ಬೆನಕ 'ಸತ್ತವರ ನೆರಳು' 501ನೆ ಶೋಗೆ ಬನ್ನಿ
ಬೆಂಗಳೂರು, ಮೇ 13: ‘ಸತ್ತವರ ನೆರಳು' ನಾಟಕ 500 ಪ್ರದರ್ಶನಗಳನ್ನು ಪೂರೈಸಿದ್ದು, ಈಗ ಮತ್ತೊಂದು ಪ್ರದರ್ಶನಕ್ಕೆ ಸಜ್ಜಾಗಿದೆ. ಬೆನಕ ರಂಗ ತಂಡದ ವತಿಯಿಂದ ಮೇ 17ರಂದು ನಗರದ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ನಾಟಕದ 500ರ ಸಂಭ್ರಮವನ್ನು ಆಚರಿಸಲಾಗುತ್ತಿದೆ ಎಂದು ಬೆನಕದ ಅಧ್ಯಕ್ಷ ನಿರ್ದೇಶಕ ಟಿ.ಎಸ್.ನಾಗಾ ಭರಣ ತಿಳಿಸಿದ್ದಾರೆ.
ಕೇಂದ್ರ ಸಂಗೀತ ನಾಟಕ ಅಕಾಡಮಿ ಪ್ರಶಸ್ತಿ ಪುರಸ್ಕೃತ ಜಿ.ಬಿ. ಜೋಷಿ ರಚಿಸಿದ 'ಸತ್ತವರ ನೆರಳು' ನಾಟಕವನ್ನು ಅಂತಾರಾಷ್ಟ್ರೀಯ ರಂಗ ಭೂಮಿ ನಿರ್ದೇಶಕ ಬಿ.ವಿ.ಕಾರಂತರ ನಿರ್ದೇಶನದಲ್ಲಿ 1975ರಲ್ಲಿ ಅತ್ಯಂತ ಅದ್ಭುತವಾಗಿ ರಂಗದ ಮೇಲೆ ಪ್ರದರ್ಶಿಸಲಾಯಿತು ಎಂದು ನೆನಪು ಮಾಡಿಕೊಂಡರು. ಬಿ.ವಿ ಕಾರಂತರು ಕಟ್ಟಿದ ಬೆಂಗಳೂರು ನಗರ ಕಲಾವಿದರು(ಬೆನಕ) ತಂಡ ಸತ್ತವರ ನೆರಳು ನಾಟಕವನ್ನು ಕಲಾರಸಿಕರ ಮುಂದೆ ಕಳೆದ ನಾಲ್ಕು ದಶಕಗಳಿಂದ ಪ್ರದರ್ಶಿಸುತ್ತಾ ಬಂದಿದ್ದಾರೆ.
1975ರಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡ ಈ ನಾಟಕವು ಇಲ್ಲಿಗೆ 500 ಪ್ರದರ್ಶನ ಕಂಡಿದೆ. ಹವ್ಯಾಸಿ ರಂಗಭೂಮಿಯಲ್ಲಿ ಒಂದು ನಾಟಕ 500 ಪ್ರದರ್ಶನ ಕಂಡಿರುವುದು ದೊಡ್ಡ ಮಟ್ಟದ ಸಾಧನೆ. ಈ ನಾಟಕದಲ್ಲಿ ಜಿ.ವಿ.ಅಯ್ಯರ್ ಸೇರಿದಂತೆ ನೂರಾರು ಕಲಾವಿದರು ಅಭಿನಯಿಸಿದ್ದರು. ಪ್ರಸ್ತುತ ನಾಟಕದಲ್ಲಿ ಅಭಿನಯಿಸುತ್ತಿರುವ ಕಲಾವಿದರು 4ನೆ ತಲೆಮಾರಿನವರಾಗಿದ್ದಾರೆ ಎಂದು ನಾಗಾಭರಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಟ ಸುಂದರರಾಜು ಮಾತನಾಡಿ, 'ಸತ್ತವರ ನೆರಳು ನಾಟಕವು 35 ವರ್ಷಗಳ ಕಾಲ ನಿರಂತರವಾಗಿ ಪ್ರದರ್ಶನ ಗೊಂಡಿದೆ. ಇದರಲ್ಲಿ ಅಭಿನಯಿಸಿದ ನೂರಾರು ಕಲಾವಿದರ ನೂರಾರು ನೆನಪುಗಳು ಮರೆಯಲು ಅಸಾಧ್ಯ. ಲಹರಿ ಸಂಸ್ಥೆಯಿಂದ ಈ ನಾಟಕ ಡಿವಿಡಿ ರೂಪದಲ್ಲಿ ಬರುತ್ತಿರುವುದು ಆ ನೆನಪುಗಳನ್ನು ಒಂದು ಕಡೆ ಸಂಗ್ರಹಿಸಿದಂತಾಗುತ್ತದೆ' ಎಂದರು.
ಮೇ 17ರಂದು ಸಂಸ ಬಯಲು ರಂಗಮಂದಿರದಲ್ಲಿ ಸಂಜೆ 5.30ರ ನಂತರ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್, ಸಾಹಿತಿ ಗಿರಡ್ಡಿ ಗೋವಿಂದರಾಜ, ರಮಾಕಾಂತ ಜೋಶಿ, ಲಹರಿ ವೇಲು ಭಾಗವಹಿಸುವ ನಿರೀಕ್ಷೆಯಿದೆ. ಸತ್ತವರ ನೆರಳು ನಾಟಕದಲ್ಲಿ ಪುರಂದರ ದಾಸರ ಕೀರ್ತನೆಗಳನ್ನು ಬಿವಿ ಕಾರಂತರು ಸೂಕ್ತವಾಗಿ ಬಳಸಿಕೊಂಡಿದ್ದರು. ನಾಟಕದ ಪದ್ಯಗಳನ್ನು ಆಸಕ್ತರು ಇಲ್ಲಿ ಕೇಳಬಹುದು.
-
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications