Bengaluru: ವೃದ್ಧೆಯ ಶವ ಡ್ರಮ್ನಲ್ಲಿ ಕತ್ತರಿಸಿದ ರೀತಿ ಪತ್ತೆ: ದೆಹಲಿ ಕೊಲೆ ನೆನಪಿಸಿದ ಘಟನೆ
ಬೆಂಗಳೂರು, ಫೆಬ್ರವರಿ 26: ದೆಹಲಿಯಲ್ಲಿ ತನ್ನ ಪ್ರೇಮಿಯ ದೇಹವನ್ನು ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟ, ಹತ್ಯೆ ಮಾಡಿದ ಘಟನೆ ಕೇಳಿದ್ದೀರಿ. ಇದೀಗ ಅಂತದ್ದೊಂದು ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಇಲ್ಲಿ ಮಹಿಳೆಯೊಬ್ಬರ ದೇಹವನ್ನು ಕತ್ತರಿಸಿಟ್ಟು ಡ್ರಮ್ನಲ್ಲಿ ತುಂಬಿಟ್ಟ ಘಟನೆ ನಡೆದಿದೆ.
ಹೌದು, ಬೆಂಗಳೂರಿನ ಕೆ.ಆರ್ ಪುರಂ ಪ್ರದೇಶದಲ್ಲಿ 70 ವರ್ಷದ ವೃದ್ಧ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಛಿದ್ರಗೊಂಡ ದೇಹವನ್ನು ಡ್ರಮ್ನಲ್ಲಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಅತ್ಯಧಿಕ ಜನ ದಟ್ಟಣೆ ಇರುವ ನಗರದ ಕೆ.ಆರ್ಪುರಂ 70 ವರ್ಷದ ವೃದ್ಧ ಮಹಿಳೆಯ ದೇಹ ಕತ್ತರಿಸಿ ತ್ಯಜಿಸಿದ ಮನೆಯ ಸಮೀಪವಿರುವ ಖಾಲಿ ಜಾಗದಲ್ಲಿ ಎಸೆದ ಧಾರುಣ ಘಟನೆ ನಡೆದಿದೆ. ಸದ್ಯ ಮೃತ ಮಹಿಳೆಯನ್ನು ಸಶೀಲಮ್ಮ ಎಂದು ಪೊಲೀಸರು ಗುರುತಿಸಿದ್ದಾರೆ.
ಸುಶೀಲಮ್ಮ ಹತ್ಯೆಗೀಡಾದ ದುರ್ದೈವಿ
ಕೆಆರ್ ಪುರಂ ಸಮೀಪದ ನಿಸರ್ಗ ಲೇಔಟ್ ಬಳಿಯ ಬಾಡಿಗೆ ಫ್ಲಾಟ್ನಲ್ಲಿ ಈ ಮೃತ ಮಹಿಳೆಯೊಬ್ಬರು ವಾಸ ಮಾಡುತ್ತಿದ್ದರು. ಮೃತ ಸುಶೀಲಮ್ಮಳ ಜತೆಗೆ ಅವರ ಇಬ್ಬರು ಮಕ್ಕಳು ಮತ್ತು ಕೆಲ ಸಂಬಂಧಿಕರು ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೂರ್ವದ ಹೆಚ್ಚುವರಿ ಆಯುಕ್ತ ರಮಣ್ ಗುಪ್ತಾ ಮಾಹಿತಿ ನೀಡಿದ್ದಾರೆ.
ವೃದ್ಧ ಮಹಿಳೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಅವರ ಕೈಕಾಲುಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ದೇಹದ ಭಾಗಗಳನ್ನು ಡ್ರಮ್ನಲ್ಲಿ ತುಂಬಿಟ್ಟಿದ್ದಾರೆ. ಅದನ್ನು ಸ್ಥಳೀಯ ಖಾಲಿ ಜಾಗವೊಂದರಲ್ಲಿ ಬೀಡಾಡಿದ್ದರು. ಸ್ಥಳದಲ್ಲಿ ದುರ್ವಾಸನೆ ಬರುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಭಾನುವಾರ ಕೊಲೆ ನಡೆದಿರುವ ಶಂಕೆ
ದೂರು ಪಡೆದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಡ್ರಮ್ನಲ್ಲಿ ಯಾರೋ ಮಹಿಳೆಯನ್ನು ಕೊಂದು ಶವ ತುಂಬಿರುವುದು ಗೊತ್ತಾಗಿದೆ. ಘಟನೆಯು ಭಾನುವಾರ ನಡೆದಿರಬಹುದು ಎಂದು ಶಂಕಿಸಿರುವ ಪೊಲೀಸರು ಸ್ಥಳವನ್ನು ಪರಿಶೀಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಪೊಲೀಸ್ ಅಧಿಕಾರಿಗಳು ಎಲ್ಲಾ ಆಯಾಮಗಳಲ್ಲಿ ಅಗತ್ಯ ತನಿಖೆ ಕೈಗೊಂಡಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಸಾಧ್ಯವಾದಷ್ಟು ಬೇಗ ದುಷ್ಕರ್ಮಿಗಳನ್ನು ಹಿಡಿಯುವ ಕಾಯ ಮುಂದುವರಿಸಿದ್ದೇವೆ ಎಂದು ಅವರು ತಿಳಿಸಿದರು.
ಯಾವ ಕಾರಣಕ್ಕೆ ಈ ಮಹಿಳೆಯ ಹತ್ಯೆ ನಡೆದಿದೆ. ಯಾರು ಮಾಡಿದ್ದು ಎಂಬೆಲ್ಲ ಮಾಹಿತಿಗಳು ಪೊಲೀಸ್ ತನಿಖೆಯಿಂದ ಬಹಿರಂಗಗೊಳ್ಳಲಿವೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications