Bengaluru Air Quality: ಈ ಕಾರಣಕ್ಕೆ ಬೆಂಗಳೂರಿನ ಗಾಳಿಯ ಗುಣಮಟ್ಟ ಕಳೆದ ವರ್ಷಕ್ಕಿಂತ ಉತ್ತಮ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯುಐ) ಈ ಬಾರಿ ಉತ್ತಮವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ತಿಳಿಸಿದೆ. ಕಳೆದ ವರ್ಷದ ದೀಪಾವಳಿಗೆ ಹೋಲಿಸಿದರೆ ಈ ಬಾರಿ ನಗರದ ವಾಯು ಗುಣಮಟ್ಟ ಸೂಚ್ಯಂಕ ಕಳೆದ ಶೇ 98ರಷ್ಟು ಉತ್ತಮವಾಗಿದೆ. ಸಾಮಾನ್ಯ ದಿನಕ್ಕಿಂತ ಶೇ 7ರಷ್ಟು ಕಡಿಮೆಯಾಗಿದೆ ಎಂದು ಮಂಡಳಿ ಹೇಳಿದೆ. ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿತ್ತು. ಆದರೆ ಈ ಬಾರಿ ಉತ್ತಮವಾಗಿರುವುದು ಅಚ್ಚರಿಯ ಬೆಳವಣಿಗೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಶಬ್ಧ ಮಾಲಿನ್ಯವು ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಾಗಿದೆ.
ಈ ವರ್ಷ ದೀಪಾವಳಿಯ ಎರಡನೇ ದಿನದಂದು ಬೆಂಗಳೂರಿನಲ್ಲಿ ಶುದ್ಧ ಗಾಳಿ ಕಂಡುಬಂದಿದ್ದು, ವಾಯು ಗುಣಮಟ್ಟ ಸೂಚ್ಯಂಕವು ಹಿಂದಿನ ವರ್ಷಗಳಿಗಿಂತ ಸುಧಾರಿಸಿದೆ. ಕಳೆದ ವರ್ಷದ ದೀಪಾವಳಿಯ ಅದೇ ದಿನಕ್ಕಿಂತ ನಗರದ ಎಕ್ಯುಐ ಶೇ 98ರಷ್ಟು ಉತ್ತಮವಾಗಿದೆ. ನಗರದಲ್ಲಿ ಸಾಮಾನ್ಯವಾಗಿ ಸರಾಸರಿ ದಿನದಂದು ದಾಖಲಾಗುವ ಪ್ರಮಾಣಕ್ಕಿಂತ ಶೇ 7ರಷ್ಟು ಕಡಿಮೆಯಾಗಿದೆ ಎಂದು ಮಂಡಳಿ ಹೇಳಿದೆ.

ನಗರದ ಮೆಜೆಸ್ಟಿಕ್ ಬಳಿ (104) ಹಾಗೂ ಮೈಸೂರು ರಸ್ತೆಯಲ್ಲಿರುವ (109) ಗಾಳಿಯ ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳು ಸೂಚ್ಯಂಕವನ್ನು ವರದಿ ಮಾಡಿದ್ದವು. ಕಳೆದ ವರ್ಷ ದೀಪಾವಳಿಯ ಮೊದಲ ದಿನದಂದು ಹೆಬ್ಬಾಳದಲ್ಲಿ ವಾಯು ಗುಣಮಟ್ಟ ಸೂಚ್ಯಂಕ 263ರಷ್ಟಿತ್ತು. ಹೊಂಬೇಗೌಡ ನಗರ 121, ಸಿಲ್ಕ್ ಬೋರ್ಡ್ ಜಂಕ್ಷನ್ 170, ಮೈಸೂರು ರಸ್ತೆ 122 ಮತ್ತು ಜಯನಗರ 136 ತಲುಪಿತ್ತು ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಸಾಮಾನ್ಯವಾಗಿ ಈ ವಾಯು ಗುಣಮಟ್ಟ ಸೂಚ್ಯಂಕವು 100ಕ್ಕಿಂತ ಹೆಚ್ಚು ತಲುಪಿದರೆ ಅದು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಶ್ವಾಸಕೋಶ ಅಥವಾ ಹೃದಯ ಕಾಯಿಲೆ ಇರುವ ವ್ಯಕ್ತಿಗಳಲ್ಲಿ, ಮಕ್ಕಳು ಮತ್ತು ವೃದ್ಧರಲ್ಲಿ ಉಸಿರಾಟದ ತೊಂದರೆ ಕೂಡ ಅನುಭವಿಸುತ್ತಾರೆ ಎಂದು ತಜ್ಞರು ಹೇಳುತ್ತಾರೆ. ದೀಪಾವಳಿಗೂ ಮೊದಲು ಹೋಲಿಸಿದರೆ ಪೀಣ್ಯದಲ್ಲಿ ವಾಯು ಮಾಲಿನ್ಯವು ಶೇಕಡಾ 52ರಷ್ಟು ಹೆಚ್ಚಾಗಿದೆ. ಇದಕ್ಕೆ ವಿರುದ್ಧವಾಗಿ ಮೈಸೂರು ರೋಡ್, ಹೊಂಬೇಗೌಡ ನಗರ, ಜಯನಗರ, ಹೆಬ್ಬಾಳ ಮತ್ತು ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ವಾಯು ಗುಣಮಟ್ಟ ಸೂಚಕ ಸುಧಾರಿಸಿದೆ.
ಕಾರಣವೇನು?
ಬೆಂಗಳೂರಿನಲ್ಲಿ ಬೇರೆ ಊರುಗಳಿಂದ ಬಂದು ನೆಲೆಸಿದ್ದವರು ದೀಪಾವಳಿಗಾಗಿ ನಗರವನ್ನು ತೊರೆದಿದ್ದರು. ಹೀಗಾಗಿ ಟ್ರಾಫಿಕ್ ಜಾಮ್ ಕೂಡ ಕಡಿಮೆಯಾಗಿ ಗಾಳಿಯ ಗುಣಮಟ್ಟ ಸುಧಾರಿಸಿದೆ ಎಂದು ತಿಳಿದುಬಂದಿದೆ. ಕೆಲವರು ದೀಪಾವಳಿ ಅಂಗವಾಗಿ ಪಟಾಕಿ ಸಿಡಿಸಿದ್ದರಿಂದ ವಾಯುಮಾಲಿನ್ಯದ ಮಟ್ಟ ತುಸು ಏರಿಕೆ ಕಂಡಿತು. ದೀಪಾವಳಿ ಇದ್ದಿದ್ದರಿಂದ ಕಳೆದ ಶನಿವಾರದಿಂದಲೇ ಬೆಂಗಳೂರು ಖಾಲಿ ಖಾಲಿ ಹೊಡೆಯುತ್ತಿದೆ. ಹೊರ ಜಿಲ್ಲೆ, ಹೊರ ರಾಜ್ಯದ ಮಂದಿಯೆಲ್ಲ ಬೆಂಗಳೂರು ಬಿಟ್ಟು ಹೋಗಿದ್ದಾರೆ. ಇದರಿಂದಾಗಿ ನಗರ ಕೂಡ ಶಾಂತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ನೆಮ್ದಿಯಾಗಿರುವ ಬೆಂಗಳೂರಿನ ವಿಡಿಯೋಗಳು ವೈರಲ್ ಆಗಿವೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications