ಸಮಾಜಕಲ್ಯಾಣ ಇಲಾಖೆಗೂ ಬಂತು 24/7 ಸಹಾಯವಾಣಿ
ಬೆಂಗಳೂರು, ಆಗಸ್ಟ್ 7: ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸುವ ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸುವ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿಯನ್ನು ಅಭಿವೃದ್ಧಿಪಡಿಸಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಂಗಳವಾರ ಉದ್ಘಾಟಿಸಿದ್ದಾರೆ.
ಈ ಕೇಂದ್ರದ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಸಮಾಜ ಕಲ್ಯಾಣ ಇಲಾಖೆ ನಿಗಮ ಮಂಡಳಿಗಳ ಕಾರ್ಯ ಚಟುವಟಿಕೆಗಳು ಹಾಗೂ ಯೋಜನೆಯ ಸಮಗ್ರ ಮಾಹಿತಿಯನ್ನು ಪಡದುಕೊಳ್ಳಬಹುದಾಗಿದೆ.
ಶೋಷಿತ ಜನಾಂಗದ ಅಭಿವೃದ್ಧಿ ಹಾಗೂ ಸಮುದಾಯದ ಹಿತ ಕಾಯುವ ಸಲುವಾಗಿ ಕಾರ್ಯ ನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯಲ್ಲಿ ಶೋಷಣೆ ನಡೆಯಬಾರದೆಂದು ಈ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಬಗೆಗಿನ ಮಾಹಿತಿ, ಕಾರ್ಯ ನಿರ್ವಹಣೆ, ನ್ಯೂನತೆಗಳು ಹಾಗೂ ಕುಂದುಕೊರತೆಗಳನ್ನು ರಾಜ್ಯದ ಕೇಂದ್ರಕ್ಕೆ ತಿಳಿಸಬಹುದಾಗಿದೆ. ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ಬಯಸಿದರೆ ಶೀಘ್ರವೇ ನೀಡಲಾಗುತ್ತದೆ. ಮನವಿ ಸಲ್ಲಿಸದ ಕೂಡಲೇ ದೂರುದಾರರಿಗೆ ಒಂದು ಕ್ಷಿಪ್ರ ನೋಂದಣಿ ಸಂಖ್ಯೆಯನ್ನು ನೀಡಲಾಗುತ್ತದೆ.

ಅಧಿಕಾರಿಗಳು ದೂರುಗಳನ್ನು ಪರಿಹರಿಸದಿದ್ದಲ್ಲಿ ಅಹವಾಲನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಲಾಗುತ್ತದೆ. ಸಮಾಜ ಕಲ್ಯಾಣ ಇಲಾಖೆ ರಾಜ್ಯದಲ್ಲಿ ಸುಮಾರು 2500 ವಿದ್ಯಾರ್ಥಿ ನಿಲಯಗಳನ್ನು ನಡೆಸುತ್ತಿದ್ದು, ಈ ವಸತಿ ನಿಲಯಗಳಲ್ಲಿ ನೆಲೆಸಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಬಯೋಮೆಟ್ರಿಕ್ ಹಾಜರಾತಿಯನ್ನು ಈ ಕಲ್ಯಾಣ ಕೇಂದ್ರದಲ್ಲಿ ಉಸ್ತುವಾರಿ ಮಾಡಲಾಗುತ್ತದೆ. ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳಿದ್ದರೂ ಕೂಡ ಕರೆ ಮಾಡಬಹುದಾಗಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications