ಬೆಂಗಳೂರು 2ನೇ ವಿಮಾನ ನಿಲ್ದಾಣ: ಈ ಭಾಗದ 25 ಹಳ್ಳಿಗಳಿಗೆ ಎದುರಾಯ್ತು ಸಂಕಷ್ಟ!
Bengaluru Second Airport: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರಿನ 2ನೇ ವಿಮಾನ ನಿಲ್ದಾಣವು ಮಾಗಡಿ ಗ್ರಾಮಾಂತರ ಭಾಗದಲ್ಲಿ ಬರುವುದು ಬಹುತೇಕ ಖಚಿತ ಅಂತಲೇ ಹೇಳಲಾಗುತ್ತಿದೆ. ಈ ರೀತಿ ಇರುವಾಗಲೇ ಈ ಭಾಗದಲ್ಲಿ 20ರಿಂದ 25 ಹಳ್ಳಿಗಳ ಜನರಿಗೆ ಭಾರೀ ದೊಡ್ಡ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಹೊಸ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ 5 ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ಈ ರೀತಿ ಶಾರ್ಟ್ ಲಿಸ್ಟ್ ಮಾಡಿರುವ ಜಾಗಗಳಲ್ಲಿ ಮಾಗಡಿಯ ಎರಡು ಪ್ರದೇಶಗಳು ಮುಂಚೂಣಿಯಲ್ಲಿವೆ. ಆದರೆ, ಈ ಭಾಗದಲ್ಲಿನ ಹಳ್ಳಿಯ ಜನರಿಗೆ ಹೊಸ ತಲೆನೋವು ಶುರುವಾಗಿದೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ..
ನಗರದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಹೊಸ ರಾಮನಗರ ಮಾಗಡಿ ಗ್ರಾಮಾಂತರ ಪ್ರದೇಶದಲ್ಲಿ ಎರಡು ಜಾಗಗಳನ್ನು ಗುರುತಿಸಿದೆ. ಇಲ್ಲಿ ಡ್ರೋನ್ಗಳ ಮೂಲಕ ನಿರಂತರ ಸರ್ವೇ ಕಾರ್ಯ ನಡೆದಿದೆ. ಕೇಂದ್ರ ತಂಡ ಹಾಗೂ ರಾಜ್ಯ ಸರ್ಕಾರವು ನಿರಂತರವಾಗಿ ಸರ್ವೇ ಕಾರ್ಯದಲ್ಲಿ ತೊಡಗಿದೆ. ವಿಮಾನ ನಿಲ್ದಾಣ ಪ್ರಕ್ರಿಯೆ ಪ್ರಾರಂಭವಾದಾಗಿನಿಂದಲೂ ಹೊಸ ಹೊಸ ಹೆಸರುಗಳು ಸೇರ್ಪಡೆ ಆಗುತ್ತಲ್ಲೇ ಇವೆ. ಕನಕಪುರ ಭಾಗದಲ್ಲಿ ಈಗಾಗಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಡಿ ಅಂತ ಆಗ್ರಹಿಸಿರುವ ಇಲ್ಲಿನ ರೈತರು ಪ್ರತಿಭಟನೆ ಮಾಡುವುದಕ್ಕೆ ಮುಂದಾಗಿದ್ದಾರೆ.

ಎರಡನೇ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಪ್ರತಿಷ್ಠೆಯ ವಿಷಯವಾಗಿ ಬದಲಾಗಿದೆ. ಈ ನಡುವೆ ಕನಕಪುರ, ಬಿಡದಿ ಹಾಗೂ ನೆಲಮಂಗಲ ಭಾಗದಿಂದ ವಿಮಾನ ನಿಲ್ದಾಣ ನಿರ್ಮಾಣ ಜಾಗವು ಇದೀಗ ಮಾಗಡಿಯ ಮೋಟಗಾನಹಳ್ಳಿ ಹಾಗೂ ಚಿಕ್ಕಸೋಲೂರಿನಲ್ಲಿ ಸರ್ವೇ ಕಾರ್ಯ ಭರ್ಜರಿ ಸಾಗಿದ್ದು. ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಅಂತಲೇ ಹೇಳಲಾಗುತ್ತಿದೆ. ಇದರೊಂದಿಗೆ ಈ ಭಾಗದಲ್ಲಿ ಇನ್ನೂ ಮೂರು ಭರ್ಜರಿ ಯೋಜನೆಗಳು ಜಾರಿ ಆಗಲಿವೆ. ಒಟ್ಟಾರೆ, ಈ ಭಾಗದಲ್ಲಿ ಭೂಮಿ ಇರುವವರು ಕೋಟ್ಯಾಧಿಪತಿಗಳು ಅಂತಲೇ ಹೇಳಲಾಗುತ್ತಿದೆ. ಈ ರೀತಿ ಇರುವಾಗಲೇ ಹೊಸದೊಂದು ಸಮಸ್ಯೆ ಎದುರಾಗಿದೆ.
ನಗರದ ಹಾಗೂ ಕರ್ನಾಟಕದ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗ ಅಂತಿಮವಾಗುವಾಗಲೇ ಈ ಭಾಗದಲ್ಲಿ 20ರಿಂದ 25 ಹಳ್ಳಿಗಳ ರೈತರು ತಮ್ಮ ಪ್ರಾಪರ್ಟಿ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ಬೇಡ ಎನ್ನುವ ಕೂಗು ಸಹ ಕೇಳಿ ಬರುತ್ತಿದೆ.
ಯಾವ ಹಳ್ಳಿಗಳಿಗೆ ಸಂಕಷ್ಟ: ಮಾಗಡಿ ಗ್ರಾಮಾಂತರ ಪ್ರದೇಶದಲ್ಲಿರು ಹಳ್ಳಿಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಲಕ್ಕೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕೆಂಪ ಚಿಕ್ಕನಹಳ್ಳಿ, ಮರಿಕುಪ್ಪೆ, ಹಾಗೂ ಮಾಗಡ ರಂಗಯ್ಯನ ಪಾಳ್ಯ. ಗುಡೆಮಾರನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸೇರುವ ಹಕ್ಕಿನಾಳು ಕಾಲೊನಿ, ಶೆಟ್ಟಿ ಪಾಳ್ಯ, ಗರ್ಗೇಶಪುರ, ಬಾಳಯ್ಯನಪಾಳ್ಯ, ದಾಸೇಗೌಡನ ಪಾಳ್ಯ, ನಾಗನಹಳ್ಳಿ, ಸುತ್ತೆಹಳ್ಳಿ ಪಾಳ್ಯ ಹಾಗೂ ಮೂರನೇಯದಾಗಿ

ಮಾಗಡಿಯ ಮೋಟಗಾನಹಳ್ಳಿ ಗ್ರಾಮ ಪಂಚಾಯಿತಿಯ ಪೆಮ್ಮನಹಳ್ಳಿ, ಬಸವನಹಳ್ಳಿ, ಕಾಟನಪಾಳ್ಯ, ಶ್ರೀರಾಮಪುರ ಕಾಲೊನಿ, ಗೆಜ್ಜೆಗಲ್ ಪಾಳ್ಯ, ಹೊನ್ನಯ್ಯನಪಾಳ್ಯ, ಬೆಟ್ಟಯ್ಯನಪಾಳ್ಯ, ಪುಟ್ಟಯ್ಯನ ಪಾಳ್ಯ ಹಾಗೂ ಕಂಬೇಗೌಡನ ಪಾಳ್ಯ, ಕೋಡಿಹಳ್ಳಿ, ತಿರುಮಲಾಪುರ ವ್ಯಾಪ್ತಿಯಲ್ಲಿರುವ ಹಳ್ಳಿಗಳ ಜನರಿಗೆ ಭೂಮಿ ಕಳೆದುಕೊಳ್ಳುವ ಆತಂಕ ಶುರುವಾಗಿದೆ.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications