Bomb Threat: ಬೆಂಗಳೂರಿನ 3 ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ಹೈ ಅಲರ್ಟ್
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿವೆ. ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ನೀಡಲಾಗಿದೆ. ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್ಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಬೆಳಗ್ಗೆ ಸುಮಾರು 2 ಗಂಟೆಗೆ ಇ ಮೇಲ್ ಗಳು ಬಂದಿವೆ ಎಂದು ತಿಳಿದು ಬಂದಿದೆ.

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಪರಿಶೀಲಿಸುತ್ತಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಹೋಟೆಲ್ಗಳ ಮುಂದೆ ಆತಂಕದ ವಾತಾವರಣ
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ. ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.

ನಂತರ ಹೋಟೆಲ್ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳೇ ಆದರೂ ಜನರ ಭಯಪಡುತ್ತಿದ್ದಾರೆ.
ಹುಸಿ ಬಾಂಬ್ ಬೆದರಿಕೆಗಳ ಸರಣಿಗೆ ಸೇರ್ಪಡೆ
ಈ ಘಟನೆಯು ಈ ಹಿಂದೆ ದೇಶದಲ್ಲಿ ಎಲ್ಲೆಲ್ಲಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತೋ, ಆ ಸರಣಿಗಳ ಮುಂದುವರಿ ಭಾಗ ಎನ್ನಲಾಗುತ್ತಿದೆ. ಇಂದಿನ ಬಾಂಬ್ ಬೆದರಿಕೆ ಬೆಂಗಳೂರಿನ ನಾಗರಿಕರಲ್ಲಿ ಸಾಕಷ್ಟು ಕೋಲಾಹಲ ಉಂಟಾಗಲು ಕಾರಣವಾಗಿದೆ.
ಇತ್ತೀಚೆಗೆ ದೆಹಲಿಯಲ್ಲಿ, ಅಹಮದಾಬಾದ್ ಮತ್ತು ಬೆಂಗಳೂರು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಸೂಕ್ತ ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದವು. ಅಹಮದಾಬಾದ್ ಶಾಲೆಯ ಬಾಂಬ್ ಬೆದರಿಕೆಗೂ ರಷ್ಯಾಕ್ಕೂ ನಂಟು ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಂಗಳೂರಿನ ಶಾಲೆಗೆ ಮೇ 14 ಸ್ಪೋಟದ ಬೆದರಿಕೆ
ಬೆಂಗಳೂರಿನ ಜೈನ್ ಹೆರಿಟೇಜ್ ಶಾಲೆಗೆ ಮೇ 14 ರಂದು ಇಮೇಲ್ ಮೂಲಕ ಮಧ್ಯರಾತ್ರಿ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ಕಗ್ಗಲಿಪುರ ಪೊಲೀಸರನ್ನು ಸಂಪರ್ಕಿಸಲಾಯಿತು. ಸದ್ಯ ಪ್ರದೇಶವನ್ನು ಸುರಕ್ಷಿತವಾಗಿರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಯಿತು. ಆ ಪ್ರಕರಣದ ಬಗ್ಗೆ ತನಿಖೆ ಮುಂದುವರಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications