ಖತರ್ನಾಕ್ ಜಾಕಿ, ಐವಿನ್, ಕರಿಯಾಗೆ ಪೊಲೀಸರ 'ಆತಿಥ್ಯ'
ಬೆಂಗಳೂರು, ಡಿ. 15: ನಗರ ಪೊಲೀಸ್ ಆಯುಕ್ತರ ಆದೇಶದಂತೆ ಕೇಂದ್ರ ಪೊಲೀಸರು ಮೂವರು ರೌಡಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದಾರೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಕೇಶ್ ಅಲಿಯಾಸ್ ಜಾಕಿ (30), ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಐವಿನ್ ಕುಮಾರ್ ಅಲಿಯಾಸ್ ಐವಿನ್ (27) ಹಾಗೂ ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಶಾಂತ ಅಲಿಯಾಸ್ ಕರಿಯಾ (28) ಬಂಧಿತ ರೌಡಿಗಳು.

ಜಾಕಿ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಅಪರಾಧ ಪ್ರಕರಣಗಳು ದಾಖಲಾಗಿವೆ. ಈತನು ಕುಖ್ಯಾತ ರೌಡಿ ಕವಳನ ಸಂಬಂಧಿ. ಕವಳನ ಜೊತೆಯಲ್ಲಿದ್ದಾಗ ಅನೇಕ ಕೊಲೆ, ಕೊಲೆ ಯತ್ನ, ದರೋಡೆ ಇತರೆ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ. ಅಲ್ಲದೆ, ನಕರಾ ಬಾಬು ಕೊಲೆಯ ಮುಖ್ಯ ರೂವಾರಿ ಎಂದು ಪೊಲೀಸರು ತಿಳಿಸಿದ್ದಾರೆ. [ಓವೈಸಿ ಹತ್ಯೆಗೆ ಸಂಚು: ರೌಡಿಗಳ ಬಂಧನ]
ಐವಿನ್ ಕುಮಾರ್ ವಿರುದ್ಧ ವಿವೇಕನಗರ ಪೊಲೀಸ್ ಠಾಣೆಯಲ್ಲಿ 17 ಅಪರಾಧ ಪ್ರಕರಣಗಳು ದಾಖಲಾಗಿವೆ. ಹಲ್ಲೆ, ಕೊಲೆಗೆ ಯತ್ನ, ದರೋಡೆಗೆ ಸಿದ್ಧತೆ ಮುಂತಾದ ಆರೋಪಗಳು ಈತನ ಮೇಲಿವೆ. ಸಾರ್ವಜನಿಕರಿಗೆ ಶಾಂತಿ ಭಂಗ ಉಂಟುಮಾಡುತ್ತಿದ್ದ ಕೃತ್ಯದಲ್ಲಿ ಹಾಗೂ ಫುಟ್ಪಾತ್ ವ್ಯಾಪಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪವನ್ನು ಈತ ಎದುರಿಸುತ್ತಿದ್ದ.
ಆರೋಪಿ ಕರಿಯಾ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿದ್ದ. ಹಣಕ್ಕಾಗಿ ಕೊಲೆ ಯತ್ನ, ಡಕಾಯಿತಿ, ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. [ಬೀದಿ ರೌಡಿ ಬಂಧನ]

ಇಬ್ಬರು ಬೈಕ್, ಸರಗಳ್ಳರ ಬಂಧನ
ಬೆಂಗಳೂರಿನ ವಿವಿಧೆಡೆ ಬೈಕ್ ಹಾಗೂ ಮಹಿಳೆಯರ ಸರಗಳನ್ನು ಕಳವು ಮಾಡುತ್ತಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪ್ಪಾಜಿ ಮುನಿವೆಂಕಟಪ್ಪ (35) ಹಾಗೂ ಗಣಪತಿ ಶಾಮನಾಯಕ್ (23) ಬಂಧಿತ ಆರೋಪಿಗಳು. ಅವರಿಂದ 8 ಲಕ್ಷ ರೂ. ಬೆಲೆಯ 12 ದ್ವಿ ಚಕ್ರ ವಾಹನ, 100 ಗ್ರಾಂ. ತೂಕದ ಚಿನ್ನದ ಚೈನ್ ವಶಪಡಿಸಿಕೊಳ್ಳಲಾಗಿದೆ. [ನಕಲಿ ನೋಕಿಯಾ ಮೊಬೈಲ್ ಮಾರಾಟಗಾರರ ಸೆರೆ]
ಇವರ ಬಂಧನದ ಮೂಲಕ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಸರ ಅಪಹರಣ ಪ್ರಕರಣಗಳು ಹಾಗೂ ಬೆಂಗಳೂರು ನಗರದ ಬಸವನಗುಡಿ ಪೊಲೀಸ್ ಠಾಣೆಯ ಮೂರು ದ್ವಿ ಚಕ್ರ ವಾಹನಗಳು, ರಾಜರಾಜೇಶ್ವರಿ ನಗರ ಠಾಣೆಯ ಒಂದು ದ್ವಿ ಚಕ್ರ ವಾಹನ, ಉಪ್ಪಾರಪೇಟೆ ಠಾಣೆಯ ಒಂದು ದ್ವಿ ಚಕ್ರ ವಾಹನ, ಅತ್ತಿಬೆಲೆ ಪೊಲೀಸ್ ಠಾಣೆಯ ಒಂದು ದ್ವಿ ಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂವರು ಮೊಬೈಲ್ ಕಳ್ಳರ ಬಂಧನ
ಆಟೋ ರಿಕ್ಷಾದಲ್ಲಿ ಬಂದು ಮೊಬೈಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. [ಫ್ಲಿಪ್ ಕಾರ್ಟ್ ನಿಂದ ಮೊಬೈಲ್ ಕದ್ದು ಸಿಕ್ಕಿಬಿದ್ದ]
ಚಂದ್ರಶೇಖರ್ ಪಾಪಣ್ಣ, ಗಣೇಶ ಬಿ ಬಸವರಾಜ್ ಹಾಗೂ ಕಿರಣ್ಕುಮಾರ್ ಇ ಎಳುಮಲೈ ಬಂಧಿತ ಆರೋಪಿಗಳು. ಅವರಿಂದ 1.5 ಲಕ್ಷ ರೂ. ಮೌಲ್ಯದ ಒಂದು ಮೊಬೈಲ್ ಪೋನ್, ಒಂದು ನಕಲಿ ಚಿನ್ನದ ಚೈನು ಮತ್ತು ಸುಲಿಗೆ ಮಾಡಲು ಬಳಸಿದ್ದ ಆಟೋ ರಿಕ್ಷಾ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications