ಅಲಬಾಮದಿಂದ ಹೊಸತು ಕಲಿತು ಬಂದ ಬೆಂಗಳೂರ ಶಿಕ್ಷಕಿಯರು
ಬೆಂಗಳೂರು, ಜು, 22: ನಗರದ ನಾಲ್ಕು ಜನ ಶಿಕ್ಷಕಿಯರು ಅಮೆರಿಕಕ್ಕೆ ತೆರಳಿ ಬಾಹ್ಯಾಕಾಶ ವಿಜ್ಞಾನದಲ್ಲಿ ಅನುಭವ ಮತ್ತು ತರಬೇತಿ ಪಡೆದು ಹಿಂದಿರುಗಿದ್ದಾರೆ. ಅಮೆರಿಕದ ಅಲಬಾಮಾದ ಹಂಟ್ಸ್ ವಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಯುಎಸ್ ಅಂತರಿಕ್ಷ ಕಾರ್ಯಾಗಾರದಲ್ಲಿ ಭಾಗವಹಿಸಿ ಹಿಂದಿರುಗಿದ್ದಾರೆ,
ಕೇವಲ ಬಾಹ್ಯಾಕಾಶದ ಬಗ್ಗೆ ತಿಳಿವಳಿಕೆ ಮಾತ್ರವಲ್ಲದೇ, ಚಂದ್ರನ ಮೇಲೆ ಕಾಲಿಟ್ಟರೆ ಯಾವ ರೀತಿಯಾಗುತ್ತದೆ ಎಂಬ ಅನುಭವವನ್ನು ಪಡೆದುಕೊಂಡು ಬಂದಿದ್ದಾರೆ.[1.6 ಮಿಲಿಯನ್ ಕಿಮೀ ದೂರ ನಿಂತು ಭೂಮಿ ನೋಡಿದ್ದೀರಾ?]

ಕಾರ್ಯಾಗಾರದಲ್ಲಿ 200 ಜನ ಶಿಕ್ಷಕರು ಭಾಗವಹಿಸಿದ್ದರು. ಜೂನ್ 10 ರಂದು ಕಾರ್ಯಾಗಾರ ಆರಂಭಗೊಂಡು 23ಕ್ಕೆ ಕೊನೆಯಾಗಿತ್ತು. ವಿಜ್ಞಾನ ಮತ್ತು ಗಣಿತಕ್ಕೆ ಸಂಬಂಧಿಸಿ ಇಲ್ಲಿ ಕಲಿತ ಹೊಸ ಸಂಗತಿಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರೆ ಗುಣಮಟ್ಟದ ಶಿಕ್ಷಣಕ್ಕೆ ಮತ್ತೊಂದು ಕೊಡುಗೆ ನೀಡಿದ ಹಾಗೆ ಆಗುತ್ತದೆ ಎಂದು ಹಿಂದಿರುಗಿದ ಶಿಕ್ಷಕಿಯರು ಅಭಿಪ್ರಾಯ ಹಂಚಿಕೊಂಡರು.
ಹನಿ ವೆಲ್ ಸಂಸ್ಥೆ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಂತರಿಕ್ಷಯಾನದ ಘಟನಾವಳಿಗಳು, ಬದಲಾವಣೆ, ರಾಕೆಟ್ ತಂತ್ರಜ್ಞಾನ ಹೀಗೆ ಹತ್ತು ಹಲವು ಸಂಗತಿಗಳ ಬಗ್ಗೆ ಮಾಹಿತಿ ನೀಡಲಾಯಿತು.[ಭೂಮಿಗೆ ಕ್ಷುದ್ರ ಗ್ರಹ ಅಪ್ಪಳಿಸಿದರೆ ಅಲ್ಲೋಲ-ಕಲ್ಲೋಲ]
ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗೆ ವಿಜ್ಞಾನದ ಬೆಳವಣಿಗೆಗಳ ಸೂಕ್ತ ಪರಿಕಲ್ಪನೆ ಇದ್ದರೆ ಮಾತ್ರ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ಹೇಳಲು ಸಾಧ್ಯ. ನಾವು ಪಡೆದುಕೊಂಡು ಬಂದಿರುವ ಜ್ಞಾನವನ್ನು ಮಕ್ಕಳಿಗೆ ಹಂಚುತ್ತೇವೆ ಎಂದು ತರಬೇತಿ ಪಡೆದು ಆಗಮಿಸಿದ ವಾಣಿ ಇಂಟರ್ ನ್ಯಾಶನಲ್ ಶಾಲೆಯ ಗಣಿತ ಶಿಕ್ಷಕಿ ಸುಭಾಶ್ರೀ ಚಂದ್ರಶೇಖರನ್ ತಿಳಿಸಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications