Bengaluru: ಕಾಮಗಾರಿ ನಡೆಸದೆ ₹118 ಕೋಟಿ ಬಿಲ್ ತೆರವು- ಬಿಬಿಎಂಪಿ, ಕೆಆರ್ಐಡಿಎಲ್ನ 8 ಎಂಜಿನಿಯರ್ಗಳ ಅಮಾನತು
ಬೆಂಗಳೂರು, ಜೂನ್ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ (ಕೆಆರ್ಐಡಿಎಲ್)ಗೆ ಸಂಬಂಧಿಸಿದ ಎಂಟು ಎಂಜಿನಿಯರ್ಗಳನ್ನು ನಗರಾಭಿವೃದ್ಧಿ ಇಲಾಖೆ ಅಮಾನತುಗಳಿಸಿದೆ. ಲೋಕಾಯುಕ್ತ ವರದಿಯ ಶಿಫಾರಸುಗಳ ಆಧಾರದ ಮೇಲೆ ಈ ಕ್ರಮವನ್ನು ಜರುಗಿಸಲಾಗಿದೆ.
ಅಮಾನತುಗೊಂಡ ಅಧಿಕಾರಿಗಳು 118 ಕೋಟಿ ರೂಪಾಯಿ ಮೌಲ್ಯದ ಬಿಲ್ಗಳನ್ನು ತೆರವುಗೊಳಿಸಿದ್ದಾರೆ ಎಂದು ಹೇಳಲಾಗಿದೆ. 2019-20 ರಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅಥವಾ ಯಾವುದೇ ಕಾರ್ಯಗಳನ್ನು ಕೈಗೊಳ್ಳದೇ ಬಿಲ್ಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

ಬಿಬಿಎಂಪಿಯು ಹಲವು ಯೋಜನೆಗಳಲ್ಲಿ ಕಾಮಗಾರಿ ನಡೆಸದೆ ಗುತ್ತಿಗೆದಾರರಿಗೆ 250 ಕೋಟಿ ರೂ.ಗಳನ್ನು ನೀಡಿದೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಕಾಮಗಾರಿ ನೀಡಿದ ಎರಡು ತಿಂಗಳಲ್ಲಿ ಬಿಲ್ಗಳನ್ನು ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಒಟ್ಟು 126 ಕಾಮಗಾರಿಗಳಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು.
ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರ ಆದೇಶದ ಮೇರೆಗೆ ಲೋಕಾಯುಕ್ತ ತಾಂತ್ರಿಕ ವಿಭಾಗದ ಐವರು ಎಂಜಿನಿಯರ್ಗಳು ತನಿಖೆ ನಡೆಸಿ 116 ಕಾಮಗಾರಿಗಳಲ್ಲಿ ಲೋಪದೋಷ ಕಂಡು ಬಂದಿದೆ ಎಂದು ವರದಿ ನೀಡಲಾಗಿದೆ. 114 ಯೋಜನೆಗಳಿಗೆ ಕಾಮಗಾರಿ ಮಾಡದೇ ಬಿಲ್ ಕ್ಲಿಯರ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಎರಡು ಯೋಜನೆಗಳಲ್ಲಿ, ಕಾಮಗಾರಿಗಳು ಟೆಂಡರ್-ನಿರ್ದಿಷ್ಟವಾಗಿಲ್ಲ. ಸುಮಾರು 118 ಕೋಟಿ ಸಾರ್ವಜನಿಕ ಹಣವನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು 2022 ರ ಜನವರಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಬಹುತೇಕ ಯೋಜನೆಗಳು ಪ್ರಾರಂಭವಾಗದಿದ್ದರೂ ಅಧಿಕಾರಿಗಳು ಒಟ್ಟು ಕಾಮಗಾರಿಗಳ 70 ಪ್ರತಿಶತದಷ್ಟು ಬಿಲ್ಗಳನ್ನು ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಈ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಕೆಆರ್ಐಡಿಎಲ್ನಿಂದ ನಡೆದಿರುವ ಕಾಮಗಾರಿಗಳು ಮತ್ತು ನಡೆಯುತ್ತಿರುವ ಕಾಮಗಾರಿಗಳ ತನಿಖೆಗೆ ಲೋಕಾಯುಕ್ತ ಶಿಫಾರಸು ಮಾಡಿದೆ.
ಲೋಕಾಯುಕ್ತ ವರದಿಯ ನಂತರ ನಗರಾಭಿವೃದ್ಧಿ ಇಲಾಖೆಯು ಎಂಟು ಇಂಜಿನಿಯರ್ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಬಿಬಿಎಂಪಿ ಮುಖ್ಯ ಎಂಜಿನಿಯರ್ ದೊಡ್ಡಯ್ಯ, ತಾಂತ್ರಿಕ ವಿಜಿಲೆನ್ಸ್ ಸೆಲ್, ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಕುಮಾರ್, ಪ್ರಭಾರಿ ಕಾರ್ಯಪಾಲಕ ಎಂಜಿನಿಯರ್ ಬಸವರಾಜ್ ಎನ್, ಸಹಾಯಕ ಎಂಜಿನಿಯರ್ ಸಿದ್ದರಾಮಯ್ಯ, ಸಹಾಯಕ ಎಂಜಿನಿಯರ್ ಎನ್.ಜಿ.ಉಮೇಶ್, ಕೆಆರ್ಡಿಎಲ್ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀತೇಜ್ ಅವರು ಅಮಾನತುಗೊಂಡ ಅಧಿಕಾರಿಗಳು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ









Click it and Unblock the Notifications