Bengaluru 2nd Airport: ವಿಮಾನ ನಿಲ್ದಾಣ: ಈ ಕಾರಣಕ್ಕೆ ಇಲ್ಲಿ ಭೂಮಿಗೆ ಬಂಗಾರದ ಬೆಲೆ!
Bengaluru 2nd Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಹೊಸ ಅಪ್ಡೇಟ್ಗಳು ಬರುತ್ತಿವೆ. ಈಗಾಗಲೇ ಎರಡು ಜಾಗಗಳನ್ನು ಅಂತಿಮ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ. ಅದರಲ್ಲಿ ಒಂದು ಜಾಗ ಇಲ್ಲಿಯ ವರೆಗೆ ಡಿ.ಕೆ ಶಿವಕುಮಾರ್ ಅವರು ಹೇಳಿಕೊಂಡು ಬರುತ್ತಿದ್ದ ಪ್ರದೇಶ! ಹೌದು ರಾಮನಗರದ ಭಾಗದ ಜನರಿಗೆ ಭೂಮಿಯನ್ನು ಮಾರಾಟ ಮಾಡಬೇಡಿ. ಈ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಿರಂತರವಾಗಿ ಹೇಳಿಕೊಂಡೇ ಬರುತ್ತಿದ್ದರು. ಇದೀಗ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರಗಳು ಕೈಹಿಡಿಯುತ್ತಿವೆ ಎಂದೇ ಹೇಳಲಾಗುತ್ತಿದೆ. ಕೊನೆಗೂ ಈ ಭಾಗದ ಜನರ ಅದೃಷ್ಟ ಖುಸಲಾಯಿಸಿದೆ. ಭೂಮಿಗೆ ಬಂಗಾರದ ಬೆಲೆ ಬರ್ತಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ ನೋಡಿ..
ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಪ್ರಭಾವ ತೀವ್ರವಾಗಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ತುಮಕೂರು ಹಾಗೂ ನೆಲಮಂಗಲ ಸೇರಿದಂತೆ ವಿವಿಧ ಕಡೆ ಮಾಡುವುದಕ್ಕೆ ಸರ್ಕಸ್ ಜೋರಾಗಿದೆ. ಈ ಭಾಗದ ಸಚಿವರ ಪೈಪೋಟಿಯೂ ಜೋರಾಗಿದೆ. ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಕೊನೆಗೆ ಡಿ.ಕೆ ಶಿವಕುಮಾರ್ ಅವರ ಮಾತೇ ಫೈನಲ್ ಆಗುತ್ತಿದೆ. ಹೀಗಾಗಿ, ಈ ಭಾಗದ ಬೆಲೆಗೆ ಚಿನ್ನದ ಬೆಲೆ ಬರುತ್ತಿದೆ.

ರಾಮನಗರ ಜಿಲ್ಲೆಗೆ ಬಂಪರ್: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಕನಕಪುರ ಅಥವಾ ಕನಕಪುರ ಸುತ್ತಮುತ್ತಲಿನ ಜಾಗದಲ್ಲೇ ಅಂತಿಮವಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ರಾಮನಗರವನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವುದಾಗಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಇದರಿಂದ ಬೆಂಗಳೂರು ಬ್ರ್ಯಾಂಡ್ ಹೆಸರು ಈ ಭಾಗಕ್ಕೂ ಇಲ್ಲಿಗೂ ವಿಸ್ತರಿಸಲಿದೆ ಎಂದು ಹೇಳಲಾಗುತ್ತಿದೆ. ಡಿ.ಕೆ ಶಿವಕುಮಾರ್ ಅವರು ಈ ರೀತಿ ಹೇಳಿದಾಗಲೇ ಈ ಭಾಗದಲ್ಲಿ ಭೂಮಿಗೆ ಒಳ್ಳೆಯ ಬೆಲೆ ಬಂದಿದೆ. ಈ ಭಾಗದಲ್ಲಿ ಭೂಮಿಯ ಬೆಲೆ ನಿಧಾನವಾಗಿ ಹೆಚ್ಚಳವಾಗುತ್ತಿದೆ.
ರಾಮನಗರಕ್ಕೆ ಮೆಟ್ರೋ: ಇನ್ನು ರಾಮನಗರ ಭಾಗಕ್ಕೂ ಮೆಟ್ರೋ ವಿಸ್ತರಣೆ ಮಾಡುವ ಬಗ್ಗೆಯೂ ಈ ಹಿಂದೆಯೇ ಚರ್ಚೆ ನಡೆದಿತ್ತು. ಈಗ ಬೆಂಗಳೂರಿನ ಮೆಟ್ರೋ ಸೇವೆಯನ್ನು ಹೊಸಕೋಟೆ, ಬಿಡದಿ ಹಾಗೂ ಹೊರ ವಲಯಕ್ಕೂ ವಿಸ್ತರಣೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಚರ್ಚೆಗಳು ಹಾಗೂ ಪ್ರಸ್ತಾವನೆ ಬಂದಿವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದರು. ಈ ಮೂಲಕ ರಾಮನಗರ ಎರಡನೇ ಬೆಂಗಳೂರು ಆಗಿ ಬೆಳೆಯುವ ಲಕ್ಷಣಗಳು ಕಾಣಿಸುತ್ತಿವೆ.
ಬೆಂಗಳೂರು ವಿಮಾನ ನಿಲ್ದಾಣ: ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಈಗ ರಾಜ್ಯ ಸರ್ಕಾರ ಎರಡು ಜಾಗಗಳನ್ನು ಶಾರ್ಟ್ ಲಿಸ್ಟ್ ಮಾಡಿದೆ ಅದರಲ್ಲಿ ನೆಲಮಂಗಲ ಹಾಗೂ ಕನಕಪುರ ಸೇರಿದೆ. ಕನಕಪುರ ಸಹ ರಾಮನಗರ ಜಿಲ್ಲೆಗೆ ಬಂದರೆ ನೆಲಮಂಗಲ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಬರುತ್ತದೆ. ಇನ್ನು ಈ ಎಲ್ಲಾ ಕಾರಣಗಳಿಂದ ಈ ಭಾಗದಲ್ಲಿ ಭೂಮಿಗೆ ಚಿನ್ನದ ಬೆಲೆ ಬಂದಿದ್ದು. ಇದರಲ್ಲಿ ಯಾವುದೇ ಆದರೂ ಭೂಮಿಗೆ ಒಳ್ಳೆಯ ಬೆಲೆ ಇದೆ. ಅಲ್ಲದೆ ಮೂರು ಕಾರ್ಯಗಳೇನಾದರೂ ಆದರೆ ಇಲ್ಲಿ ಬೆಂಗಳೂರಿಗಿಂತ ಭೂಮಿ ಬೆಲೆ ಹೆಚ್ಚಳವಾಗಲಿದೆ ಎಂದೇ ಹೇಳಲಾಗುತ್ತಿದೆ.
ಡಿ.ಕೆ ಶಿವಕುಮಾರ್ ಮೇಲುಗೈ: ಇನ್ನು ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣದ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮೇಲುಗೈ ಸಾಧಿಸಿದ್ದಾರೆ.
ಬಹುತೇಕ ರಾಮನಗರದ ಯಾವುದಾದರು ಭಾಗದಲ್ಲಿಯೇ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ ಎಂದು ಹೇಳಲಾಗುತ್ತಿದೆ. ಹಲವು ಸಚಿವರು ವಿವಿಧ ಜಿಲ್ಲೆಗಳಲ್ಲಿ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಅಂತ ಒತ್ತಡ ಹೇರಿದರೂ ಅದು ಸಕ್ಸಸ್ ಆಗುವ ಲಕ್ಷಣ ಕಾಣುತ್ತಿಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications