ಬೆಂಗಳೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕ ಸ್ನೇಹಿ ವಿಶಿಷ್ಟ ಸೌಲಭ್ಯ ಪರಿಚಯ
ಬೆಂಗಳೂರು, ಡಿಸೆಂಬರ್ 06: ವಿಶ್ವದಲ್ಲಿ ಅತೀ ಹೆಚ್ಚು ಪ್ರಯಾಣಿಕರಿಗೆ ಸೇವೆ ನೀಡುವ ಮೂನರೇ ಏರ್ಪೋರ್ಟ್ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ಪ್ರಯಾಣಿಕರಿಗಾಗಿ ವಿಶೇಷ ಸೌಲಭ್ಯ, ಉಪಕ್ರಮ ತರುತ್ತಿದೆ. ಇದೀಗ ವಿಶೇಷ ಚೇತನರಿಗೆ ಸುಲಭವಾಗಿ ವಿಮಾನ ಏರಲು ಸಹಕಾರಿಯಾಗುವಂತಹ ಸೌಕರ್ಯವನ್ನು ಭಾರತದಲ್ಲೇ ಮೊದಲ ಬಾರಿಗೆ 'ಮೊಬಿಲಿಟಿ ಅಸಿಸ್ಟ್' ಸಾಧನ ಸೌಲಭ್ಯವನ್ನು ಬೆಂಗಳೂರಿನ ಕೆಐಎ ನಲ್ಲಿ ಪರಿಚಯಿಸಲಾಗಿದೆ.
ಕೇವಲ ಅಂಗವಿಕಲರು ಮಾತ್ರವಲ್ಲದೇ ಮಕ್ಕಳು ಸೇರಿದಂತೆ ಪ್ರಯಾಣದ ವೇಳೆ ಹೆಚ್ಚಿನ ಸಹಾಯದ ಅಗತ್ಯವಿರುವವರು, ಕಡಿಮೆ ಚಲನಶೀಲತೆ ಹೊಂದಿರುವವರಿಗೆ ಸುರಕ್ಷಿತ, ಸುಗಮವಾಗಿ ವಿಮಾನದ ಬೋರ್ಡಿಂಗ್ ಮಾಡಲು 'ಮೊಬಿಲಿಟಿ ಅಸಿಸ್ಟ್' ಅನುಕೂಲವಾಗುತ್ತದೆ. ವಿಮಾನದಿಂದ ಇಳಿಯಲು ಅತ್ಯಾಧುನಿಕವಾಗಿ ವ್ಯವಸ್ಥೆಯು ಇದಾಗಿದೆ. ಎಚ್ಸಿಜಿ ಸಂಸ್ಥಾಪಕ ಡಾ. ಬಿ.ಎಸ್. ಅಜಯ್ಕುಮಾರ್ ಅವರು ತಮ್ಮ ಮಗ ಆದರ್ಶ್ ಅಜಯ್ಕುಮಾರ್ ಅವರ ಸ್ಮರಣಾರ್ಥ ಈ ಸಾಧನ ಏರ್ಪೋರ್ಟ್ಗೆ ನೀಡಿದ್ದಾರೆ.

ಡಚೆನ್ ಸ್ನಾಯು ಕ್ಷೀಣತೆ ಹೊಂದಿದ್ದ ಹಾಗೂ ವಿದ್ಯುತ್ ವೀಲ್ಚೇರ್ ಬಳಸುತ್ತಿದ್ದ ಆದರ್ಶ್, ವಿಮಾನ ನಿಲ್ದಾಣಗಳಲ್ಲಿ ಸೂಕ್ತ ರೀತಿಯಲ್ಲಿ ಇಳಿಯಲು ಹಾಗೂ ತಾನು ತಲುಪಬೇಕಾದ ಸ್ಥಳಕ್ಕೆ ತೆರಳಲು ಸಾಧ್ಯವಾಗದೇ ದೈಹಿಕ ಅಸ್ವಸ್ಥತೆ ಮತ್ತು ಭಾವನಾತ್ಮಕ ಒತ್ತಡ ಅನುಭವಿಸಿದ್ದರು. ಇವರ ಈ ವೈಯಕ್ತಿಕ ಅನುಭವವೇ ಇತರರಿಗೆ ನೆರವಾಗಲು ಸ್ಫೂರ್ತಿಯಾಯಿತು. ಇದೀಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಡಿಮೆ ಚಲನಶೀಲತೆ ಹೊಂದಿರುವ ಪ್ರಯಾಣಿಕರು ಸುಲಭವಾಗಿ ಈ ಅತ್ಯಾಧುನಿಕ ಉಪಕರಣದಿಂದ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸುಲಭವಾಗಿ ತೆರಳಬಹುದಾಗಿದೆ.
ಮೊಬಿಲಿಟಿ ಅಸಿಸ್ಟ್ ಸಾಧನವು ವಿಮಾನದ ಬೋರ್ಡಿಂಗ್, ಡಿಪ್ಲೇನಿಂಗ್ ಅಥವಾ ಟರ್ಮಿನಲ್ಗಳ ನಡುವಿನ ಪ್ರಯಾಣದ ಸಮಯದಲ್ಲಿ ವೀಲ್ಚೇರ್ನಿಂದ ನೇರವಾಗಿ ಮಕ್ಕಳು ಮತ್ತು ನಡೆದುಕೊಂಡು ಹೋಗಲು ಆಗದವರು ಬಳಸಬಹುದು. ಇದು ಯಂತ್ರದಂತೆ ಕೆಲಸ ಮಾಡುತ್ತದೆ. ಬೋರ್ಡಿಂಗ್ಗೆ ಪ್ರಯಾಣಿಕರ ಸಾಗಾಣೆಗೆ ಸಹಾಯಕಾರಿಯಾಗಿದೆ. ದೈಹಿಕ ಒತ್ತಡ ಕಡಿಮೆ ಮಾಡುವ ಜೊತೆಗೆ, ಅಪಾಯವನ್ನು ಸಹ ಕಡಿಮೆ ಮಾಡುತ್ತದೆ.
ನಾವು ಪ್ರಯಾಣ ಮಾಡುವಾಗ ಮಗನಿಗೆ ಇಂತಹ ಸೂಕ್ತ ಸೌಲಭ್ಯಗಳಿಲ್ಲದೇ ನನ್ನ ಮಗ ಆದರ್ಶ್ ಅನಾನುಕೂಲತೆ ಅನುಭವಿಸಿದ್ದ. ಆ ನೋವು ಅರಿತು ಏರ್ಪೋರ್ಟ್ಗೆ ಮೊಬಿಲಿಟಿ ಅಸಿಸ್ಟ್ ಕೊಡುಗೆಯಾಗಿ ನೀಡಿದ್ದೇನೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೇ ಭಾರತದಾದ್ಯಂತ ವಿಮಾನ ನಿಲ್ದಾಣಗಳು ಅಳವಡಿಸಬಹುದಾದ ಉತ್ತಮ ಸೌಕರ್ಯವಾಗಿದೆ ಎಂದು ಅಜಯ್ಕುಮಾರ್ ಹೇಳಿದರು. BIAL ಸದಸ್ಯರು ಈ ಸೌಕರ್ಯ ಕಾರ್ಯ ನಿರ್ವಹಣೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
BIAL ಎಂಡಿ ಮತ್ತು ಸಿಇಒ ಹರಿ ಮರಾರ್ ಅವರು, "ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರತಿಯೊಬ್ಬರಿಗೂ ಸಮಾನ ಸೌಕರ್ಯ, ಸೌಲಭ್ಯ ನೀಡುವುದು ನಮ್ಮ ಉದ್ದೇಶವಾಗಿದೆ. ಮೊಬಿಲಿಟಿ ಅಸಿಸ್ಟ್ ಪರಿಚಯದ ಮೂಲಕ ವಿಶೇಷ ಚೇತನರು ಸಹ ಇನ್ನಷ್ಟು ಸುಲಲತವಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲು ಸಹಕಾರಿಯಾಗಿದೆ. ಇದು ಸಹ ಪ್ರಯಾಣಿಕರಿಗೆ ಮೂಲ ಸೌಕರ್ಯವಾಗಿ ಸೇವೆ ನೀಡುತ್ತದೆ ಎಂದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications