ಎಲಿವೇಟೆಟ್ ಕಾರಿಡಾರ್ ವಿರೋಧಿಸಿ ಫೇಸ್ಬುಕ್ನಲ್ಲಿ ಒಂದು ಅಭಿಯಾನ
ಬೆಂಗಳೂರು, ಜುಲೈ 31: ರಾಜ್ಯ ಸರ್ಕಾರದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು ಈ ಕುರಿತು ಫೇಸ್ಬುಕ್ನಲ್ಲಿ ಎಲೆವೇಟೆಡ್ ಬೇಡ ಸಮೂಹ ಸಾರಿಗೆ ಬೇಕು ಎನ್ನುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಎಲಿವೇಟೆಡ್ ಕಾರಿಡಾರ್ನಿಂದ ನಗರದ ವಾತಾವರಣ ಮೇಲೆ ಎಷ್ಟು ದುಷ್ಪರಿಣಾಮ ಉಂಟಾಗಲಿದೆ ಎನ್ನುವುದರ ಕುರಿತು ಗಮನ ಹರಿಸಬೇಕಿದೆ.ಉಪನಗರ ರೈಲು, ಬಸ್ ಸಂಪರ್ಕ ವ್ಯವಸ್ಥೆ, ಮೆಟ್ರೋ ರೈಲನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ, ಈ ಎಲಿವೇಟೆಡ್ ಕಾರಿಡಾರ್ ಯೋಜನೆಯನ್ನು ಕೈಬಿಟ್ಟು ಸಮೂಹ ಸಾರಿಗೆಯತ್ತ ಹೆಚ್ಚು ಗಮನ ನೀಡಿ ಎಂದು ಒತ್ತಾಯಿಸಿದ್ದಾರೆ.
ಸಿಟಿಜನ್ ಫಾರ್ ಬೆಂಗಳೂರು ಸಂಸ್ಥೆ ಒತ್ತಾಯಿಸುತ್ತಿದ್ದು ಫೇಸ್ಬುಕ್ನಲ್ಲಿ ಅಭಿಯಾನ ಹಮ್ಮಿಕೊಂಡಿದೆ.ಕಾಂಕ್ರೀಟ್ ಸಾಕು, ಸಮೂಹ ಸಾರಿಗೆ ಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಆಹ್ರಹಿಸಿದ್ದಾರೆ.

ಸ್ಟೀಲ್ ಬ್ರಿಡ್ಜ್ ಬೇಡ ಎಂದು ಇದೇ ಸಂಸ್ಥೆಗಳು ಅಭಿಯಾನ ನಡೆಸಿದ್ದವು. ಕೊನೆಗೂ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಹಿಂದಿನ ಸರ್ಕಾರ ಕೈಬಿಟ್ಟಿತ್ತು. ಈಗ ಎಲಿವೇಟೆಡ್ ಕಾರಿಡಾರ್ ಯೋಜನೆಗೂ ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಲಾಗಿದೆ.
ಕುಮಾರಸ್ವಾಮಿಯವರು ಸಾರ್ವಜನಿಕರ ಬಳಿ ಚರ್ಚೆ ನಡೆಸಬೇಕಿತ್ತು, ಆದರೆ ಹಾಗೆಯೇ ಯೋಜನೆಯನ್ನು ಕೈಗೆತ್ತಿಕೊಂಡಿದ್ದಾರೆ. ಇದು ಸರಿಯಲ್ಲ, ನಗರದಲ್ಲಿನ ಸಂಚಾರ ದಟ್ಟಣೆ ನಿವಾರಣೆಗಾಗಿ ಕಳೆದ ಹತ್ತಾರು ವರ್ಷಗಳಿಂದ ಮೇಲ್ಸೇತುವೆ, ಕೆಳಸೇತುವೆಗಳನ್ನು ನಿರ್ಮಿಸಲಾಗಿದೆ. ರಸ್ತೆಗಳನ್ನು ವಿಸ್ತರಣೆ ಮಾಡುವ ಜತೆಗೆ ಹಲವೆಡೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಆದರೂ ಸಂಚಾರ ದಟ್ಟಣೆ ಕಡಿಮೆಯಾಗಿಲ್ಲ ಎಂದು ಸಿಟಿಜನ್ ಫಾರ್ ಬೆಂಗಳೂರು ಫೋರಂನ ಸದಸ್ಯರು ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications