರ್ಯದರ್ಶಿ ಆರ್ ನಾರಾಯಣ ಮಾತನಾಡಿ, ಹೆಚ್ಎಎಲ್ ಕಾರ್ಮಿಕರ ಸಂಘ, ಬಿಇಎಲ್ ವರ್ಕರ್ಸ್ ಯೂನಿಟಿ ಫೋರಂ ಮತ್ತು ವರ್ಕರ್ಸ್ ಯೂನಿಯನ್, ಬೆಂಗಳೂರು, ಕೆಜಿಎಫ್, ಮೈಸೂರು ಹಾಗೂ ಪಾಲಕ್ಕಾಡಿನಲ್ಲಿರುವ ಬಿಇಎಂಎಲ್ ಕಾರ್ಮಿಕರ ಸಂಘಗಳು, ಐಟಿಐ ಕಾರ್ಮಿಕರ ಸಂಘ ಹಾಗೂ ಬಿಹೆಚ್ಈಎಲ್ ಕಾರ್ಮಿಕರ ಸಂಘಟನೆಗಳು ಒಗ್ಗಟ್ಟಿನಿಂದ ನವೆಂಬರ್ 26 ರಂದು ದೇಶಾದ್ಯಂತ ಮುಷ್ಕರ ನಡೆಸಲು ತೀರ್ಮಾನಿಸಿವೆ ಎಂದು ತಿಳಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications