ಬ್ಲೂವ್ಹೇಲ್ ಗೇಮ್ ಆಡಿ ಸಿಕ್ಕಿಬಿದ್ದ ಬೆಂಗಳೂರು ಹುಡುಗರು!
ಬೆಂಗಳೂರು, ಸೆಪ್ಟೆಂಬರ್ 9: ದೇಶದ ಯಾವುದೋ ಮೂಲೆಯಲ್ಲಿ ಬ್ಲೂವ್ಹೇಲ್ ಎಂಬ ಆಟವಿದೆಯಂತೆ ಎಂಬ ಕಾಲ ಹೋಗಿ, ನಮ್ಮ ಮನೆಯ ಮಗುವೂ ಕೈಯಲ್ಲಿ ಮೊಬೈಲ್ ಹಿಡಿದಿದ್ದರೆ ಒಮ್ಮೆ ನಿಗಾ ಇಡಬೇಕಾದ ಪರಿಸ್ಥಿತಿಯಲ್ಲಿ ನಾವಿದ್ದೇವೆ.
ಅದಕ್ಕೆ ಪೂರಕವೆಂಬಂತೆ ಬ್ಲೂವ್ಹೇಲ್ ಗೇಮ್ ಆಡುತ್ತಿದ್ದ ಬೆಂಗಳೂರಿನ ಇಬ್ಬರು ಯುವಕರು ತಮ್ಮ ಉಪನ್ಯಾಸಕರ ಬಳಿ ಸಿಕ್ಕಿಹಾಕಿಕೊಂಡಿದ್ದಾರೆ. ಆ ಮೂಲಕ ಬ್ಲೂವ್ಹೇಲ್ ಎಂಬ ಅಪಾಯಕಾರಿ ಆಟ ಉದ್ಯಾನ ನಗರಿಯ ಮಕ್ಕಳು, ಯುವಕರನ್ನು ತನ್ನ ತೆಕ್ಕೆಯಲ್ಲಿ ಬಿಗಿಗೊಳಿಸಿಕೊಳ್ಳುತ್ತಿದೆ ಎಂಬುದು ಸಾಬೀತಾಗಿದೆ.

ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಓದುತ್ತಿರುವ ತಲಾ 18 ಮತ್ತು 19 ವರ್ಷದ ಇಬ್ಬರು ಕಾಮರ್ಸ್ ವಿದ್ಯಾರ್ಥಿಗಳು ಕೆಲವು ದಿನಗಳಿಂದ ವಿಚಿತ್ರವಾಗಿ ವರ್ತಿಸುತ್ತಿದ್ದುದು ಅವರ ಸ್ನೇಹಿತರಲ್ಲಿ ಅಚ್ಚರಿ ತಂದಿತ್ತು. ದೇಹದ ಕೆಲವು ಭಾಗಗಳಲ್ಲಿ ಗಾಯದ ಕಲೆಗಳಿದ್ದಿದ್ದನ್ನು ಕಂಡು ಸ್ನೇಹಿತರು ಅನುಮಾನವನ್ನೂ ವ್ಯಕ್ತಪಡಿಸಿದ್ದರು. ಇದಕ್ಕೆ ಸರಿಯಾಗಿ ಒಬ್ಬ ಯುವಕ ತನ್ನ ವ್ಹಾಟ್ಸ್ ಆಪ್ ಸ್ಟೇಟಸ್ ನಲ್ಲಿ "I am on my way" ಎಂದು ಬರೆದುಕೊಂಡು ಬ್ಲೂವ್ಹೇಲ್ ಚಿತ್ರ ಹಾಕಿದ್ದ. ಇವನ್ನೆಲ್ಲ ಕಂಡು ಸುಮ್ಮನಿರುವುದು ಸರಿಯಲ್ಲ ಎಂಬುದನ್ನು ತಿಳಿದ ಸ್ನೇಹಿತರು ಈ ಕುರಿತು ಉಪನ್ಯಾಸಕರ ಬಳಿ ಹೇಳಿದ್ದಾರೆ.
ಯುವಕರ ಫೋನ್ ಪಡೆದುಕೊಂಡು ತನಿಖೆ ಮಾಡಿದಾಗ ಇಬ್ಬರೂ ಬ್ಲೂವ್ಹೇಲ್ ಆಡುತ್ತಿರುವುದು ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಲಾಗಿದ್ದು, ಈ ಇಬ್ಬರು ಯುವಕರನ್ನೂ ಆಪ್ತಸಮಾಲೋಚನೆಯ ಮೂಲಕ ಬ್ಲೂವ್ಹೇಲ್ ಚಟದಿಂದ ಹೊರತರಲು ಪ್ರಯತ್ನಿಸಲಾಗುತ್ತಿದೆ. ಮಕ್ಕಳಿಗೆ ಬ್ಲೂವ್ಹೇಲ್ ನ ಕುರಿತು ಎಚ್ಚರಿಕೆ ನೀಡುವುದೂ ಮತ್ತು, ಅವರು ಮೊಬೈಲ್ ಬಳಸುವಾಗ ನಿಗಾ ಇಡುವುದು ಮುಖ್ಯ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.
ಬ್ಲೂವ್ಹೇಲ್ ಗೇಮ್ 50 ಅಪಾಯಕಾರಿ ಟಾಸ್ಕ್ ಗಳನ್ನು ಹೊಂದಿರುವ ಆನ್ ಲೈನ್ ಆಟವಾಗಿದ್ದು, ಇದರ ಕೊನೆಯ ಟಾಸ್ಕ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಈ ಆಟದ ಹುಚ್ಚಿನಿಂದ ಪ್ರಪಂಚದಾದ್ಯಂತ ಹಲವು ಯುವಕರು, ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications