ಸಾಲದ ನೆಪದಲ್ಲಿ 1 ಕೋಟಿ ರೂ ನಕಲಿ ನೋಟು ನೀಡಿದ್ದ ಮೂವರ ಬಂಧನ !
ಬೆಂಗಳೂರು,ಡಿ.26: ಉದ್ಯಮಿಯೊಬ್ಬರಿಗೆ ಸಾಲದ ರೂಪದಲ್ಲಿ ನಕಲಿ ನೋಟುಗಳನ್ನು ನೀಡುವ ಮೂಲಕ ವಂಚಿಸಿದ ಆರೋಪದ ಮೇಲೆ ಮೂವರು ಆರೋಪಿಗಳ ಹಡೆಮುರಿಕಟ್ಟುವಲ್ಲಿ ಜಯನಗರ ಪೋಲಿಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಜಯನಗರದ ಜೆ.ಎನ್ ಪ್ರಾಜೆಕ್ಟ್ ಪಾಲುದಾರ ಎನ್. ಪಾರ್ಥಸಾರಥಿ ಅವರಿಗೆ 13 ಕೋಟಿ ರೂಪಾಯಿ ಸಾಲವಾಗಿ ನೀಡುವುದಾಗಿ ನಂಬಿಸಿ ಅವರಿಂದ 27ಲಕ್ಷ ರೂಪಾಯಿ ಹಣವನ್ನು ಕಮಿಷನ್ ರೂಪದಲ್ಲಿ ಪಡೆದು ವಂಚಿಸಿದ ಹಿನ್ನೆಲೆಯಲ್ಲಿ ಜಯನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಈ ವಂಚಕರ ಜಾಲ ಬೆನ್ನಟ್ಟಿದ ಪೋಲಿಸರು, ಆರೋಪಿಗಳಾದ ಆರ್ಟಿ ನಗರದ ಮನ್ನಾ ಶರುಣ್(35), ಆರ್ ವಿಷ್ಣು ರಾಜನ್(26) ಮತ್ತು ರಾಮಮೂರ್ತಿ ನಗರದ ಪ್ರವೀಣ್ ಕುಮಾರ(40) ಎಂಬಾತರನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ಆಶಾಲತಾ ರಾವ್,ಲಕ್ಷ್ಮಣ್ ರಾವ್ ಮತ್ತು ತುಷಾರ್ ತೆಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೋಲಿಸರು ತೀವ್ರವಾದ ಹುಡುಕಾಟ ನಡೆಸಿದ್ದಾರೆ.

ಬಂಧಿತ ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ ಒಂದು ಕೋಟಿ ಮೊತ್ತದ ಖೋಟಾ ನೋಟುಗಳು, ಎರಡು ಐಷಾರಾಮಿ ಕಾರುಗಳು, 20 ಲಕ್ಷ ರೂ ನಗದು ಸೇರಿದಂತೆ 6 ಕೆಜಿ ತೂಕದ ನಕಲಿ ಚಿನ್ನದ ಬಿಸ್ಕತ್ ಹಾಗೂ ನಕಲಿ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಹಿನ್ನೆಲೆ ಏನು ?
ಕಟ್ಟಡ ನಿರ್ಮಾಣಕ್ಕಾಗಿ ಪಾರ್ಥಸಾರಥಿ ಬಾಣಸವಾಡಿಯಲ್ಲಿರುವ ಬ್ಯಾಂಕ್ವೊಂದರಲ್ಲಿ 1.75 ಕೋಟಿ ರೂಪಾಯಿ ಸಾಲ ಮಾಡಿದ್ದರು. ವ್ಯವಹಾರದಲ್ಲಿ ಉಂಟಾದ ಅತೀವ ನಷ್ಟದಿಂದ ಸಾಲ ಮರುಪಾವತಿಸಲು ಸಾಧ್ಯವಾಗದೇ ಹೆಣಗಾಡುತ್ತಿದ್ದರು. ಈ ಸಂದರ್ಭದಲ್ಲಿ ಬಿಲ್ಡರ್ ಹಾಗೂ ಎಂಜಿನಿಯರ್ಗಳಾದ ಮನ್ನಾ ಶರುಣ್, ಆರ್ ವಿಷ್ಣುರಾಜನ್ ಮತ್ತು ಪ್ರವೀಣ್ ಕುಮಾರ ಅವರ ಪರಿಚಯವಾಗಿದೆ. ಮೊದಲ ಹಂತದಲ್ಲಿ 1 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದ ವಂಚಕರು, ಉಳಿದ 12 ಕೋಟಿ ರೂಪಾಯಿಯನ್ನು ದಿನದ ನಂತರ ವರ್ಗಾಯಿಸುವುದಾಗಿ ಭರವಸೆ ನೀಡಿದರು. ಅವರನ್ನು ನಂಬಿದ ಪಾರ್ಥಸಾರಥಿ ಅವರು ಬಂಧಿತರ ಬ್ಯಾಂಕ್ ಖಾತೆಗೆ 26 ಲಕ್ಷ ರೂ.ಗಳನ್ನು ವರ್ಗಾಯಿಸಿದ್ದರು. ನಂತರ ಪಾರ್ಥಸಾರಥಿ 1 ಕೋಟಿ ರೂ.ಗಳಿದ್ದ ಬ್ಯಾಗ್ ತೆರೆದು ಪರಿಶೀಲಿಸಿದಾಗ 10 ಬಂಡಲ್ ಕರೆನ್ಸಿ ಸಿಕ್ಕಿವೆ. ಅದರೇ ಆ ನೋಟುಗಳ ಬಂಡಲ್ ಮೇಲೆ ಹಾಕಲಾಗಿದ್ದ 500 ರೂಪಾಯಿ ನೋಟು ಮಾತ್ರ ಅಸಲಿಯಾಗಿತ್ತು.ಉಳಿದವು ನಕಲಿ ನೋಟುಗಳಾಗಿವೆ ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ವಂಚಿಸುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದರು !
ಬಂಧಿತ ಆರೋಪಿಗಳು ಅಮಾಯಕ ಉದ್ಯೋಗಿಗಳನ್ನು ಟಾರ್ಗೆಟ್ ಮಾಡಿಕೊಂಡಿರುತ್ತಿದ್ದರು. ಸಾಲ ಕೊಡಿಸುವ ನೆಪದಲ್ಲಿ ಕಮಿಷನ್ ಪಡೆದು ವಂಚಿಸುವುದು, ನಕಲಿ ಚಿನ್ನ ಮಾರಾಟ ಮಾಡುವುದು ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಈ ಆರೋಪಿಗಳು ಹಲವು ಸಾರ್ವಜನಿಕರನ್ನು
ವಂಚಿಸಿರುವ ಗುಮಾಣಿಯಿದ್ದು ತನಿಖೆಯ ಮೂಲಕ ಸಂಪೂರ್ಣ ಸತ್ಯವನ್ನು ಬಹಿರಂಗ ಪಡಿಸಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.
ಜಯನಗರ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 420,406, 489ಎ, 489 ಬಿ,489ಸಿ,489E ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳಾದ ಆಶಾಲತಾ ರಾವ್, ಲಕ್ಷ್ಮಣ್ ರಾವ್ ಮತ್ತು ತುಷಾರ್ ತಲೆಮರೆಸಿಕೊಂಡಿದ್ದು ಬಂಧನಕ್ಕಾಗಿ ಪೋಲಿಸರು ಜಾಲ ಬೀಸಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications