ಹಲಸೂರು ಕೆರೆ ಶುದ್ಧೀಕರಣಕ್ಕೆ 20 ದಿನ ಗಡುವು
ಬೆಂಗಳೂರು, ಜೂನ್, 02: ಬೆಂಗಳೂರು ಆಡಳಿತ ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ ಸ್ವಾಗತಾರ್ಹ ಹೆಜ್ಜೆ ಇಟ್ಟಿದೆ. ಜಲಚರಗಳ ಸಾವಿಗೆ ಕಾರಣವಾಗಿದ್ದ ಹಲಸೂರು ಕೆರೆಯನ್ನು 20 ದಿನಗಳೊಳಗೆ ಅಭಿವೃದ್ಧಿ ಮಾಡಲು ಸೂಚನೆ ನೀಡಲಾಗಿದೆ.
ಹಲಸೂರು ಕೆರೆ ಪ್ರದೇಶಕ್ಕೆ ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮತ್ತು ಮಾಹಿತಿ ಹಾಗೂ ವಾರ್ತಾ ಇಲಾಖೆ ಸಚಿವ ರೋಷನ್ ಬೇಗ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. [ಹಲಸೂರು ಕೆರೆ ಮಾಲಿನ್ಯಕ್ಕೆ ಬಲಿಯಾದ ಸಾವಿರಾರು ಮೀನುಗಳು]

ಕೆರೆಯ ನೀರಿನ ಗುಣಮಟ್ಟ ಹೆಚ್ಚಿಸಲು ಮೊದಲ ಆದ್ಯತೆ ನೀಡಬೇಕು. ಕರೆಗೆ ಅಶುದ್ಧ ನೀರು ಹರಿದು ಬರುತ್ತಿದ್ದರೆ ಮೊದಲು ತಡೆ ಹಾಕಬೇಕು ಎಂದು ಸಚಿವರುಗಳು ತಿಳಿಸಿದ್ದಾರೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮುಖ್ಯ ಇಂಜಿನಿಯರ್ ಕೆ.ಆರ್ ಮಂಜುನಾಥ್ ಮಾತನಾಡಿ, ಕೆರೆಯಲ್ಲಿ ಬಂದು ಸೇರುತ್ತಿದ್ದ ಒಳಚರಂಡಿ ನೀರಿಗೆ ಬ್ರೇಕ್ ಹಾಕಲಾಗಿದೆ. ಈ ನೀರನ್ನು ಕೋರಮಂಗಲ ಮತ್ತು ಚಲ್ಲಘಟ್ಟ ವಿಲ್ಲೆ ಎಎಸ್ ಪಿ ಗೆ ಬಿಡಲಾಗಿದೆ. ಇನ್ನು ಕೆರೆಗೆ ಕಸ ಚೆಲ್ಲದಂತೆ ಸೂಚನೆ ನೀಡಲಾಗಿದ್ದು ಬಿಬಿಎಂಪಿ ಉಸ್ತುವಾರಿ ವಹಿಸಿಕೊಂಡಿದೆ ಎಂದು ತಿಳಿಸಿದರು.[ಬೆಂಗಳೂರು ಕೆರೆಗಳ ದಿಕ್ಕೆಟ್ಟ ಸ್ಥಿತಿ]
ಒಳಚರಂಡಿ ನೀರಿನ ಸಮಸ್ಯೆಗೆ ಈಗಾಗಲೇ ಎಂಇಜಿ ಗೇಟ್ ಬಳಿ ಸ್ಥಾವರವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರ ಕಾರ್ಯಗಳು ಗಡುವು ನೀಡಲಾಗಿರುವ 18 ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.[ಸಾವಿರಾರು ಮೀನು ಸಾವು: ಹೆಬ್ಬಾಳ ಕೆರೆಗೂ ಮಾಲಿನ್ಯದ ಕಳಂಕ?]
ಸಮಸ್ಯೆ ಬೆಂಗಳೂರಿನ ಒಂದು ಕೆರೆಗೆ ಮಾತ್ರ ಸೀಮಿತವಾಗಿಲ್ಲ. ಬೆಳ್ಳಂದೂರು ಕೆರೆ ಸಮಸ್ಯೆ ಜಗಜ್ಜಾಹೀರಾಗಿದೆ. ವರ್ತೂರು ಕೆರೆಯಲ್ಲಿ ರಾಸಾಯನಿಕ ನೊರೆ ಕಾಣಿಸಿಕೊಂಡಿದೆ. ಹೆಬ್ಬಾಳ ಕೆರೆಯಲ್ಲಿ ಜಲಚರಗಳು ಅಸುನೀಗಿದ್ದು ಮಾಲಿನ್ಯ ತಡೆಯ ಬೃಹತ್ ಜವಾಬ್ದಾರಿ ಆಡಳಿತದ ಮೇಲಿದೆ. ಕರೆ ಸಂರಕ್ಷಣಗೆ ನಾವೇನು ಮಾಡಬಹುದು ಎಂಬ ಸಲಹೆಯನ್ನು ನೀವು ನೀಡಬಹುದು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications