Get Updates
Get notified of breaking news, exclusive insights, and must-see stories!

ಬೆಂಗಳೂರು 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಲಾಭ: ತಮಿಳುನಾಡಿನ ಹೊಸೂರು ಪ್ಲ್ಯಾನ್‌ಗೆ ಮುಖಭಂಗ

ಬೆಂಗಳೂರು: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರದಲ್ಲಿ ಭಾರೀ ಹಿನ್ನಡೆ ಆಗುತ್ತಿದೆ ಎನ್ನುವ ವಿಚಾರವು ಗಂಭೀರವಾಗಿ ಚರ್ಚೆ ಆಗುತ್ತಿರುವಾಗಲೇ ವಿಮಾನ ನಿಲ್ದಾಣದ ವಿಚಾರದಲ್ಲಿ ತಮಿಳುನಾಡಿನ ಹೊಸೂರಿಗಿಂತ ಬೆಂಗಳೂರಿಗೇ ಲಾಭವಾಗಲಿದೆ ಎನ್ನುವ ವಿಷಯ ಇದೀಗ ಬಹಿರಂಗವಾಗಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಬೆಂಗಳೂರಿನ ಸಮೀಪದ ಪ್ರದೇಶದಲ್ಲಿ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಯೋಜನೆ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ತಮಿಳುನಾಡಿನ ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣವು ನಿಯಂತ್ರಕ, ದೂರ ಮತ್ತು ಸಮಯದ ಅಡೆತಡೆಗಳನ್ನು ಎದುರಿಸುತ್ತಿದೆ. ಇದರಿಂದಾಗಿ ಆರಂಭಿಕ ಕಾರ್ಯಾಚರಣೆಗಳು ಅಸಂಭವವಾಗಿದೆ ಎಂದು ಹೇಳಲಾಗಿದೆ. ಇದು ಬೆಂಗಳೂರಿಗೆ ಲಾಭವಾಗಿ ಪರಿಣಮಿಸಿದೆ.

Bengaluru 2nd airport construction benefit Tamil Nadu s Hosur plan face-off

ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಮೇಲೆ ಹೆಚ್ಚುತ್ತಿರುವ ಹೊರೆಯನ್ನು ಕಡಿಮೆ ಮಾಡಲು ಕರ್ನಾಟಕ ಸರ್ಕಾರವು ಬೆಂಗಳೂರಿನ ಬಳಿ ಎರಡನೇ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಕಳೆದ ಒಂದು ವರ್ಷದಿಂದ ಕಾರ್ಯ ಪ್ರವೃತ್ತವಾಗಿದೆ. ಕೆಐಎಯಲ್ಲಿ ಪ್ರಯಾಣಿಕರ ದಟ್ಟಣೆ ತೀವ್ರವಾಗಿ ಹೆಚ್ಚಳವಾಗಿದೆ.ಇದು ದೇಶದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದ್ದು, ಪ್ರಯಾಣಿಕರ ನಿರ್ವಹಣೆಯಲ್ಲಿ ಮುಂಬೈಯನ್ನು ಹಿಂದಿಕ್ಕಿದೆ. ಹೀಗಾಗಿ ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ.

ಈ ರೀತಿ ಇರುವಾಗಲೇ ಬೆಂಗಳೂರಿನ ಸಮೀಪದಲ್ಲೇ ಇರುವ ತಮಿಳುನಾಡಿನ ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಮುಂದಾಗಿತ್ತು. ಆದಾಗ್ಯೂ, ನಿಯಂತ್ರಕ ಮತ್ತು ಒಪ್ಪಂದದ ನಿರ್ಬಂಧಗಳು ಹೊಸೂರು ವಿಮಾನ ನಿಲ್ದಾಣವು ಮುಂದಿನ ದಿನಗಳಲ್ಲಿ ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ.

ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ನಡುವೆ ಸಹಿ ಹಾಕಲಾದ ರಿಯಾಯಿತಿ ಒಪ್ಪಂದದ ಪ್ರಕಾರ, ಬಿಐಎಎಲ್‌ನ ಸ್ಪಷ್ಟ ಅನುಮೋದನೆಯಿಲ್ಲದೆ 2033 ರವರೆಗೆ ಕೆಐಎಯ 150 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಹೊಸ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣದ ಸ್ಥಳವು ಈ 150 ಕಿಲೋಮೀಟರ್ ವಲಯದ ವ್ಯಾಪ್ತಿಯಲ್ಲಿ ಬರುವುದರಿಂದ, 2033 ರ ಮೊದಲು ಅಂತಹ ಯಾವುದೇ ಯೋಜನೆಗೆ BIAL ನ ಒಪ್ಪಿಗೆ ಕಡ್ಡಾಯವಾಗಿದೆ.

ಪಟ್ಟಿಯಿಂದ ಹೊಸೂರು ವಿಮಾನ ನಿಲ್ದಾಣ ಲಿಸ್ಟ್‌ ಔಟ್

ಇನ್ನು ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪೈಪೋಟಿ ಕೊಡಬೇಕು ಎನ್ನುವ ಲೆಕ್ಕಾಚಾರದಲ್ಲಿದ್ದಂತಹ ತಮಿಳುನಾಡಿಗೆ ಭಾರೀ ಹಿನ್ನಡೆ ಎದುರಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ ಕೇಂದ್ರ ಸರ್ಕಾರವು UDAN ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಸಂಪರ್ಕಿಸಬೇಕಾದ ವಿಮಾನ ನಿಲ್ದಾಣಗಳ ಪಟ್ಟಿಯಿಂದ ತಮಿಳುನಾಡಿನ ಪ್ರಸ್ತಾವಿತ ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ಯೋಜನೆಯನ್ನು ಕೈ ಬಿಟ್ಟಿದೆ.

ಆದಾಗ್ಯೂ ಹೊಸೂರು ಯೋಜನೆಗೆ UDAN ನಿಧಿಯನ್ನು ಪಡೆಯುತ್ತಿಲ್ಲ ಎಂದು ತಮಿಳುನಾಡು ಸ್ಪಷ್ಟಪಡಿಸಿದೆ. ಹೊಸೂರು ನಗರದ ಪೂರ್ವಕ್ಕೆ ಸುಳಗಿರಿಯಲ್ಲಿ ಸುಮಾರು 2,300 ಎಕರೆ ಭೂಮಿಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ತಮಿಳುನಾಡು ಸರ್ಕಾರ ಉದ್ದೇಶಿಸಿತ್ತು.

ಇದರ ಹೊರತಾಗಿಯೂ BIAL ಒಪ್ಪಂದದಿಂದಾಗಿ 2033 ರ ಮೊದಲು ಹೊಸೂರು ವಿಮಾನ ನಿಲ್ದಾಣದ ನಿರ್ಮಾಣ ಸಾಧ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ. ತಮಿಳುನಾಡು ಖಾಸಗಿ ಹೂಡಿಕೆಯ ಮೂಲಕ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡರೂ, 2038-40 ರ ಮೊದಲು ಕಾರ್ಯಾಚರಣೆಗಳು ಪ್ರಾರಂಭವಾಗುವ ಸಾಧ್ಯತೆಯಿಲ್ಲ ಎಂದು ಹೇಳಲಾಗಿದೆ.

ಬೆಂಗಳೂರಿಗೆ ಲಾಭ: ಇನ್ನು ಈ ಬೆಳವಣಿಗೆಯಿಂದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+