ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟ ಪ್ರಕರಣ ಮಾಜಿ ಮೇಯರ್ ಸಂಪತ್ ರಾಜ್ ಜೈಲಿಗೆ
ಬೆಂಗಳೂರು, ನವೆಂಬರ್ 20: ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಡಿ ತಲೆಮರೆಸಿಕೊಂಡು ಬಂಧನಕ್ಕೆ ಒಳಗಾದ ಮಾಜಿ ಮೇಯರ್ ಸಂಪತ್ ರಾಜ್ ಜೈಲು ಸೇರಿದ್ದಾರೆ.
ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರು ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಸಿಟಿ ಸಿವಿಲ್ ನ್ಯಾಯಾಲಯದ 67 ನೇ ಹಾಲ್ ನಲ್ಲಿ ನ್ಯಾಯಾಧೀಶರ ಮುಂಧೆ ಹಾಜರು ಪಡಿಸಿದರು. ನವೆಂಬರ್ 24 ರ ವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಮಾಡಿದರು. ರಾಷ್ಟ್ರೀಯ ತನಿಖಾ ದಳ ವಿಚಾರಣೆ ನಡೆಸುವ ಅಗತ್ಯ ಬಿದ್ದರೆ ಜೈಲಿನಲ್ಲಿಯೇ ವಿಚಾರಣೆ ನಡೆಸಲು ಅನುಮತಿ ನೀಡಲಾಗಿದೆ. ಮಾಜಿ ಮೇಯರ್ ಇದೀಗ ಜೈಲು ಸೇರಲಿದ್ದಾರೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಸಂಪತ್ ರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸಿದ್ಧತೆ ನಡೆಸಿದ್ದಾರೆ.
ಸಂಪತ್ ರಾಜ್ ವಿರುದ್ಧ ಸಿಸಿಬಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ಕಾಯ್ದೆ ಹಾಗೂ ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಿದ ಆರೋಪವಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ವೇಳೆ ಮಹತ್ವದ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಅನಾರೋಗ್ಯ ನಾಟಕವಾಡಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಸಿಸಿಬಿ ವಿಚಾರಣೆಗೆ ಹಾಜರಾಗಿರಲಿಲ್ಲ. ಚಿಕಿತ್ಸೆ ನೆಪದಲ್ಲಿ ಸಂಪತ್ ರಾಜ್ ಪರಾರಿಯಾಗಿದ್ದರು. ಆರೋಪಿಗಾಗಿ ಶೋಧ ನಡೆಸಿದರೂ ಪತ್ತೆಯಾಗಿರಲಿಲ್ಲ.

ಕೆಲ ದಿನಗಳ ಹಿಂದಷ್ಟೇ ಸಂಪತ್ ರಾಜ್ ಗೆ ಆಶ್ರಯ ನೀಡಿ ತಪ್ಪಿಸಿಕೊಳ್ಳಲು ನೆರವು ನೀಡಿದ್ದ ಆತನ ಆಪ್ತ ರಿಯಾಜುದ್ದೀನ್ ರನ್ನು ಬಂಧಿಸಿದ್ದರು. ಬಳಿಕ ಸಂಪತ್ ರಾಜ್ ಬಾಮೈದನನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಕರೆಸಲು ಮುಂದಾಗಿದ್ದರು. ಈ ಬೆಳವಣಿಗೆ ನಡುವೆ ರಾತ್ರೋ ರಾತ್ರಿ ಸಂಪತ್ ರಾಜ್ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಅವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಎರಡು ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಬಳಿಕ ಹೆಚ್ಚುವರಿಯಾಗಿ ಒಂದು ದಿನ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಎನ್ಐಎ ವಿಚಾರಣೆ: ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ಪುರ್ಣಗೊಳಿಸಿದ ಬೆನ್ನಲ್ಲೇ ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಠಾಣೆಗಳಿಗೆ ಬೆಂಕಿ ಇಟ್ಟು ಸಾರ್ವಜನಿಕ ಆಸ್ತಿಗೆ ನಷ್ಟವುಂಟು ಮಾಡಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಎನ್ಐಎ ಅಧಿಕಾರಿಗಳು ಈಗಾಗಲೇ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಬೆಂಗಳೂರಿನ 43 ಕಡೆ ದಾಳಿ ನಡೆಸಿದ್ದರು ಪಿಎಫ್ಐ ಹಾಗೂ ಎಸ್ಡಿಪಿ ಕಚೇರಿಗಳ ಮೇಲೂ ದಾಳಿ ನಡೆಸಿ ಮಾರಕಾಸ್ತ್ರಗಳನ್ನು ವಶಫಡಿಸಿಕೊಂಡಿದ್ದರು.
ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿದ ಪ್ರಕರಣದ ಭಾಗವಾಗಿ ಡಿ.ಜೆ. ಹಳ್ಳಿಯಲ್ಲಿ ಠಾಣೆಗೆ ಬೆಂಕಿ ಇಡಲಾಗಿದೆ. ಇದಕ್ಕೆ ಸಂಪತ್ ರಾಜ್ ಆರ್ಥಿಕ ನೆರವು ನೀಡಿರುವ ಆರೋಪಗಳಿದ್ದು, ಬಂಧಿತ ಆರೋಪಿಗಳಿಂದ ಕೆಲ ಮಹತ್ವದ ಸಾಕ್ಷಾಧಾರಗಳನ್ನು ಸಂಗ್ರಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಐಎ ಅಧಿಕಾರಿಗಳು ಸಂಪತ್ ರಾಜ್ ಅವರನ್ನು ವಿಚಾರಣೆ ಒಳಪಡಿಸುವ ಸಾಧ್ಯತೆಯಿದೆ.
-
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ











Click it and Unblock the Notifications