ವೃದ್ಧರನ್ನು ಬಲಿ ತೆಗೆದುಕೊಂಡ ಫೋರ್ಟಿಸ್ ಆಸ್ಪತ್ರೆ ಲಿಫ್ಟ್
ಬೆಂಗಳೂರು, ಜು. 30: ಡಯಾಲಿಸಿಸ್ ಗೆಂದು ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ವಯೋವೃದ್ಧ ಆಕಸ್ಮಿಕವಾಗಿ ಲಿಫ್ಟ್ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ನಾಗರಬಾವಿಯ ಫೋರ್ಟಿಸ್ ಆಸ್ಪತ್ರೆ ಆವರಣದಲ್ಲಿ ದುರ್ಘಟನೆ ಸಂಭವಿಸಿದೆ.
80 ವರ್ಷದ ಸಚ್ಚಿದಾನಂದ ಮೂರ್ತಿ ದಾರುಣ ಸಾವಿಗೀಡಾದವರು. ತಮ್ಮ ಪತ್ನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದ ಸಚ್ಚಿದಾನಂದ ಮೂರ್ತಿ ಮೂರನೇ ಮಹಡಿಗೆ ತೆರಳಲು ಲಿಫ್ಟ್ ಪ್ರವೇಶಿಸಲು ಮುಂದಾಗಿದ್ದಾರೆ. ಒಂದನೇ ಮಹಡಿಯಲ್ಲಿದ್ದ ಅವರು ಲಿಫ್ಟ್ ಬಟನ್ ಒತ್ತಿದ್ದು ಲಿಫ್ಟ್ ತೆರೆದುಕೊಂಡಿದೆ. ಆದರೆ ಈ ವೇಳೆ ಲಿಫ್ಟ್ ಮೂರನೇ ಮಹಡಿಯಲ್ಲೇ ಇತ್ತು.[ಕಾರಿನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ: ವಿಡಿಯೋ]

ಘಟನೆ ಗೊತ್ತಾಗಿದ್ದು ಹೇಗೆ?
ಬುಧವಾರ ಬೆಳಗ್ಗೆಯೇ ದುರ್ಘಟನೆ ಸಂಭವಿಸಿದೆ. ಸಂಜೆ ಸಚ್ಚಿದಾನಂದಮೂರ್ತಿ ಕಾಣದಿದ್ದಾಗ ಆಸ್ಪತ್ರೆ ಸಿಬ್ಬಂದಿ ಮತ್ತು ಕುಟುಂಬದವರು ಹುಡುಕಾಟ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಅವಲೋಕಿಸಿದಾಗ ಮೂರ್ತಿ ಲಿಫ್ಟ್ ಪ್ರವೇಶಿಸಿರುವುದು ಕಂಡುಬಂದಿದೆ. ನಂತರ ಲಿಫ್ಟ್ ನ ತಳಭಾಗದ ಗುಂಡಿಯಲ್ಲಿ ಮೂರ್ತಿ ಅವರ ಶವ ಪತ್ತೆಯಾಗಿದೆ.[ಗಂಡನ ಕಳೆದುಕೊಂಡ ಮಹಿಳೆಯ ನೋವಿನ ಪತ್ರ]
ಆಕಸ್ಮಿಕವಾಗಿ ಕೆಳಕ್ಕೆ ಬಿದ್ದ ಮೂರ್ತಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮೂರ್ತಿ ಕುಟುಂಬದವರು ಆಸ್ಪತ್ರೆಯ ಮೇಲೆ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸರು ಐಪಿಸಿ 304 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More From
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications