BBMP Scam: ಬಿಬಿಎಂಪಿಯಿಂದ 223 ಕೋಟಿ ರೂ. ಮೊತ್ತದ ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆಗೆ ಎಎಪಿ ಆಗ್ರಹ
ಬೆಂಗಳೂರು, ಏಪ್ರಿಲ್ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ (BBMP) 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವೆಸಗಿದೆ. ಕೋಟ್ಯಂತರ ರೂಪಾಯಿ ಹಣ ಲೂಟಿಯಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ ಕಾಳಪ್ಪ ಅವರು,ಬಿಬಿಎಂಪಿಯು ಹೊರಡಿಸಿರುವ ಆದೇಶದ ಪ್ರಕಾರ 2017-18ರಿಂದ 166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ. ಆದರೆ ಈ ಪೈಕಿ ಶೇಕಡಾ 90ರಷ್ಟು ಜನರಿಗೆ ವಾಹನ ವಿತರಿಸಿಲ್ಲ ಎಂದು ಆರೋಪಿಸಿದರು.

ಈ ವಾಹನ ಪೂರೈಕೆ ಯೋಜನೆಯು ಒಟ್ಟು 223 ಕೋಟಿ ರೂಪಾಯಿಯ ಕಾರ್ಯಕ್ರಮವಾಗಿದೆ. ವಾಹನ ವಿತರಿಸದ ಕಾರಣ ಇಷ್ಟು ಪ್ರಮಾಣದ ಹಣ ಎಲ್ಲಿ ಹೋಗಿದೆ. ಆ ಬಗ್ಗೆ ಅಗತ್ಯ ತನಖೆಯಾಗಬೇಕು. ಚುನಾವಣಾ ಆಯೋಗ ಈ ಬಗ್ಗೆ ನಿಗಾ ವಹಿಸಬೇಕು ಎಂದು ಅವರು ಮನವಿ ಮಾಡಿದರು.
ವಾಹನ ವಿತರಣೆ ಸಂಬಂಧ ಅಧಿಕಾರಿಗಳು ಸರ್ಕಾರದಲ್ಲಿನ ಖಾತೆಗಳ ವಿಭಾಗದಲ್ಲಿ ತಮಗೆ ಮಂಜೂರು ಮಾಡಲಾಗಿದೆ ಎಂದು ಹೇಳಿದ ಹಣ ಏನಾಯಿತು? ಎಂಬ ಫಲಾನುಭವಿಗಳ ಪ್ರಶ್ನೆಗೆ ಸರ್ಕಾರದಿಂದ ಉತ್ತರ ಸಿಕ್ಕಿಲ್ಲ. ಹೀಗೆ ಪ್ರಶ್ನಿಸುವವರು ವಾಹನವನ್ನು ಸ್ವೀಕರಿಸಿಲ್ಲ. ಲೆಕ್ಕಪತ್ರ ಇಲಾಖೆಯು ಬಿಲ್ಗಳನ್ನು ಸಿದ್ಧಪಡಿಸಿ ಸಲ್ಲಿಸುವಂತೆ ತಿಳಿಸಿದ್ದು, ಕೆಲವರು ಬಿಬಿಎಂಪಿಯ ಹಣಕಾಸು ವಿಭಾಗದಿಂದ ಹಂಚಿಕೆ ಮಾಡಿದ್ದನ್ನು ಬಹಿರಂಗವಾಗಿ ಕೇಳಿದ್ದಾರೆ. ಆದ್ದರಿಂದ ಬಿಬಿಎಂಪಿ ವಿರುದ್ಧ ತನಿಖೆಯಾಗಬೇಕು ಎಂದು ಹೇಳಿದರು.
ಬಿಜೆಪಿಯಲ್ಲಿ ಸಿಎಂ ಹುದ್ದೆಗಾಗಿ ರಾಜಕೀಯ: ಎಎಪಿ
ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಜಾತಿಗೆ ಸೇರಿದ ಕೇಂದ್ರ ಕಲ್ಲಿದ್ದಲು ಸಿಚವ ಪ್ರಹ್ಲಾದ್ ಜೋಶಿ ಮುಖ್ಯಮಂತ್ರಿಯಾಗಬಹುದು ಎಂದು ಜೆಡಿಎಸ್ ಪಕ್ಷದ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಈಗ, ಬಿ.ಎಲ್.ಸಂತೋಷ್ರವರು ಏಳೆಂಟು ಅಭ್ಯರ್ಥಿಗಳನ್ನು ಬದಲಿಸಿ ಮುಖ್ಯಮಂತ್ರಿ ಆಗಲು ಮುಂದಾಗಿದ್ದಾರೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ ಎಂದರು.

ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಹ್ಲಾದ್ ಜೋಷಿ ಹಾಗೂ ಬಿ.ಎಲ್.ಸಂತೋಷ್ ನಡುವೆ ಪೈಪೋಟಿಯಿರುತ್ತದೆ ಎನ್ನುವುದು ಇದರಿಂದ ಸಾಬೀತಾಗಿದೆ. ಬೆಂಗಳೂರಿನ ಅಕ್ಕಪಕ್ಕದ ಐದು ಕ್ಷೇತ್ರಗಳಾದ ಜಯನಗರ, ಬಸವನಗುಡಿ, ಚಿಕ್ಕಪೇಟೆ, ರಾಜಾಜಿನಗರ, ಚಾಮರಾಜಪೇಟೆ ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಇದರಿಂದ ಬಿಜೆಪಿ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಐದು ಕ್ಷೇತ್ರಗಳಲ್ಲಿ ಒಂದೇ ಜಾತಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಗ್ಗೆ ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಆದ್ದರಿಂದ ನಾವು ಈ ವಿಷಯವನ್ನು ಜನರ ಮುಂದಿಡುತ್ತಿದ್ದೇವೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications