ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶಕ್ಕೆ ಮಾದರಿ
ಬೆಂಗಳೂರು, ಮಾರ್ಚ್ 23: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದಕ್ಷಿಣ ಭಾರತದಲ್ಲೇ ಎರಡು ರನ್ವೇಗಳಿರುವ ಮೊದಲ ವಿಮಾನ ನಿಲ್ದಾಣ ಎನ್ನುವ ಖ್ಯಾತಿಗೆ ಪಾತ್ರವಾಗಿದೆ.
ಮಾರ್ಚ್ 25 ರಿಂದ ಎರಡೂ ರನ್ವೇ ಬಳಕೆಗೆ ಲಭ್ಯವಾಗಲಿದೆ. 2020 ಜೂನ್ 22ರಿಂದ ಕಾಯಾಚರಣೆ ನಿಲ್ಲಿಸಲಾಗಿರುವ ಉತ್ತರ ರನ್ವೇಯ ಕಾಮಗಾರಿ ಪ್ರಗತಿಯಲ್ಲಿದೆ.
ರನ್ವೇಗೆ ಹೊಸದಾಗಿ ಮೇಲ್ಮೈ ಹಾಸು ಹಾಕುವ ಜತೆಗೆ ಎಲ್ಇಡಿ ರನ್ವೇ ಸೆಂಟರ್ ಲೈಟ್ಗಳು ಮತ್ತು ರನ್ವೇ ಕೊನೆಯ ಲೈಟ್ಗಳ್ನು ಅಳವಡಿಸುವುದು ನವೀಕರಣ ಕಾರ್ಯದಲ್ಲಿಸೇರಿವೆ. ಕಡಿಮೆ ದೃಶ್ಯ ಸಾಧ್ಯತೆ ಮತ್ತು ಪ್ರತಿಕೂಲ ಹವಾಮಾನ ಸ್ಥಿತಿಗಳಲ್ಲಿಕಾರ್ಯಾಚರಣೆ ನಡೆಸಲು ಅಗತ್ಯ ಸಡಿಲತೆಯನ್ನು ಈ ವಿಸ್ತರಣಾ ಕಾರ್ಯಗಳು ಸಾದರಪಡಿಸಲಿವೆ .

ವಿಮಾನ ನಿಲ್ದಾಣ ಪ್ರದೇಶದಲ್ಲಿಹವಾಮಾನ ಸ್ಥಿತಿ ಅಧ್ಯಯನ ನಡೆಸಲು ಜವಾಹರ್ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಜತೆಗೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ 2019ರಲ್ಲಿ ಒಪ್ಪಂದ ಮಾಡಿಕೊಂಡಿತ್ತು.
ವಿಮಾನ ನಿಲ್ದಾಣ ಪ್ರದೇಶದ ಮೇಲೆ ವಿಕಿರಣಾತ್ಮಕ ಮಂಜು ಕವಿಯುವುದನ್ನು ಮುಂಚಿತವಾಗಿ ತಿಳಿಸುವ ಸಾಮರ್ಥ್ಯವಿರುವ ಸಂಖ್ಯಾತ್ಮಕ ಅನುಕರಣಾ ಉಪಕರಣವನ್ನು ಅಭಿವೃದ್ಧಿಪಡಿಸಲು ಈ 4 ವರ್ಷಗಳ ಅಧ್ಯಯನ ಪ್ರಸ್ತುತ ನಡೆಯುತ್ತಿದೆ.
ಇದರೊಂದಿಗೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ದೇಶದಲ್ಲಿ ಕ್ಯಾಟ್-3ಬಿ ರನ್ವೇ ಹೊಂದಿರುವ ದಕ್ಷಿಣ ಭಾರತದ ಏಕೈಕ ಹಾಗೂ ದೇಶದ 6ನೇ ವಿಮಾನ ನಿಲ್ದಾಣವಾಗಿದೆ.
ಪರೀಕ್ಷಾರ್ಥ ಹಾಗೂ ಮಾಪನಾಂಕ ನಿರ್ಣಯದ ಹಾರಾಟಗಳು ಮತ್ತು ಸಾಮಾನ್ಯ ನಾಗರಿಕ ವಿಮಾನಯಾನ ಪ್ರಾಧಿಕಾರ(ಡಿಜಿಸಿಎ)ದಿಂದ ನಿರೀಕ್ಷಣೆಗಳ ಯಶಸ್ವಿ ಮುಕ್ತಾಯದ ನಂತರ ರನ್ವೇ ಕಾರ್ಯಾಚರಣೆ ನಡೆಸಲು ನಿಯಂತ್ರಕ ಒಪ್ಪಿಗೆಗಳನ್ನು ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ಪಡೆದುಕೊಂಡಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ












Click it and Unblock the Notifications