Get Updates
Get notified of breaking news, exclusive insights, and must-see stories!

Bengaluru: ಕಾಮಗಾರಿ ನಡೆಸದೆ ₹118 ಕೋಟಿ ಬಿಲ್‌ ತೆರವು- ಬಿಬಿಎಂಪಿ, ಕೆಆರ್‌ಐಡಿಎಲ್‌ನ 8 ಎಂಜಿನಿಯರ್‌ಗಳ ಅಮಾನತು

ಬೆಂಗಳೂರು, ಜೂನ್‌ 16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ (ಕೆಆರ್‌ಐಡಿಎಲ್)ಗೆ ಸಂಬಂಧಿಸಿದ ಎಂಟು ಎಂಜಿನಿಯರ್‌ಗಳನ್ನು ನಗರಾಭಿವೃದ್ಧಿ ಇಲಾಖೆ ಅಮಾನತುಗಳಿಸಿದೆ. ಲೋಕಾಯುಕ್ತ ವರದಿಯ ಶಿಫಾರಸುಗಳ ಆಧಾರದ ಮೇಲೆ ಈ ಕ್ರಮವನ್ನು ಜರುಗಿಸಲಾಗಿದೆ.

ಅಮಾನತುಗೊಂಡ ಅಧಿಕಾರಿಗಳು 118 ಕೋಟಿ ರೂಪಾಯಿ ಮೌಲ್ಯದ ಬಿಲ್‌ಗಳನ್ನು ತೆರವುಗೊಳಿಸಿದ್ದಾರೆ ಎಂದು ಹೇಳಲಾಗಿದೆ. 2019-20 ರಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ ಅಥವಾ ಯಾವುದೇ ಕಾರ್ಯಗಳನ್ನು ಕೈಗೊಳ್ಳದೇ ಬಿಲ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆರೋಪಿಸಲಾಗಿದೆ.

Bengaluru: 8 engineers from BBMP, KRIDL suspended for clearing Rs 118 crore without any works

ಬಿಬಿಎಂಪಿಯು ಹಲವು ಯೋಜನೆಗಳಲ್ಲಿ ಕಾಮಗಾರಿ ನಡೆಸದೆ ಗುತ್ತಿಗೆದಾರರಿಗೆ 250 ಕೋಟಿ ರೂ.ಗಳನ್ನು ನೀಡಿದೆ ಎಂದು ಆರೋಪಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದ ಡಿಕೆ ಸುರೇಶ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಕಾಮಗಾರಿ ನೀಡಿದ ಎರಡು ತಿಂಗಳಲ್ಲಿ ಬಿಲ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಒಟ್ಟು 126 ಕಾಮಗಾರಿಗಳಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿದ್ದರು.

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರ ಆದೇಶದ ಮೇರೆಗೆ ಲೋಕಾಯುಕ್ತ ತಾಂತ್ರಿಕ ವಿಭಾಗದ ಐವರು ಎಂಜಿನಿಯರ್‌ಗಳು ತನಿಖೆ ನಡೆಸಿ 116 ಕಾಮಗಾರಿಗಳಲ್ಲಿ ಲೋಪದೋಷ ಕಂಡು ಬಂದಿದೆ ಎಂದು ವರದಿ ನೀಡಲಾಗಿದೆ. 114 ಯೋಜನೆಗಳಿಗೆ ಕಾಮಗಾರಿ ಮಾಡದೇ ಬಿಲ್ ಕ್ಲಿಯರ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಎರಡು ಯೋಜನೆಗಳಲ್ಲಿ, ಕಾಮಗಾರಿಗಳು ಟೆಂಡರ್-ನಿರ್ದಿಷ್ಟವಾಗಿಲ್ಲ. ಸುಮಾರು 118 ಕೋಟಿ ಸಾರ್ವಜನಿಕ ಹಣವನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರು 2022 ರ ಜನವರಿಯಲ್ಲಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಬಹುತೇಕ ಯೋಜನೆಗಳು ಪ್ರಾರಂಭವಾಗದಿದ್ದರೂ ಅಧಿಕಾರಿಗಳು ಒಟ್ಟು ಕಾಮಗಾರಿಗಳ 70 ಪ್ರತಿಶತದಷ್ಟು ಬಿಲ್‌ಗಳನ್ನು ತೆರವುಗೊಳಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ಈ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಕೆಆರ್‌ಐಡಿಎಲ್‌ನಿಂದ ನಡೆದಿರುವ ಕಾಮಗಾರಿಗಳು ಮತ್ತು ನಡೆಯುತ್ತಿರುವ ಕಾಮಗಾರಿಗಳ ತನಿಖೆಗೆ ಲೋಕಾಯುಕ್ತ ಶಿಫಾರಸು ಮಾಡಿದೆ.

ಲೋಕಾಯುಕ್ತ ವರದಿಯ ನಂತರ ನಗರಾಭಿವೃದ್ಧಿ ಇಲಾಖೆಯು ಎಂಟು ಇಂಜಿನಿಯರ್‌ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಬಿಬಿಎಂಪಿ ಮುಖ್ಯ ಎಂಜಿನಿಯರ್ ದೊಡ್ಡಯ್ಯ, ತಾಂತ್ರಿಕ ವಿಜಿಲೆನ್ಸ್ ಸೆಲ್, ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್ ಕುಮಾರ್, ಪ್ರಭಾರಿ ಕಾರ್ಯಪಾಲಕ ಎಂಜಿನಿಯರ್ ಬಸವರಾಜ್ ಎನ್, ಸಹಾಯಕ ಎಂಜಿನಿಯರ್ ಸಿದ್ದರಾಮಯ್ಯ, ಸಹಾಯಕ ಎಂಜಿನಿಯರ್ ಎನ್.ಜಿ.ಉಮೇಶ್, ಕೆಆರ್‌ಡಿಎಲ್‌ ಕಾರ್ಯಪಾಲಕ ಎಂಜಿನಿಯರ್ ಶ್ರೀನಿವಾಸ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವೆಂಕಟಲಕ್ಷ್ಮಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀತೇಜ್ ಅವರು ಅಮಾನತುಗೊಂಡ ಅಧಿಕಾರಿಗಳು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+