Bomb Threat: ಬೆಂಗಳೂರಿನ 3 ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಇ-ಮೇಲ್, ಹೈ ಅಲರ್ಟ್
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್ಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿವೆ. ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ನೀಡಲಾಗಿದೆ. ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್ಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಬೆಳಗ್ಗೆ ಸುಮಾರು 2 ಗಂಟೆಗೆ ಇ ಮೇಲ್ ಗಳು ಬಂದಿವೆ ಎಂದು ತಿಳಿದು ಬಂದಿದೆ.

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಪರಿಶೀಲಿಸುತ್ತಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಹೋಟೆಲ್ಗಳ ಮುಂದೆ ಆತಂಕದ ವಾತಾವರಣ
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದ್ದಾರೆ. ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.

ನಂತರ ಹೋಟೆಲ್ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳೇ ಆದರೂ ಜನರ ಭಯಪಡುತ್ತಿದ್ದಾರೆ.
ಹುಸಿ ಬಾಂಬ್ ಬೆದರಿಕೆಗಳ ಸರಣಿಗೆ ಸೇರ್ಪಡೆ
ಈ ಘಟನೆಯು ಈ ಹಿಂದೆ ದೇಶದಲ್ಲಿ ಎಲ್ಲೆಲ್ಲಿ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತೋ, ಆ ಸರಣಿಗಳ ಮುಂದುವರಿ ಭಾಗ ಎನ್ನಲಾಗುತ್ತಿದೆ. ಇಂದಿನ ಬಾಂಬ್ ಬೆದರಿಕೆ ಬೆಂಗಳೂರಿನ ನಾಗರಿಕರಲ್ಲಿ ಸಾಕಷ್ಟು ಕೋಲಾಹಲ ಉಂಟಾಗಲು ಕಾರಣವಾಗಿದೆ.
ಇತ್ತೀಚೆಗೆ ದೆಹಲಿಯಲ್ಲಿ, ಅಹಮದಾಬಾದ್ ಮತ್ತು ಬೆಂಗಳೂರು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಸೂಕ್ತ ಪರಿಶೀಲನೆ ಬಳಿಕ ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದವು. ಅಹಮದಾಬಾದ್ ಶಾಲೆಯ ಬಾಂಬ್ ಬೆದರಿಕೆಗೂ ರಷ್ಯಾಕ್ಕೂ ನಂಟು ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಂಗಳೂರಿನ ಶಾಲೆಗೆ ಮೇ 14 ಸ್ಪೋಟದ ಬೆದರಿಕೆ
ಬೆಂಗಳೂರಿನ ಜೈನ್ ಹೆರಿಟೇಜ್ ಶಾಲೆಗೆ ಮೇ 14 ರಂದು ಇಮೇಲ್ ಮೂಲಕ ಮಧ್ಯರಾತ್ರಿ ಬಾಂಬ್ ಬೆದರಿಕೆ ಬಂದಿತ್ತು. ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ಕಗ್ಗಲಿಪುರ ಪೊಲೀಸರನ್ನು ಸಂಪರ್ಕಿಸಲಾಯಿತು. ಸದ್ಯ ಪ್ರದೇಶವನ್ನು ಸುರಕ್ಷಿತವಾಗಿರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಸಂಪೂರ್ಣ ತಪಾಸಣೆ ನಡೆಸಲಾಯಿತು. ಆ ಪ್ರಕರಣದ ಬಗ್ಗೆ ತನಿಖೆ ಮುಂದುವರಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ












Click it and Unblock the Notifications